ಡ್ರೀಮ್‌ ಗರ್ಲ್ ಅಮೃತಾ


Team Udayavani, Jun 23, 2017, 2:51 PM IST

aMRUTHA-RAO.jpg

ಚಿತ್ರರಂಗಕ್ಕೆ ಬಂದ ಒಂದೇ ವರ್ಷದಲ್ಲಿ ತುಂಬಾ ಬಿಝಿಯಾದ ನಾಯಕಿಯರ ಪಟ್ಟಿಯಲ್ಲಿ ಅಮೃತಾ ಸೇರುತ್ತಾರೆ. ಸದ್ಯ ಅಮೃತಾ ಕೈಯಲ್ಲಿ ಐದು ಸಿನಿಮಾಗಳಿವೆ. “ಉಸಿರೇ ಉಸಿರೇ’, “ಡ್ರೀಮ್‌ ಗರ್ಲ್’, “ನನ್ಮಗಳೇ ಹೀರೋಯಿನ್‌’, “ಮಾಲ್ಗುಡಿ ಸ್ಟೇಷನ್‌’ ಹಾಗೂ ನಾಗೇಂದ್ರ ಪ್ರಸಾದ್‌ ನಿರ್ದೇಶನದ ಸಿನಿಮಾವೊಂದರಲ್ಲೂ ಅಮೃತಾ ನಟಿಸುತ್ತಿದ್ದಾರೆ. ಯಾರು ಈ ಅಮೃತಾ ಎಂದರೆ ಕಳೆದ ವರ್ಷ ತೆರೆಕಂಡ “ಮಂಡ್ಯ ಟು ಮುಂಬೈ’ ಚಿತ್ರ ತೋರಿಸಬೇಕು. ಆ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟವರು ಅಮೃತಾ.

ಅಂದಹಾಗೆ, ಅಮೃತಾ ಉಡುಪಿಯ ಹುಡುಗಿ. ಆದರೆ, ಬೆಳೆದಿದ್ದು, ಓದಿದ್ದೆಲ್ಲಾ ಬೆಂಗಳೂರು. ಸಹಜವಾಗಿಯೇ ಸಿನಿಮಾ ಆಸಕ್ತಿ ಅಮೃತಾಗೆ ಇತ್ತು. ಆದರೆ, ಸಿನಿಮಾ ಮಾಡಲೇಬೇಕೆಂಬ ಅತ್ಯುತ್ಸಾಹ ಮಾತ್ರ ಇರಲಿಲ್ಲ. ಏಕೆಂದರೆ, ಅಮೃತಾ ಭರತನಾಟ್ಯದಲ್ಲಿ ಖುಷಿ ಕಾಣುತ್ತಿದ್ದರು. ಹೌದು, ಅಮೃತಾ ರಾವ್‌ ಮೂಲತಃ ಭರತನಾಟ್ಯ ಕಲಾವಿದೆ. ಸಾಕಷ್ಟು ಶೋಗಳನ್ನು ಕೂಡಾ ಕೊಟ್ಟಿದ್ದಾರೆ. ಭರತನಾಟ್ಯ ಮಾಡಿಕೊಂಡು ಖುಷಿಯಾಗಿದ್ದ ಅಮೃತಾಗೆ ಸಿನಿಮಾ ಸಿಕ್ಕಿದ್ದು ಕೂಡಾ ಅಚಾನಕ್‌ ಆಗಿ ಎಂದರೆ ನೀವು ನಂಬಲೇಬೇಕು. ಅದು ದೇವಸ್ಥಾನವೊಂದರಲ್ಲಿ. ದೇವಸ್ಥಾನದಲ್ಲಿದ್ದ ಅಮೃತಾ ಅವರನ್ನು ನೋಡಿದ “ಮಂಡ್ಯ ಟು ಮುಂಬೈ’ ಚಿತ್ರದ ನಿರ್ದೇಶಕರು ಸಿನಿಮಾ ಆಫ‌ರ್‌ ಕೊಟ್ಟರಂತೆ.

ಪಾತ್ರ ಚೆನ್ನಾಗಿದೆ ಎಂದು ಒಪ್ಪಿಕೊಂಡ ಅಮೃತಾ ಈಗ ಬಿಝಿಯಾಗಿದ್ದಾರೆ. ಅವಕಾಶ ಬಂತೆಂಬ ಕಾರಣಕ್ಕೆ ಐದು ಸಿನಿಮಾಗಳನ್ನು ಅಮೃತಾ ಒಪ್ಪಿಕೊಂಡರಾ ಅಥವಾ ಪಾತ್ರಕ್ಕಾಗಿಯೇ ಎಂದು ನೀವು ಕೇಳಬಹುದು. ಆದರೆ, ಅಮೃತಾ ಪಾತ್ರ ನೋಡಿ ಖುಷಿಯಾಗಿ ಸಿನಿಮಾ ಒಪ್ಪಿಕೊಂಡೆ ಎನ್ನುತ್ತಾರೆ. “ನಾನು ಸಿನಿಮಾ ಮೇಲೆ ಸಿನಿಮಾ ಮಾಡಬೇಕು, ಕೈ ತುಂಬಾ ಸಿನಿಮಾ ಇರಬೇಕೆಂಬ ಕಾರಣಕ್ಕೆ ಬಂದ ಅವಕಾಶಗಳನ್ನು ಒಪ್ಪಿಕೊಂಡಿಲ್ಲ. ನನಗೆ ಸಾಕಷ್ಟು ಅವಕಾಶಗಳು ಬಂದುವು. ಅದರಲ್ಲಿ ನಾನು ಒಪ್ಪಿಕೊಂಡಿದ್ದು ಐದು ಸಿನಿಮಾ. ಆ ಐದು ಸಿನಿಮಾಗಳನ್ನು ಒಪ್ಪಿಕೊಳ್ಳಲು ಕಾರಣ ಅದರಲ್ಲಿನ ಪಾತ್ರ. ಐದಕ್ಕೆ ಐದು ಸಿನಿಮಾಗಳಲ್ಲಿ ವಿಭಿನ್ನವಾದ, ಹೊಸ ಬಗೆಯ ಪಾತ್ರ ಸಿಕ್ಕಿದೆ. ಈಗಷ್ಟೇ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿರುವ ನಾನು ನನ್ನ ನಟನಾ ಸಾಮರ್ಥ್ಯವನ್ನು ಸಾಬೀತುಪಡಿಸಬೇಕು. ಆ ನಿಟ್ಟಿನಲ್ಲಿ ಈ ಪಾತ್ರಗಳು ನನಗೆ ಸಹಾಯವಾಗುತ್ತವೆ ಎಂಬ ವಿಶ್ವಾಸವಿದೆ’ ಎನ್ನುತ್ತಾರೆ.

ಅಂದಹಾಗೆ, ಅಮೃತಾಗೆ ಒಂದು ಆಸೆ ಇದೆ. ಅದು ನಾಯಕಿ ಪ್ರಧಾನ ಚಿತ್ರಗಳಲ್ಲಿ ನಟಿಸಬೇಕೆಂದು. ನಾಯಕಿ ಪ್ರಧಾನ
ಚಿತ್ರಗಳಲ್ಲಾದರೆ ತಮ್ಮ ಪ್ರತಿಭೆಗೆ, ನಟನೆಗೆ ಹೆಚ್ಚು ಸ್ಕೋಪ್‌ ಇರುತ್ತದೆಂಬ ಕಾರಣಕ್ಕೆ ಆ ಆಸೆಯಂತೆ. 

ರವಿ ರೈ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.