ಏನ್ರೋ ನನಗೆ ಘೇರಾವ್ ಹಾಕ್ತೀರಾ;BJP ಪ್ರತಿಭಟನಾಕಾರರಿಗೆ ಡಿಕೆಶಿ ಧಮ್ಕಿ
Team Udayavani, Feb 25, 2017, 1:48 PM IST
ಕಲಬುರಗಿ: ಕಾಂಗ್ರೆಸ್ ಹೈಕಮಾಂಡ್ ಗೆ ಕಪ್ಪ ನೀಡಿರುವ ಡೈರಿಯಲ್ಲಿ ಸಚಿವ ಡಿಕೆಶಿ ಹೆಸರು ಇದ್ದ ಹಿನ್ನೆಲೆಯಲ್ಲಿ ಶನಿವಾರ ಚಿಂಚೊಳ್ಳಿಗೆ ಆಗಮಿಸಿದ್ದ ಡಿಕೆಶಿ ಅವರನ್ನು ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ಆಗ ಸಚಿವ ಡಿಕೆಶಿ ಪ್ರತಿಭಟನಾಕಾರರಿಗೆ ಧಮ್ಕಿ ಹಾಕಿದ ಘಟನೆ ನಡೆಯಿತು.
ಕಲಬುರಗಿ ಚಿಂಚೊಳ್ಳಿ ಪಟ್ಟಣದಲ್ಲಿ ಇಂಧನ ಸಚಿವ ಡಿಕೆಶಿಗೆ ಬಿಜೆಪಿ ಕಾರ್ಯಕರ್ತರು ಘೇರಾವ್ ಹಾಕಿದಾಗ, ಆಕ್ರೋಶಗೊಂಡ ಡಿಕೆಶಿ ಇದೆಲ್ಲಾ ನನ್ನ ಮುಂದೆ ನಡೆಯಲ್ಲ ಎಂದು ಅವಾಜ್ ಹಾಕಿದ್ದರು. ಇಡೀ ರಾಜ್ಯದಲ್ಲಿ ನಿಮ್ಮ ಇಡೀ ಲೀಡರ್ ನನ್ನ ಪ್ರಶ್ನಿಸಲು ಆಗಲ್ಲ, ಇದನ್ನೆಲ್ಲ ಬಿಟ್ಟುಬಿಡಿ ಎಂದು ಹೇಳಿದ್ದರು. ಈ ಸಂದರ್ಭದಲ್ಲಿ ಡಿಕೆಶಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.
ಸಚಿವ ಡಿಕೆಶಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು. ಚಿಂಚೊಳ್ಳಿಯಲ್ಲಿ ವಿವಾಹ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು