ಏಕರೂಪ ತೆರಿಗೆ ಅಭಿವೃದ್ಧಿಗೆ ಪೂರಕ
Team Udayavani, May 29, 2017, 3:25 PM IST
ಕಲಬುರಗಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಏಕ ರೂಪದ ಸರಕು ಮತ್ತು ಸೇವಾ (ಜಿಎಸ್ಟಿ) ತೆರಿಗೆಯು ದೇಶದಲ್ಲಿನ ಸರ್ವಾಂಗೀಣ ಆರ್ಥಿಕ ಸ್ಥಿತಿ ಸುಧಾರಿಸಲು ಪೂರಕವಾಗಿದೆ ಎಂದು ಲೆಕ್ಕ ಪರಿಶೋಧಕಿ ಕೆ. ಅನ್ನಪೂರ್ಣ ಹೇಳಿದರು.
ಹೈದ್ರಾಬಾದ ಕರ್ನಾಟಕ ಕೈಗಾರಿಕಾ ಹಾಗೂ ವಾಣಿಜ್ಯ (ಎಚ್ಕೆಸಿಸಿ) ಸಂಸ್ಥೆ ರವಿವಾರ ಹಮ್ಮಿಕೊಂಡಿದ್ದ ಜಿಎಸ್ಟಿ ಯೋಜನೆ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಯೋಜನೆ ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾಗಿದೆ.
ಈ ಕುರಿತು ವ್ಯಾಪಾರಸ್ಥರು, ಉದ್ಯಮಿಗಳು ಹಾಗೂ ಜನ ಸಾಮಾನ್ಯರು ಹೆಚ್ಚಿನ ಅರಿವು ಮೂಡಿಸಿಕೊಳ್ಳಬೇಕು ಎಂದರು. ಹೊಸ ತೆರಿಗೆ ಪದ್ಧತಿ ದೇಶದಲ್ಲಿ ಬಹುದೊಡ್ಡ ಆರ್ಥಿಕ ಸುಧಾರಣೆ ತರಲಿದೆ ಎನ್ನುವ ನಿರೀಕ್ಷೆಯನ್ನು ಸಾರ್ವಜನಿಕರು ಹೊಂದಿದ್ದಾರೆ.
ಯಾವ, ಯಾವ ವಸ್ತುಗಳಿಗೆ ಸರಕು ಮತ್ತು ಸೇವಾ ತೆರಿಗೆ ಎಷ್ಟು ಎಂಬುದರ ಕುರಿತು ಪ್ರತಿಯೊಬ್ಬರೂ ಅರ್ಥ ಮಾಡಿಕೊಂಡು ಆ ಕುರಿತು ಜಾಗೃತಿ ಮೂಡಿಸಬೇಕುಎಂದು ಸಲಹೆ ಮಾಡಿದರು. ಜೆಎಸ್ಟಿ ಮತ್ತು ತಂತ್ರಜ್ಞಾನವನ್ನು ಸರಿಯಾದ ರೀತಿ ಬಳಕೆ ಮಾಡಿಕೊಳ್ಳುವುದನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು.
ಸಿಜಿಎಸ್ಟಿ, ಎಸ್ಜಿಎಸ್ಟಿ, ಯುಟಿಜಿಎಸ್ಟಿ ಮತ್ತುಐಜಿಎಸ್ಟಿ ಕುರಿತು ಸಂಪೂರ್ಣ ಮಾಹಿತಿ ಒದಗಿಸಿದರು. ಕರ್ನಾಟಕದಲ್ಲಿ ಇನ್ನೂ ಹೊಸ ಸರಕು ಮತ್ತು ಸೇವಾ ತೆರಿಗೆ ಜಾರಿಗೆ ಬಂದಿಲ್ಲ. ಮಂದಿನ ದಿನಗಳಲ್ಲಿ ಜಾರಿಗೆ ಬರಲಿದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಎಚ್ಕೆಸಿಸಿಐ ಅಧ್ಯಕ್ಷ ಸೋಮಶೇಖರ ಟೆಂಗಳಿ, ಜಿಎಸ್ಟಿ ಬಗ್ಗೆ ವ್ಯಾಪಾರಿಗಳು ಹಾಗೂ ಸಾರ್ವಜನಿಕರಲ್ಲಿ ಪರಿಪೂರ್ಣ ಅರಿವಿಲ್ಲ. ಹೀಗಾಗಿ ಜಾಗೃತಿ ಅಗತ್ಯ ಎಂಬುದನ್ನು ಮನಗಾಣಲಾಗಿದೆ ಎಂದರು. ಎಚ್ಕೆಸಿಸಿ ಗೌರವಕಾರ್ಯದರ್ಶಿ ಪ್ರಶಾಂತ್ ಮಾನಕರ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್