ಉದ್ಯೋಗ ಖಾತ್ರಿ ಕಾಮಗಾರಿ ಸಮರ್ಪಕ ಜಾರಿಗೆ ಆಗ್ರಹ


Team Udayavani, Apr 23, 2017, 3:45 PM IST

gul5.jpg

ಆಳಂದ: ಉದ್ಯೋಗ ಖಾತ್ರಿ ಕಾಮಗಾರಿ ಸಮಪರ್ಕವಾಗಿ ಜಾರಿಗೊಳಿಸಬೇಕು. ಬರ ಪರಿಹಾರ ಕ್ರಮ ಕೈಗೊಳ್ಳುವುದು ಸೇರಿ ಪ್ರಮುಖ 10 ಬೇಡಿಕೆಗೆ ಒತ್ತಾಯಿಸಿ ಪ್ರಚಾರಾಂದೋಲನವನ್ನು ಪಟ್ಟಣದಲ್ಲಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ತಾಲೂಕು ಸಮಿತಿಯ ಕಾರ್ಯಕರ್ತರು ಶನಿವಾರ ಪಟ್ಟಣದಲ್ಲಿ ಪ್ರಮುಖ ರಸ್ತೆಯ ಮೂಲಕ ಸಾಗಿ ತಾಪಂ ಕಚೇರಿ ಎದುರು ಪ್ರಭಟನೆ ನಡೆಸಿದರು. 

ಸಂಘದ ಅಧ್ಯಕ್ಷ ಮಲ್ಲಪ್ಪ ಪೂಜಾರಿ, ಕಾರ್ಯದರ್ಶಿ ಮೋಹನ ಎಂ. ಕಟ್ಟಿಮನಿ ನೇತೃತ್ವದಲ್ಲಿ ತಹಶೀಲ್ದಾರ ಕಚೇರಿಯಿಂದ ಸಿದ್ಧಾರ್ಥ ಚೌಕ್‌ ಮೂಲಕ ತಾಪಂ ಕಚೇರಿ ವರೆಗೆ ಮೆರವಣಿಗೆ ಕೈಗೊಂಡು ಪ್ರತಿಭಟನೆ ಮೂಲಕ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿದರು. 

ಸಂಕಷ್ಟದಲ್ಲಿರುವ ಬಡ ಕುಟುಂಬಗಳಿಗೆ ಉಚಿತ ರೇಷನ್‌ ಮತ್ತು ಶುದ್ಧ ಕುಡಿಯುವ ನೀರು ಒದಗಿಸಲು ಕ್ರಮ ಜರುಗಿಸಬೇಕು. ಉದ್ಯೋಗ ಖಾತ್ರಿಯಲ್ಲಿ ಶ್ರಮಭಾರವನ್ನು ಶೇ. 50ರಷ್ಟು ಕಡಿತಮಾಡಬೇಕು. 100 ದಿನಗಳ ಬದಲು ಕುಟುಂಬವೊಂದಕ್ಕೆ 250 ದಿನಗಳ ಕೆಲಸ ಕೊಡಬೇಕು.

ದಿನಕ್ಕೆ 350 ರೂ. ಸಂದಾಯ ಮಾಡಬೇಕು ಎಂದು ಒತ್ತಾಯಿಸಿದರು. ಬರ ಪೀಡಿತ ಪ್ರದೇಶದ ರೈತ ಮತ್ತು ಕೃಷಿ ಕೂಲಿಕಾರರ ಸಾಲಮನ್ನಾ ಮಾಡಿ ಹೊಸ ಸಾಲ ನೀಡಬೇಕು. ಅಲ್ಲದೆ, ತಿಂಗಳಿಗೆ 3 ಸಾವಿರ ರೂ. ಪರಿಹಾರ ನೆರವು ನೀಡಬೇಕು. ಈ ಪ್ರದೇಶದ ಜನರ ಆರೋಗ್ಯ ತಪಾಸಣೆ ಮತ್ತು ಅಗತ್ಯ ಚಿಕಿತ್ಸೆ ಕೈಗೊಳ್ಳಬೇಕು.

ಶಿಕ್ಷಣ ಮತ್ತು ಪರೀûಾ ಶುಲ್ಕ ಮನ್ನಾಮಾಡಬೇಕು. ವಸೂಲಿ ಮಾಡಿದ ಶುಲ್ಕ  ವಾಪಸ್ಸು ಕೊಡಬೇಕು. ಜಾನುವಾರುಗಳಿಗೆ ಬೇಕಾಗುವ ಮೇವು ಹಾಗೂ ಆಹಾರವನ್ನು ಉಚಿತವಾಗಿ ಒದಗಿಸಬೇಕು. ಪಡಿತರ ವ್ಯವಸ್ಥೆಯಲ್ಲಿ ಕೂಪನ್‌ ಪದ್ಧತಿ ಕೈಬಿಡಬೇಕು. 

ಟಾರ್ಗೆಟ್‌ ಪದ್ಧತಿಯನ್ನು ಕೈಬಿಟ್ಟು ರೇಷನ್‌ ವ್ಯವಸ್ಥೆ ಸಾರ್ವತ್ರಿಕಗೊಳಿಸಿ ಎಲ್ಲ ಕೂಲಿಕಾರರಿಗೆ ಮತ್ತು ಬಡ ರೈತ ಕುಟುಂಬಗಳಿಗೆ ಬಿಪಿಎಲ್‌ ರೇಷನ್‌ ಕಾರ್ಡ್‌ಗಳನ್ನು ಅವರ ಮನೆಗಳಿಗೆ ತಲುಪಿಸಬೇಕು ಎಂದು ಆಗ್ರಹಿಸಿದರು. ಸ್ವಂತ ಮನೆಯಿಲ್ಲದ ಎಲ್ಲ ಕೂಲಿಕಾರರ ಮತ್ತು ಬಡ ರೈತ ಕುಟುಂಬಗಳಿಗೆ ಸರ್ಕಾರ ಉಚಿತವಾಗಿ ಮನೆ, ನಿವೇಶನ ಒದಗಿಸಿ ಮನೆ ಕಟ್ಟಲು ಅಗತ್ಯ ಸಹಾಯಧನ ನೀಡಬೇಕು ಎಂದು ಮನವಿ ಮಾಡಿದದರು. 

ಬೇಡಿಕೆಗಳ ಮನವಿಪತ್ರವನ್ನು ತಾಪಂ ಅಧಿಕಾರಿಗಳಿಗೆ ಸಲ್ಲಿಸಿದರು. ರಾಜ್ಯ ಸಮಿತಿ ಸದಸ್ಯೆ ಜಯಶ್ರೀ ಎಂ. ಕಟ್ಟಿಮನಿ, ಶ್ರೀಪತಿ ಹೊಡಲ್‌, ಸಾವಿತ್ರಿ ಎಲ್‌. ಹೊಡಲ್‌, ಬಾಬು ಮುರಡಿ, ಶರಣಮ್ಮ ಬೋಧನವಾಡಿ, ಮಾಯವ್ವ ಮಾದನ ಹಿಪ್ಪರಗಾ ಹಾಗೂ ಮತ್ತಿತರರು ಭಾಗವಹಿಸಿದ್ದರು.  

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.