ರಸ್ತೆಯಲ್ಲೇ ಅಡುಗೆ ಮಾಡಿದ ಬೀದಿ ವ್ಯಾಪಾರಿಗಳ ವಾಗ್ವಾದ


Team Udayavani, Feb 18, 2017, 3:26 PM IST

gul3.jpg

ಕಲಬುರಗಿ: ಉತ್ಛ ನ್ಯಾಯಾಲಯ ನೀಡಿದ ಆದೇಶದಂತೆ ಇನ್ನು 10 ದಿನಗಳಲ್ಲಿ ಬೀದಿ ವ್ಯಾಪಾರಿಗಳಿಗೆ ಸ್ಥಳದ ವ್ಯವಸ್ಥೆ ಹಾಗೂ ಮೂಲ ಸೌಲಭ್ಯ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿ ರಾಜ್ಯ ಬೀದಿ ವ್ಯಾಪಾರಿಗಳ ಸಂಘದ ನೇತೃತ್ವದಲ್ಲಿ ಬೀದಿ ವ್ಯಾಪಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ರಸ್ತೆಯಲ್ಲಿ ಅಡುಗೆ ಮಾಡಿ ಪ್ರತಿಭಟನೆಗೆ ಮುಂದಾದಾಗ ಪೊಲೀಸರು ಅಡ್ಡಿಪಡಿಸಿದ್ದರಿಂದ ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯ ಮಾತಿನ ಚಕಮಕಿ ನಡೆಯಿತು. 

ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ನ್ಯಾಯಾಲಯದ ಆದೇಶ ಜಾರಿ ಮಾಡಲು ಜಿಲ್ಲಾಧಿಕಾರಿಗಳು ಹಾಗೂ ಪಾಲಿಕೆ ಆಯುಕ್ತರು ತಮಗೆ ಸಂಬಂಧವಿಲ್ಲ ಎಂದು ಹೇಳಿ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ನಗರದ ಚೌಪಾಟಿ ಸ್ಥಳದಲ್ಲಿ ಕಳೆದ 20 ವರ್ಷದಿಂದ ವ್ಯಾಪಾರ ಮಾಡುತ್ತಿದ್ದ ಸುಮಾರು 200 ಜನರನ್ನು ಜಿಲ್ಲಾಡಳಿತ ಕೆಲ ತಿಂಗಳ ಹಿಂದೆ ಯಾವುದೇ ಮುನ್ಸೂಚನೆ ನೀಡದೇ ತೆರವುಗೊಳಿಸಿದೆ.

ಈ ಎಲ್ಲ ವ್ಯಾಪಾರಿಗಳು ಸಂತ್ರಸ್ಥರಾಗಿದ್ದಾರೆ. ಏಳು ವಲಯಗಳನ್ನು ನಿರ್ಮಿಸಿ ವ್ಯಾಪಾರ ಮಾಡಲು ಅನುಕೂಲ ಕಲ್ಪಿಸುವ ಭರವಸೆ ನೀಡಿದ್ದರೂ ಆ ಕಾರ್ಯವೂ ಆಗಿಲ್ಲ. ಟಿವಿಸಿ ಸಮಿತಿ ರಚಿಸಿ ವರ್ಷವಾದರೂ ಒಂದೂ ಮಾಸಿಕ ಸಭೆ ಕರೆದಿಲ್ಲ. ಪಾಲಿಕೆ ಅಧಿಕಾರಿಗಳು ಬೀದಿ ವ್ಯಾಪಾರಿಗಳನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು. ಕೇಂದ್ರ ಸರ್ಕಾರದ ಹಲವು ಯೋಜನೆಗಳಿದ್ದರೂ ಪಾಲಿಕೆ ಬೀದಿ ವ್ಯಾಪಾರಿಗಳಿಗೆ ಯಾವುದೇ ಸೌಲಭ್ಯ ನೀಡಿಲ್ಲ.

ಪಾಲಿಕೆ ಸಾಮಾನ್ಯ ಸಭೆಯಲ್ಲಿ ವ್ಯಾಪಾರಸ್ಥರಿಗೆ ತಲಾ 25 ಸಾ.ರೂ. ಗಳಂತೆ ಸಹಾಯಧನ ನೀಡುವ ಬಗ್ಗೆ ಒಪ್ಪಿಗೆ ಸೂಚಿಸಿತ್ತು. ಅದೂ ಜಾರಿಯಾಗಿಲ್ಲ ಎಂದರು. ಕಳೆದ ಡಿ.14 ರಂದು ಕಲಬುರಗಿ ಹೈಕೋರ್ಟ್‌ ಪೀಠ ತೀರ್ಪು ನೀಡಿ 150 ಜನರಿಗೆ ಚೌಪಾಟಿ ಜಾಗದಲ್ಲಿಯೇ ವ್ಯವಸ್ಥೆ ಮಾಡಿ, ನಾಲ್ಕು ವಾರದೊಳಗೆ ವ್ಯಾಪಾರಕ್ಕೆ ಅವಕಾಶ ಒದಗಿಸಲು ಸೂಚಿಸಿದೆ. ಆ ಅವಧಿ ಮುಗಿದರೂ ಸಹ ನ್ಯಾಯಾಲಯದ ಆದೇಶಕ್ಕೆ ಅಧಿಕಾರಿಗಳು ಬೆಲೆ ನೀಡಿಲ್ಲ. ಇನ್ನು ಮೇಲಾದರೂ ಸೂಕ್ತ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದರು.

ಸಂಘದ ಸಂಸ್ಥಾಪಕ ಅಮೃತ ಸಿರನೂರ, ರಾಜ್ಯಾಧ್ಯಕ್ಷ ಜಗನ್ನಾಥ ಸೂರ್ಯವಂಶಿ, ರವಿ ಒಂಟಿ, ಶಿವಕುಮಾರ ಭಾಗೋಡಿ, ಸರೂಬಾಯಿ, ಭಾಗಮ್ಮಾ  ಚೌಧರಿ, ಆನಂದ ಸಾಕ್ರೆ, ಚಂದ್ರಶೇಖರ ರೆಡ್ಡಿ, ದತ್ತು ಭಾಸಗಿ, ಸುಭಾಷ ಢರಬಿ ಹಾಗೂ ಇತರರಿದ್ದರು.  

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.