ನಗುವಿನಲ್ಲಿ ಅಡಗಿದೆ ಅಗಾಧ ಶಕ್ತಿ


Team Udayavani, Mar 26, 2017, 2:50 PM IST

gul6.jpg

ಕಲಬುರಗಿ: ಹಿಂದಿನ ಕಾಲದಲ್ಲಿ ರಾಜ ಮಹಾರಾಜರು ತಮ್ಮ ಯುದ್ಧದ ಭೀತಿಗಳ ನಡುವೆ ವಿಧೂಷಕರಿಂದ ಹಾಸ್ಯ ಅನುಭವಿಸುತ್ತಿದ್ದರು. 12ನೇ ಶತಮಾನದ ಬಸವಾದಿ ಶರಣರು ವಚನಗಳಲ್ಲಿ ಸಾಮಾಜಿಕ ಚಿಂತನೆಗಳ ಜತೆಗೆ ತಮ್ಮ ಹಾಸ್ಯಕ್ಕೂ ಅವಕಾಶ ಕಲ್ಪಿಸಿರುವುದನ್ನು ನೋಡಿದರೆ ನಗುವಿಗೊಂದು ಶಕ್ತಿಯಿದೆ ಎನ್ನುವುದನ್ನು ನಿರೂಪಿಸಿ ತೋರಿಸಿದ್ದಾರೆ ಎಂದು ಬೀದರ್‌ನ ಬಸವ ಸೇವಾ ಪ್ರತಿಷ್ಠಾನದ ಅಕ್ಕ ಅನ್ನಪೂರ್ಣ ತಾಯಿಯವರು ಹೇಳಿದರು. 

ಜಗತ್‌ ವೃತ್ತದ ಮಹಾತ್ಮಾ ಬಸವೇಶ್ವರ ಪುತ್ಥಳಿ ಆವರಣದಲ್ಲಿ ಶನಿವಾರ ನಡೆದ ಬಸವ ಸೇವಾ ಪ್ರತಿಷ್ಠಾನದ 23ನೇ ಬಸವಜ್ಯೋತಿ ಕಾರ್ಯಕ್ರಮ ನಗೆ ಮಾರಿ ತಂದೆಗಳ ಸ್ಮರಣೋತ್ಸವ ನಿಮಿತ್ತದ ನಗೆ ಹಬ್ಬದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. 

12ನೇ ಶತಮಾನದಲ್ಲಿಯೇ ಬಸವಣ್ಣನವರು ಮನೆ-ಮನೆಗೆ ಜ್ಞಾನದ ಜ್ಯೋತಿ ಪ್ರಸರಿಸಿ ಜನತೆ ಮೊಗದಲ್ಲಿ ನಗು ಮೂಡಿಸಿದರು. ದುಃಖದಿಂದ ಮತ್ತೂಬ್ಬರಿಗೆ ಸಂತಸ ತರಬಹುದು. ಸಂತೋಷದಿಂದ ಮತ್ತೂಬ್ಬರಿಗೆ ದುಃಖ ತರಬಹುದು. ಆದರೆ ನಗುವಿಗೆ ನಗುವೇ ಉತ್ತರ. ಆದರೆ ವ್ಯಂಗ್ಯ ನಗು ಅನಾಹುತ ತರುತ್ತದೆ.

ವ್ಯಂಗ್ಯ ನಗುವಿನಿಂದಲೇ ರಾಮಾಯಣ ಹಾಗೂ ಮಹಾಭಾರತ ನಡೆದಿವೆ ಎಂದರು. ಪಾಲಿಕೆ ಮಾಜಿ ಸದಸ್ಯ ಉಮೇಶ ಶೆಟ್ಟಿ ಉದ್ಘಾಟಿಸಿ, ಮುಪ್ಪಿನ ಕಾಲದಲ್ಲಿ ಆಧ್ಯಾತ್ಮಿಕತೆಯತ್ತ ಒಲವು ತೋರುತ್ತಿರುವುದನ್ನು ಕಾಣುತ್ತೇವೆ. ಮಕ್ಕಳಲ್ಲಿಯೇ ಜೀವನದ ಸಂಸ್ಕಾರ, ಆಧ್ಯಾತ್ಮಿಕ ತತ್ವದ ಹಾದಿಯಲ್ಲಿ ಮುನ್ನಡೆಸುವುದು ಅಗತ್ಯವಾಗಿದೆ ಎಂದು ಹೇಳಿದರು. 

ಹಾಸ್ಯ ಕಲಾವಿದೆ ಇಂದುಮತಿ ಸಾಲಿಮಠ ಮಾತನಾಡಿ, ಹಾಸ್ಯದಿಂದ ನೆರೆದಿದ್ದ ಜನರನ್ನು ರಂಜಿಸಿದರು. ನಿವೃತ್ತ ಇಂಜಿನಿಯರ್‌ ಬಸವರಾಜ ನಾಗೂರ ಅಧ್ಯಕ್ಷತೆ ವಹಿಸಿದ್ದರು. ಇದಕ್ಕೂ ಮುಂಚೆ ಪತ್ರಕರ್ತ ಹಣಮಂತರಾವ ಭೈರಾಮಡಗಿ ಧ್ವಜಾರೋಹಣ ನೆರವೇರಿಸಿದರು. ಶಾರದಾ ನೀಲಕಂಠ ಜಾಕಾ, ಬಸವ ಪ್ರತಿಷ್ಠಾನದ ಅಧ್ಯಕ್ಷ ರಾಜಕುಮಾರ ಕೋಟೆ, ಶಿವಶರಣಪ್ಪ ಕೋಳಾರ ಮುಂತಾದವರಿದ್ದರು.

ಜಾಕಾ ಕುಟುಂಬದ ವತಿಯಿಂದ ಐವರು ಅಂಧರಿಗೆ ಕಾಣಿಕೆ ನೀಡಲಾಯಿತು. ಬೆಂಗಳೂರಿನ ಭೂಮಿ ತಾಯಿ ಬಳಗದಿಂದ, ನೀಲಮ್ಮ ಬಳಗದಿಂದ ವಚನ ಗಾಯನ ಜರುಗಿತು. ಪ್ರತಿಷ್ಠಾನದ ಗೌರವಾಧ್ಯಕ್ಷ ರವೀಂದ್ರ ಶಾಬಾದಿ ಸ್ವಾಗತಿಸಿದರು. ಕಾರ್ಯದರ್ಶಿ ಉದಯಕುಮಾರ ಸಾಲಿ ನಿರೂಪಿಸಿದರು. 

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.