ಸ್ವಾರ್ಥಕ್ಕಾಗಿ ಸಮಾವೇಶ: ಆರೋಪ


Team Udayavani, Feb 18, 2017, 3:35 PM IST

gul4.jpg

ಆಳಂದ: ತಾಲೂಕಿನ ಅಂಗವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪೂರೈಕೆ, ಅವ್ಯವಹಾರ ಹಾಗೂ ಫೆ.1ರಂದು ಪಟ್ಟಣದಲ್ಲಿ ನಡೆದ ಸ್ತ್ರೀ ಶಕ್ತಿ ಸಮಾವೇಶಕ್ಕೆ ಸಂಬಂಧಿಸಿದಂತೆ ಬಿಸಿಯೂಟ ಕೇಂದ್ರಗಳನ್ನು ಬಂದ್‌ ಮಾಡಿ ಅಡುಗೆಯವರು ಭಾಗವಹಿಸಲು ಅನುಮತಿ ನೀಡಿದ ಸಿಡಿಪಿಒ ಅವರನ್ನು ಕೂಡಲೇ ವರ್ಗಾಯಿಸಬೇಕು ಎಂದು ತಾಪಂ ಆಡಳಿತ ಪಕ್ಷದ ಬಿಜೆಪಿ ಸದಸ್ಯರು ಆಗ್ರಹಿಸಿದರು. 

ತಾಪಂ ಕಚೇರಿಯಲ್ಲಿ ತಾಪಂ ಅಧ್ಯಕ್ಷೆ ನಾಗಮ್ಮ ಅಶೋಕ ಗುತ್ತೇದಾರ ನೇತೃತ್ವದಲ್ಲಿ ನಡೆದ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಸಿಡಿಪಿಒ ತುಳಸಾಬಾಯಿ ಮಾನು ವರದಿ ಮಂಡಿಸಿ, ಅಂಗನವಾಡಿಯಲ್ಲಿ ಗುಣಮಟ್ಟದ ಆಹಾರ, ಮಕ್ಕಳಿಗೆ ಸೌಲಭ್ಯ ನೀಡಲಾಗುತ್ತಿದೆ. ಸ್ತ್ರೀ ಶಕ್ತಿ ಸಮಾವೇಶಕ್ಕೆ ತೆರಳಲು ಯಾರಿಗೂ ಆದೇಶಿಸಿಲ್ಲ ಎಂದು ಹೇಳಿದರು. 

ಈ ಹೇಳಿಕೆಗೆ ಕುಪಿತರಾದ ಆಡಳಿತ ಸದಸ್ಯರು ವರ್ಗಾವಣೆಗೆ ಪಟ್ಟು ಹಿಡಿದರು. ಇದರಿಂದಾಗಿ ಪ್ರತಿಪಕ್ಷದ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಸಿಡಿಪಿಒ ಅವರು ಕರ್ತವ್ಯ ಲೋಪ ಎಸಗಿದ್ದಾರೆ. ಖಾಸಗಿ ಕಾರ್ಯಕ್ರಮಗಳಿಗೂ ಭಾಗವಹಿಸಲು ಬಿಸಿಯೂಟ ನೌಕರರಿಗೆ ಆದೇಶ ಹೊರಡಿಸುತ್ತಿದ್ದಾರೆ ಎಂದು ತಾಪಂ ಸದಸ್ಯ ಬಸವರಾಜ ಸಾಣಕ, ಸಂಗೀತಾಬಾಯಿ ರಾಠೊಡ, ಶರಣಬಸಪ್ಪ ಬಿರಾದಾರ ಆಕ್ರೋಶ ವ್ಯಕ್ತಪಡಿಸಿದರು. 

ಬಿಸಿಯೂಟ ಮಹಿಳಾ ಸಿಬ್ಬಂದಿಗಳು ಅಂದು ಅಡುಗೆ ಕೇಂದ್ರಗಳನ್ನು ಬಂದ್‌ಮಾಡಿಕೊಂಡು, ಸಮಾವೇಶದಲ್ಲಿ ಭಾಗವಹಿಸಿದ್ದಾರೆ. ಇದರಿಂದ ಅಂದು ವಿದ್ಯಾರ್ಥಿಗಳಿಗೆ ಬಿಸಿಯೂಟ ಇಲ್ಲ. ಶಾಲೆಗಳಲ್ಲಿಯೂ ಅಂದು ಶಿಕ್ಷಕಿಯರು ಇರಲಿಲ್ಲ. ಸಮಾವೇಶದ ಹೆಸರಿನಲ್ಲಿ ಗೈರಾಗಿದ್ದಾರೆ. ಸ್ತ್ರೀ ಶಕ್ತಿ ಸಮಾವೇಶ ನಡೆಸಲು ವಿರೋಧವಿಲ್ಲ.

ರಜೆಯ ದಿನದಂದು ಹಮ್ಮಿಕೊಂಡಿದ್ದರೆ ಯಾರಿಗೂ ತೊಂದರೆ ಆಗುತ್ತಿರಲಿಲ್ಲ. ಸ್ವಾರ್ಥಕ್ಕಾಗಿ ಇಂಥ ಸಮಾವೇಶ ಹಮ್ಮಿಕೊಂಡಿದ್ದರಿಂದ ತಾಲೂಕಿನ ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ತೊಂದರೆ ಆಗಿದೆ ಎಂದು ಆರೋಪಿಸಿದರು.  ಅಧಿಕಾರಿಗಳು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡುವುದಿಲ್ಲ. ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಬಸವರಾಜ ಸಾಣಕ ಹಾಗೂ ಇತರರು ಹರಿಹಾಯ್ದರು. 

ಆಡಳಿತ ಪಕ್ಷದ ಸದಸ್ಯರ ಹೇಳಿಕೆಯಿಂದ ಕುಪಿತಗೊಂಡ ಪ್ರತಿಪಕ್ಷದ ಸದಸ್ಯ ಸಾತಲಿಂಗಪ್ಪ ಪಾಟೀಲ, ಸುಜಾತಾ ಖೋಬ್ರೆ ಅವರು, ಸ್ತ್ರೀ ಶಕ್ತಿ ಸಮಾವೇಶ ಪûಾತೀತವಾಗಿ ನಡೆದಿದೆ. ಸುಮ್ಮನೆ ಅಧಿಕಾರಿಗಳನ್ನು ಹೊಣೆಮಾಡುವುದು ಸರಿಯಲ್ಲ. ಸ್ತ್ರೀ ಶಕ್ತಿ ಸಮಾವೇಶಕ್ಕೆ ಅಡುಗೆಯವರು ಬಂದಿದ್ದನ್ನೆ ಗುರಿಯಾಗಿಟ್ಟು ಕೇಳುತ್ತಿರಿ, ಆದರೆ ಅಂಗನವಾಡಿಯವರು ನಿತ್ಯ ಶಾಲೆಗೆ ಬರುವುದಿಲ್ಲ ಅದನ್ನು ಕೇಳಬೇಕು.

ತಪ್ಪು ಮಾಡದೆ ಇರುವ ಅಧಿಕಾರಿಗಳಿಗೆ ತಪ್ಪು ಮಾಡಿದ್ದಾರೆ ಎಂದು ತೋರ್ಪಡಿಸಬೇಡಿ. ಇನ್ನುಳಿದ ಸಮಸ್ಯೆ ಇದ್ದರೆ ತಾಕೀತು ಮಾಡಿ ಎಂದು ಎದುರೇಟು ನೀಡಿದರು. ಅಭಿವೃದ್ಧಿ ವಿಷಯಕ್ಕೆ ಸಂಬಂಧಿಸಿದ ಮಾಹಿತಿ ಕೇಳಿಬೇಕು ಎಂದು ಮಧ್ಯ ಪ್ರವೇಶಿಸಿದ ಇಒ ಡಾ| ಸಂಜಯ ರೆಡ್ಡಿ ಅವರು ಸಿಡಿಪಿಒ ಅವರು ಇಲಾಖೆಯ ಅಧಿಕಾರಿಯಾಗಿದ್ದರಿಂದ ಬಿಡುಗಡೆ ಮಾಡುವ ಅಧಿಕಾರ ಇರುವುದಿಲ್ಲ.

ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು. ಇನ್ನಿತರ ಇಲಾಖೆಯ ಅಧಿಕಾರಿಗಳು ವರದಿ  ಮಂಡಿಸಿದರು. ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಭು ಸರಸಂಬಿ, ವ್ಯವಸ್ಥಾಪಕ ಬಸವರಾಜ ಪಾಟೀಲ ತಾಪಂ ಸದಸ್ಯ ಮಹಾದೇವಿ ಚ. ಘಂಟೆ, ಕಮಲಾಬಾಯಿ ನಾಮಣೆ, ಶಿವಪ್ಪ ವಾರಿಕ,  ಶಿವಯೋಗಪ್ಪ ದುರ್ಗದ, ಸಿದ್ಧರಾಮ ವಾಘೊರೆ ಇನ್ನಿತರ ಸದಸ್ಯರು ಹಾಜರಿದ್ದರು.  

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.