ತಾಪಂ ಶೌಚಾಲಯ ಗಬ್ಬು ನಾತ


Team Udayavani, Jun 24, 2017, 3:03 PM IST

gul5.jpg

ಅಫಜಲಪುರ: ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ವೈಯಕ್ತಿಕ ಶೌಚಾಲಯಗಳ ಅರಿವು ಮೂಡಿಸುವ ಸಲುವಾಗಿ ತಾಪಂ, ಗ್ರಾಪಂಗಳಿಗೆ ಪರಮಾ ಧಿಕಾರ ನೀಡಿದೆ. ಅಲ್ಲದೆ ಕಡ್ಡಾಯವಾಗಿ ಸರ್ಕಾರಿ ಕಚೇರಿಗಳಲ್ಲಿ ಸುಸಜ್ಜಿತ ಶೌಚಾಲಯ ಇರಬೇಕೆಂದು ಹೇಳುತ್ತದೆ. ಆದರೆ ಶೌಚಾಲಯವಿದ್ದರೂ ಬಳಕೆಗೆ ಬಾರದಂತಾಗಿ ಗಬ್ಬು ನಾತ ಬೀರುತ್ತಿದ್ದರೂ ನೋಡುವವರು ಇಲ್ಲದಂತಾಗಿದೆ. 

ಇದು ಪಟ್ಟಣದ ತಾಪಂ ಕಚೇರಿಯಲ್ಲಿರುವ ಶೌಚಾಲಯದ ಪರಿಸ್ಥಿತಿ. ತಾಲೂಕು ಪಂಚಾಯಿತಿ ಅವರು ಗ್ರಾಪಂ ಕಚೇರಿಗಳಲ್ಲಿ ಮತ್ತು ಗ್ರಾಮೀಣ ಭಾಗದಲ್ಲಿ ವೈಯಕ್ತಿಕ ಶೌಚಾಲಯ ಕಟ್ಟಿಕೊಳ್ಳಿ ಎಂದು ಹೇಳುತ್ತಲೇ ಇರುತ್ತಾರೆ. ಆದರೆ ತಾಲೂಕು ಕಚೇರಿಯಲ್ಲೇ ಶೌಚಾಲಯ ಇದ್ದು ಇಲ್ಲದಂತಾಗಿದೆ.

ಮಾಡಿದ ಮೂತ್ರ ಹೋರ ಹೋಗಲಾಗದೆ ನಿಂತಲ್ಲಿಯೇ ನಿಂತು ಗಬ್ಬು ನಾತ ಬೀರುತ್ತಿದೆ. ಇಷ್ಟಾದರೂ ತಾಪಂ ಅ ಧಿಕಾರಿಗಳು ಶೌಚಾಲಯ ದುರಸ್ತಿಗೊಳಿಸುವ ಮತ್ತು ಹೊಸದಾಗಿ ಕಟ್ಟಿಸುವ ಗೋಜಿಗೆ ಹೋಗಿಲ್ಲ. ಪ್ರತಿದಿನ ತಾಪಂ ಕಚೇರಿಗೆ ವಿವಿಧ ಗ್ರಾಮಗಳಿಂದ ನೂರಾರು ಜನ ಕೆಲಸದ ನಿಮಿತ್ತ ಬರುತ್ತಾರೆ. 

ಇದರಲ್ಲಿ ಮಹಿಳೆಯರೂ ಇರುತ್ತಾರೆ. ಇವರೆಲ್ಲ ಶೌಚಾಲಯದ ಈ ದುಸ್ತಿತಿಯಿಂದ ಪರದಾಡುವಂತಾಗಿದೆ. ಕಚೇರಿ ಕೆಲಸಗಾರರಿಗೂ ಶೌಚಾಲಯ, ಮೂತ್ರಾಲಯದ ವ್ಯವಸ್ಥೆ ಇಲ್ಲದಂತಾಗಿದೆ. ಶಾಸಕರ ಕೈಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ಅದ್ಧೂರಿಯಾಗಿ ಉದ್ಘಾಟನೆ ಮಾಡಿಸಿದ ತಾಪಂನವರು ನೀರನ್ನು ಸಹ ಹಾಕುತ್ತಿಲ್ಲ.

ಹೀಗಾಗಿ ತಾಲೂಕು ಪಂಚಾಯಿತಿಗೆ ಬಂದರೆ ಕುಡಿಯಲು ನೀರೂ ಸಿಗುತ್ತಿಲ್ಲ. ಶೌಚಕ್ಕೆ ಹೋಗಲು ವ್ಯವಸ್ಥೆಯೂ ಇಲ್ಲ ಎಂದು ಸಾರ್ವಜನಿಕರು ತಾಪಂ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

ಆಕ್ರೋಶ: ಹಳ್ಳಿಗಳಿಂದ ಹೈರಾಣಾಗಿ ಕಚೇರಿಗೆ ಕೆಲಸಕ್ಕಾಗಿ ತಾಪಂಗೆ ಬಂದರೆ ಇಲ್ಲಿ ಕುಡಿಯಲು ನೀರು ಇಲ್ಲ, ಶೌಚಕ್ಕೆ ಹೋಗಬೇಕಾದರೆ ಅದು ಸರಿಯಾಗಿಲ್ಲ. ತಾಲೂಕು ಕಚೇರಿಯಲ್ಲೇ ಈ ಪರಿಸ್ಥಿತಿಇದೆ. ಇನ್ನೂ ಇವರು ಇನ್ನೆಲ್ಲಿ ಸ್ವಚ್ಚ ಭಾರತ ಮಾಡ್ತಾರೋ? ಎಂದು ಅನೇಕ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

* ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.