ಮಹಿಳೆಯರು ಪುರುಷರಿಗೆ ಸರಿಸಮಾನ: ನೀಲಾ


Team Udayavani, Mar 25, 2017, 3:17 PM IST

gul7.jpg

ಕಲಬುರಗಿ: ಮಹಿಳೆಯರು ಇಂದು ಸೇವಾ ಕ್ಷೇತ್ರದಲ್ಲೂ ಪುರುಷರಿಗೆ ಸಮಾನಾಗಿ ಕಾಣಿಸಿಕೊಳ್ಳುತ್ತಿರುವುದು ಸಮಾನತೆ ಸಂಕೇತವನ್ನು ಮತ್ತೂಮ್ಮೆ ಸಾಬೀತು ಪಡಿಸುತ್ತಿದೆ ಎಂದು ಜನಾವಾದಿ ಮಹಿಳಾ ಸಂಘಟನೆ ರಾಜ್ಯ ಉಪಾಧ್ಯಕ್ಷೆ ಹಾಗೂ ಸಾಹಿತ್ಯ ಅಕಾಡೆಮಿ ಸದಸ್ಯೆ ಕೆ. ನೀಲಾ ಹೇಳಿದರು. 

ಗುಲಬರ್ಗಾ ವಿಶ್ವ ವಿದ್ಯಾಲಯದ ಅಂಬೇಡ್ಕರ್‌ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬಾಬಾ ಸಾಹೇಬ ಅಂಬೇಡ್ಕರ್‌ ಅವರ 125ನೇ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ಕೆಲಸ ಮಾಡದೇ ಇರುವ ಕ್ಷೇತ್ರಗಳೇ ಉಳಿದಿಲ್ಲ.

ಆದರೂ ಸಮಾನತೆಯ ವಿಚಾರದಲ್ಲಿ ಇನ್ನೂ ಸಮಾಜದಲ್ಲಿ ತಾರತಮ್ಯವಿದೆ. ಭಾಷಣಗಳಲ್ಲಿ, ಬರಹಗಳಲ್ಲಿ ಸಮಾನತೆ ಕಾಣುವ ಮಹಿಳೆ ವಾಸ್ತವದಲ್ಲಿ ಸಮಾನತೆಗಾಗಿ ಹೋರಾಟ ಮಾಡಬೇಕು. ತನ್ನ ಸಾಮರ್ಥ್ಯ ಸಾಬೀತು ಮಾಡಬೇಕಾದ ಅನಿವಾರ್ಯತೆಯೂ ಇದೆ ಎಂದು ಕಳವಳ ವ್ಯಕ್ತಪಡಿಸಿದರು. 

ಬಹುತೇಕ ಮಹಿಳಾ ವಿಚಾರವಾದಿಗಳು, ಹೋರಾಟಗಾರರು, ಪ್ರಗತಿಪರ ಚಿಂತಕರು ಅಂಬೇಡ್ಕರ್‌ ಅವರನ್ನು ಓದಿದ್ದರೂ, ಅವರ ವಿಚಾರಗಳನ್ನು ಆಚರಣೆಯಲ್ಲಿ ತರಲು ಹಿಂದೇಟು ಹಾಕುತ್ತಾರೆ. ಆದ್ದರಿಂದ ಅಂತಹದೊಂದು ವಿವೇಚನಾ ರಹಿತ ಆಲೋಚನೆಯಿಂದ ಹೊರ ಬರಬೇಕು ಎಂದರು. 

ಕೇಂದ್ರೀಯ ವಿವಿ ಕನ್ನಡ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ಅಪ್ಪುಗೆರೆ ಸೋಮಶೇಖರ ಮಾತನಾಡಿ, ಇವತ್ತಿನ ನಮ್ಮ ಯುವಕರು ಮಾಯದ ಹಾಗೂ ಅತಿರೇಕದ ಮಾತುಗಳಿಗೆ ಒಳಗಾಗಿ ಜಾತಿ, ಕೋಮುವಾದದ ಬೆನ್ನು ಹತ್ತುತ್ತಿದ್ದಾರೆ. ಇದರಿಂದ ವಿನಾಶವೇ ಹೊರತು ಅಭಿವೃದ್ಧಿ ಮತ್ತು ಸಮಾಜ ರಕ್ಷಣೆ ಮಾತೆಲ್ಲವೂ ಸುಳ್ಳು.

ಅಂಬೇಡ್ಕರ್‌ ಬರೆದ ಮೂರು ಮುಖ್ಯ ಪುಸ್ತಕಗಳಾದ ಪ್ರಾಚೀನ ಭಾರತದ ಇತಿಹಾಸ, ಜಾತಿ ವಿನಾಶ ಮತ್ತು ಸ್ಟೇಟ್ಸ್‌ ಆ್ಯಂಡ್‌ ಮೈನಾರಿಟಿ ಇಂದಿನ ಯುವಕರಿಗೆ ಓದಲು ದೊರಕುವಂತೆ ಮಾಡುವುದು ನಮ್ಮ ಕೆಲಸವಾಗಿಬೇಕಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಗುವಿವಿ ಕುಲಪತಿ ಪ್ರೊ| ಎಸ್‌.ಆರ್‌. ನಿರಂಜನ್‌ ಮಾತನಾಡಿ, ಬಹಳಷ್ಟು ವಿದ್ಯಾರ್ಥಿಗಳು ಕೇವಲ ಪ್ರಮಾಣ ಪತ್ರಗಳಿಗಾಗಿ ಎನ್‌ಎಸ್‌ಎಸ್‌ ಸೇರುವುದು ಮಾಡುತ್ತಿದ್ದಾರೆ. 

ಹೀಗೆ ಮಾಡುವುದರಿಂದ ಕೇವಲ ಒಂದು ಪ್ರಮಾಣ ಪತ್ರವನ್ನು ಪಡೆಯಬಹುದಾಗಿದೆ. ಆದರೆ, ಜೀವನಕ್ಕೆ ಬೇಕಾಗಿರುವ ಅಗತ್ಯ ಅನುಭವ ಮತ್ತು ತಿಳಿವಳಿಕೆ ಸಂಪಾದಿಸಿಕೊಳ್ಳಲು ಆಗುವುದಿಲ್ಲ. ಆದ್ದರಿಂದ ಪ್ರಮಾಣ ಪತ್ರಕ್ಕಾಗಿ ಸ್ವಯಂ ಸೇವಕರಾಗುವುದಕ್ಕಿಂತ ಜೀವನದಲ್ಲಿ ಸಾಧನೆ ಮತ್ತು ಸಮಸ್ಯೆಗಳ ಪರಿಹಾರಕ್ಕಾಗಿ ಸೇವೆ ಮಾಡುವುದನ್ನು ಕಲಿಯಬೇಕು ಎಂದು ಹೇಳಿದರು.

ಗುವಿವಿ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜಕ ಪ್ರೊ| ರಮೇಶ ಲಂಡನಕರ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಲಸಚಿವ ಪ್ರೊ| ದಯಾನಂದ ಅಗಸರ್‌, ಸಿಂಡಿಕೇಟ್‌ ಸದಸ್ಯ ಇಶ್ವರ್‌ ಇಂಗಿನ್‌, ಸತೀಸ ಅಲ್ಲೊಳ್ಳಿ, ನಾಗೇಶ ಕೊಳ್ಳಿ ಹಾಜರಿದ್ದರು. ಸಂಶೋಧನಾ ವಿದ್ಯಾರ್ಥಿನಿ ಅಮರವಾಣಿ ಕಣಜೀಕರ್‌ ನಿರೂಪಿಸಿದರು. ಅರುಣಾ ಹೂಗಾರ ವಂದಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.