ಅನುದಾನಕ್ಕೆ ಆಗ್ರಹಿಸಿ ಎಚ್‌ಕೆಆರ್‌ಡಿಬಿಗೆ ಬೀಗ ಹಾಕಲು ಯತ್ನ


Team Udayavani, Mar 26, 2017, 2:44 PM IST

gul5.jpg

ಕಲಬುರಗಿ: ಹೈಕ ವ್ಯಾಪ್ತಿಯ ಖಾಸಗಿ ಶಾಲಾ, ಕಾಲೇಜುಗಳಿಗೆ ವೇತನುದಾನ ಮತ್ತು ಮೂಲಭೂತ ಸೌಕರ್ಯಗಳಿಗೆ ವಿಶೇಷ ಅನುದಾನ ನೀಡುವಂತೆ ಆಗ್ರಹಿಸಿ ಶನಿವಾರ ಹೈಕದ ಆರು ಜಿಲ್ಲೆಯ ಶಾಲಾ ಮಂಡಳಿ ಸದಸ್ಯರು ಎಚ್‌ಕೆಆರ್‌ಡಿಬಿ ಕಚೇರಿಗೆ ಬೀಗ ಜಡಿಯಲು ಯತ್ನಿಸಿದರು.

ಆಗ ಪೊಲೀಸರು ಈ ಪ್ರಯತ್ನಕ್ಕೆ ತಡೆಯೊಡ್ಡಿದರು. ಈ ವೇಳೆ ಆಕ್ರೋಶಗೊಂಡ ಸದಸ್ಯರು, ಕಚೇರಿಯ ಮುಂಭಾಗದಲ್ಲಿಯೇ ಎರಡು ಗಂಟೆಗಳ ಕಾಲ ಧರಣಿ ನಡೆಸಿದರು. ಸರಕಾರದ ನಿರ್ಲಕ್ಷ ಖಂಡಿಸಿ ವಿವಿಧ ಘೋಷಣೆ ಕೂಗಿದರು. ಪ್ರತಿಭಟನೆ ವೇಳೆ ಮಂಡಳಿ ಅಧಿಕಾರಿ ಮುಖೇನ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಮನವಿಯಲ್ಲಿ 371(ಜೆ)ನೇ ಕಲಂನಡಿ 5 ರಿಂದ 50 ಲಕ್ಷ ರೂ. ಬಿಡುಗಡೆ ಮಾಡಬೇಕೆಂದು ಒತ್ತಾಯಿಸಲಾಯಿತು. ಹೈದ್ರಾಬಾದ ಕರ್ನಾಟಕ ವಿಶೇಷ ಕೋಶ ಸರ್ಕಾರದ ಜಂಟಿ ಕಾರ್ಯದರ್ಶಿ ಕೆ.ಎಲ್‌. ಲೋಕನಾಥ ಈ ಕುರಿತು ಆದೇಶ ನೀಡಿದ್ದರೂ, ಅನುದಾನ ಇನ್ನೂ ಬಿಡುಗಡೆ ಆಗಿಲ್ಲ. ಈಗಾಗಲೇ ಅನೇಕ ಬಾರಿ ಬೇಡಿಕೆಗಳ ಕುರಿತು ಮನವರಿಕೆ ಮಾಡಿದರೂ ಸ್ಪಂದಿಸಿಲ್ಲ. 

ಕೊನೆಯ ಹಂತವಾಗಿ ಇತ್ತೀಚೆಗೆ ಬೆಂಗಳೂರಿಗೆ ನಿಯೋಗ ತೆರಳಿ 371(ಜೆ) ಅನುಷ್ಠಾನ ಸಮಿತಿಯ ಅಧ್ಯಕ್ಷರಿಗೆ, ಹೈದ್ರಾಬಾದ ಕರ್ನಾಟಕ ಭಾಗದ ಸಚಿವರಿಗೆ, ಶಾಸಕರಿಗೆ ಹಾಗೂ ವಿಶೇಷ ಕೋಶದ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿತ್ತು.

ಇದಕ್ಕೂ ಸ್ಪಂದಿಸದೇ ಇದ್ದುದರಿಂದ ಹೋರಾಟ ಅನಿವಾರ್ಯವಾಯಿತು ಎಂದು ಈಶಾನ್ಯ ವಲಯದ ಶಿಕ್ಷಕರ ವೇದಿಕೆ ಅಧ್ಯಕ್ಷ ಎಂ.ಬಿ. ಅಂಬಲಗಿ ಹೇಳಿದರು. ಅನುದಾನ ರಹಿತ ಶಾಲಾ, ಕಾಲೇಜುಗಳಲ್ಲಿ ಓದುತ್ತಿರುವ ಮಕ್ಕಳಿಗೆ ಉಚಿತವಾಗಿ ಬಿಸಿಯೂಟ, ಸಮವಸ್ತ್ರ, ಸೈಕಲ್‌, ಬೂಟ್‌, ಸಾಕ್ಸ್‌ ಮುಂತಾದವುಗಳನ್ನು ಒದಗಿಸುವಂತೆ, 

ಅನುದಾನ ರಹಿತ ಶಾಲಾ ಕಾಲೇಜುಗಳಲ್ಲಿ ಓದುತ್ತಿರುವ ಪರಿಶಿಷ್ಟರು, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವಂತೆ, ಶೈಕ್ಷಣಿಕ ಉದ್ದೇಶಕ್ಕಾಗಿ ಬಳಕೆಯಾಗುವ ಭೂಮಿಯನ್ನು ಉಚಿತವಾಗಿ ನೋಂದಣಿ ಮಾಡುವಂತೆ ಹಾಗೂ ಉಚಿತವಾಗಿ ಎನ್‌ಎ ಮಾಡುವಂತೆ ಅವರು ಒತ್ತಾಯಿಸಿದರು. 

ಹೋರಾಟದ ಸ್ಥಳಕ್ಕೆ ಆಗಮಿಸಿದ ಮಂಡಳಿಯ ಮಹಿಳಾ ಅಧಿಧಿಕಾರಿ ಬೇಡಿಕೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು. ಲಿಖೀತ ಭರವಸೆ ನೀಡಲು ಪ್ರತಿಭಟನೆಕಾರರು  ಒತ್ತಾಯಿಸಿದಾಗ, ಅಧಿಧಿಕಾರಿಗಳು ಒಂದು ದಿನ ಕಾಲಾವಕಾಶ ಕೊಡಿ, ಲಿಖೀತವಾಗಿ ಭರವಸೆ ನೀಡಲಾಗುವುದು ಎಂದು ಆಶ್ವಾಸನೆ ನೀಡಿದರು.

ನಂತರ ಹೋರಾಟವನ್ನು ಹಿಂದಕ್ಕೆ ಪಡೆಯಲಾಯಿತು. ಪ್ರತಿಭಟನೆಯಲ್ಲಿ ಶ್ರೀನಿವಾಸ ಸರಡಗಿಯ ರೇವಣಸಿದ್ಧ ಶಿವಾಚಾರ್ಯರು, ನಿತಿನ್‌ ಕೋಸಗಿ, ನಾಗಲಿಂಗಯ್ಯ ಮಠಪತಿ, ಚನ್ನವೀರಪ್ಪ ಸಲಗರ, ಬಸವರಾಜ ಹಡಪದ, ಶಾಂತಯ್ಯ ಹಿರೇಮಠ, ರಾಚಪ್ಪ ರೂಳೆ, ಚಂದ್ರಹಾಸ್‌, ಶಿವನಗೌಡ ಪಾಟೀಲ್‌, ಡಾ| ಪರಮೇಶ್ವರ ಬನಸೋಡೆ ಮುಂತಾದವರು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.