ಮೋದಿ ಕಪ್ಪು ಹಣ ತರಲಿಲ್ಲವೇಕೆ


Team Udayavani, May 27, 2017, 3:22 PM IST

gul3.jpg

ಕಲಬುರಗಿ: ಚುನಾವಣೆ ಸಂದರ್ಭದಲ್ಲಿ ದೇಶದ ಜನತೆಗೆ ಭರವಸೆ ಕೊಟ್ಟಿರುವಂತೆ ವಿದೇಶದಲ್ಲಿರುವ ಕಪ್ಪು ಹಣವನ್ನು ಭಾರತಕ್ಕೆ ತರಲು ಯಾಕೆ ಆಗಲಿಲ್ಲ. ಅದನ್ನು ತರುವ ಮನಸ್ಸು ಯಾಕೆ ಮಾಡಲಿಲ್ಲ ಎಂದು ತೊಗರಿ ಮಂಡಳಿ ಅಧ್ಯಕ್ಷರೂ ಆಗಿರುವ ಜಿಲ್ಲಾ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಭಾಗನಗೌಡ ಪಾಟೀಲ ಸಂಕನೂರ ಪ್ರಶ್ನಿಸಿದ್ದಾರೆ. 

ಪಕ್ಷದ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೋದಿ ದೇಶದ ಜನರಿಗೆ ಮೋಸ ಮಾಡಿದ್ದಾರೆ. ಇದರಿಂದ ಅವರು ಮುಂದಿನ ದಿನಗಳಲ್ಲಿ ಹೇಳಿದ್ದೆಲ್ಲವನ್ನು ಮಾಡುತ್ತಾರೆಂದು ಹೇಗೆ ಭರವಸೆ ಇಟ್ಟುಕೊಳ್ಳುವುದು ಎಂದು ಪ್ರಶ್ನಿಸಿರುವ ಅವರು,

-ಕೇಂದ್ರದಲ್ಲಿ ಕಳೆದ ಕಾಂಗ್ರೆಸ್‌ ನೇತೃತ್ವದ ಸರಕಾರ ಜಾರಿಗೆ ತಂದಿರುವ ಯೋಜನೆಗಳಿಗೆ ಈಗಿನ ಕೇಂದ್ರ ಸರಕಾರವು ಅದೇ ಯೋಜನೆಗಳಿಗೆ ಹೊಸ ನಾಮಕರಣ ಮಾಡುತ್ತಿದೆ ಎಂದರು. ಹಿಂದೆ ಯುಪಿಎ ಜಿಎಸ್‌ಟಿ ತರಲು ಹೊರಟಾಗ ಇದೇ ಬಿಜೆಪಿಯವರು ದೊಡ್ಡ ಮಟ್ಟದಲ್ಲಿ ವಿರೋಧಿಸಿದರು.

ಇವತ್ತು ರಾಜಕಾರಣದ ಭಾಗವಾಗಿ ಜನತೆ ಮನಸ್ಸು ಗೆಲ್ಲುವುದಕ್ಕಾಗಿ ಬಿಜೆಪಿ ಸರಕಾರ ಜಾರಿಗೆ ತರುತ್ತಿದೆ. ಹಿಂದಿನ ಯುಪಿಎ ಸರಕಾರ ತಂದಂತಹ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ, ಯೋಜನೆಗಳ ಹೆಸರು ಬದಲಾಯಿಸಿ ಹೊಸ ಹೆಸರುಗಳ ಮೂಲಕ ಜನರಿಗೆ ತಪ್ಪು ಮಾಹಿತಿ ನೀಡುತ್ತ, ಮೋಸ ಮಾಡುವ ಹಾದಿಯಲ್ಲಿದ್ದಾರೆ ಎಂದು ಆರೋಪಿಸಿದರು. 

ಸ್ವತ್ಛ ಭಾರತ ಎನ್ನುವ ದೊಡ್ಡ ಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಫೋಜು ನೀಡಿದ್ದಿರಿ. ಆದರೆ, ಆಯೋಜನೆ ಏನಾಗುತ್ತಿದೆ ಎನ್ನುವುದು ನಿಮಗೆ ತಿಳಿಯುತ್ತಿಲ್ಲ. ಕೇವಲ ಜನರನ್ನು ನಂಬಿಸಿದರೆ ಸಾಲುವುದಿಲ್ಲ. ಅದನ್ನು ಜನರು ಪ್ರಯೋಜನ ಪಡೆಯುವಂತೆ ಮಾಡಬೇಕು ಎಂದರು. 

ಕೇಂದ್ರದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ನಿರೀಕ್ಷಿತ ಉದ್ಯೋಗ ಸೃಷ್ಟಿ ಮಾಡಲಿಲ್ಲ. 2015 ಮತ್ತು 2016 ಏಪ್ರಿಲ್‌ನಿಂದ ಡಿಸೆಂಬರ್‌ ವರೆಗೆ 1.55 ಲಕ್ಷ ಉದ್ಯೋಗ ಸೃಷ್ಟಿ ಮಾಡಿದೆ. ಆದರೆ ಕೇಂದ್ರದಲ್ಲಿ ಮನಮೋಹನಸಿಂಗ್‌ ಸರಕಾರವಿದ್ದಾಗ 2009 ರಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿಸಿತು. 

ಆ ಕಾರಣಕ್ಕಾಗಿ ಭಾರತದಲ್ಲಿ ಐಟಿ ಕ್ಷೇತ್ರದಲ್ಲಿ ಆರ್ಥಿಕ ಹಿಂಜರಿತದಿಂದ ನಿರುದ್ಯೋಗ ಭೀತಿ ಹೆಚ್ಚಾಗಿದೆ ಎಂದು ಹೇಳಿದರು. ಪ್ರಧಾನಿ ಮೋದಿರೈತರ ಸಾಲ ಮನ್ನಾ ಮಾಡಲು ಮೀನಾಮೇಷ ಎಣಿಸುತ್ತಿರುವಾಗ ವಿಜಯ ಮಲ್ಯ ಮತ್ತು ಲಲಿತ್‌ ಮೋದಿಯಂತವರು ಸುಮಾರು ಸಾವಿರಾರು ಕೋಟಿ ರೂ.ಗಳನ್ನು ಲಪಟಾಯಿಸಿ ವಿದೇಶಕ್ಕೆ ಪಲಾಯನಗೊಳ್ಳಲು ಅನುವು ಮಾಡಿಕೊಡಲಾಗಿದೆ ಎಂದು ದೂರಿದರು.

ನೋಟು ಅಮಾನ್ಯಿàಕರಣ ಮಾಡಿದ್ದರಿಂದ ಜನಸಾಮಾನ್ಯರಿಗೆ ಕಷ್ಟ ಹೆಚ್ಚಿದೆ ಎಂದು ಆಪಾದಿಸಿದರು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿನಾಥ ಪಾಟೀಲ ಸೊಂತ, ಭೀಮಣ್ಣ ಸಾಲಿ, ಚಂದ್ರಶೇಖರ ಸುಲ್ತಾನಪುರ, ಕಾರ್ಮಿಕ ವಿಭಾಗದ ಶಿವಕುಮಾರ ಬಾಳಿ ಇದ್ದರು. 

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.