ಆಸಕ್ತರಿಂದ ರಂಗಭೂಮಿ ಜೀವಂತ: ಡಾ| ಜಂಗಮಶೆಟ್ಟಿ


Team Udayavani, Jun 28, 2017, 3:20 PM IST

gul3.jpg

ಕಲಬುರಗಿ: ದೂರದರ್ಶನ ಮತ್ತು ಸಿನೆಮಾಗಳಿಗೆ ರಂಗಭೂಮಿಯನ್ನು ಹಿಂದೆ ಹಾಕುವ ತಾಕತ್ತಿಲ್ಲ. ಇವತ್ತು ರಂಗಭೂಮಿ ಏನಾದರೂ ಉಳಿದಿದೆ ಎಂದರೆ ಅದಕ್ಕೆ ಕಾರಣ ಆಸಕ್ತರೆ ಹೊರತು ಧನ-ಕನಕಗಳಲ್ಲ ಎಂದು ಸಿ.ಜಿ. ಕೃಷ್ಣಸ್ವಾಮಿ ಹೇಳುತ್ತಿದ್ದರು ಎಂದು ರಂಗ ಸಮಾಜದ ಸದಸ್ಯೆ ಹಾಗೂ ನಾಟಕಕಾರ್ತಿ ಡಾ| ಸುಜಾತಾ ಜಂಗಮಶೆಟ್ಟಿ ಸ್ಮರಿಸಿಕೊಂಡರು. 

ಇಲ್ಲಿನ ಕನ್ನಡ ಭವನದಲ್ಲಿ ಮಂಗಳವಾರ ದೃಶ್ಯಬೆಳಕು ಸಾಂಸ್ಕೃತಿಕ ಸಂಸ್ಥೆ ಹಮ್ಮಿಕೊಂಡಿದ್ದ ಸಿಜಿಕೆ ಬೀದಿರಂಗ ದಿನ ಕಾರ್ಯಕ್ರಮದಲ್ಲಿ ರಂಗಶಿಕ್ಷಕ ಅಶೋಕ ತೊಟ್ನಳ್ಳಿ ಅವರಿಗೆ ಸಿಜಿಕೆ ರಂಗಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಸಿಜಿಕೆ ಅವರು ರಂಗಭೂಮಿಗೆ ಸಂಬಂಧಿಸಿದ ಎಲ್ಲ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಳ್ಳುತ್ತಿದ್ದ ಶ್ರಮಜೀವಿ.

ಅವರಿಂದ ಕಲಿಯುವುದು ಸಾಕಷ್ಟಿದೆ. ಒಮ್ಮೆ ನಾಟಕ ಪ್ರದರ್ಶನಕ್ಕೆ ಬೆಳಕಿನ ವ್ಯವಸ್ಥೆ ಮಾಡಲು ರಂಗಸಜ್ಜಿಕೆ ಮಾಡುವವ ಕೈಕೊಟ್ಟ, ಬೆಳಗ್ಗೆಯೇ ನಾಟಕವಾಡಬೇಕು. ಬೆಳಕಿನ ವ್ಯವಸ್ಥೆ ಆಗಿರಲಿಲ್ಲ. ಏನು ಮಾಡುವುದು ಎಂದಾಗ ಖುದ್ದು ಸಿಜಿಕೆ ಬೆಳಕಿನ ವ್ಯವಸ್ಥೆ ಮಾಡಲು ಮುಂದಾಗುತ್ತಾರೆ. ಆಗ ಅವರಿಗೊಂದು ಅಪಘಾತವಾಗಿತ್ತು.

ಸಾವರಿಸಿಕೊಂಡು ನಾಟಕಕ್ಕೆ ಬೆಳಕು ನೀಡಿದ ಅವರ ಕೌಶಲ್ಯ ಮತ್ತು ಎದೆಗಾರಿಕೆ ಮೆಚ್ಚುವಂತಹದ್ದು ಎಂದರು. ಸೇಡಂ ತಾಲೂಕಿನ ಜಾಕನಪಲ್ಲಿಯ ಸರಕಾರಿ ಶಾಲೆ ರಂಗಶಿಕ್ಷಕ ಅಶೋಕ ತೋಟ್ನಳ್ಳಿ ಅವರಿಗೆ ಸಿಜಿಕೆ ರಂಗ ಪುರಸ್ಕಾರ ನೀಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಕೆಲಸ. ಅಶೋಕ ಒಂದು ಕುಗ್ರಾಮಕ್ಕೆ ರಂಗಭೂಮಿಯ ಬೆಳಕು ಚೆಲ್ಲಿದ್ದಾರೆ.

ಅಲ್ಲಿನ  ಮಕ್ಕಳಿಗೆ ಪಾಠದ ಜೊತೆಯಲ್ಲಿ ರಂಗಭೂಮಿ ಆಸಕ್ತಿ ಕಲಿಸಿದ್ದಾರೆ ಎಂದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ರಂಗಶಿಕ್ಷಕ ಅಶೋಕ ತೊಟ್ನಳ್ಳಿ, ಯಾವುದೇ ಕಲೆ ಕೋಮು ಭಾವನೆಯನ್ನು ಹುಟ್ಟು ಹಾಕುವುದಿಲ್ಲ ಎನ್ನಲಿಕ್ಕೆ ಜಾಕನಪಲ್ಲಿಯಲ್ಲಿನ ನಮ್ಮ ಪ್ರಯೋಗವೇ ಸಾಕ್ಷಿ.

ಮಕ್ಕಳ ಮೂಲಕ ನಾಟಕ ಮಾಡಲು ಹೊರಟ ನಮಗೆ ಎಂದೂ ಅಲ್ಲಿನ ಜಾತಿ ವ್ಯವಸ್ಥೆ ಅಡ್ಡವಾಗಲೇ ಇಲ್ಲ. ಅದೂ ಅಲ್ಲದೆ, ಆ ಗ್ರಾಮದ ಜನರಲ್ಲಿನ ಕಲಾಪ್ರೀತಿ ನಿಜಕ್ಕೂ ಅನುಕರಣೀಯ ಎಂದರು. ಜಾಕನಪಲ್ಲಿ ಮಕ್ಕಳ ಸಾಧನೆಯನ್ನು ಪತ್ರಿಕೆಯೊಂದು ಬರೆದಾಗ ಬೆಂಗಳೂರು ಮೂಲದ ಕೆ.ಎನ್‌.ರಾಜು ಎನ್ನುವವರು 12 ಸಾವಿರ ರೂ. ಡಿಪಾಸಿಟ್‌ ಮಾಡಿದ್ದಾರೆ.

ಅಲ್ಲದೆ, ಕಾಯಕ ಸಂಸ್ಥೆಯ ಶಿವರಾಜ ಪಾಟೀಲರು ಜಾಕನಪಲ್ಲಿಯ ಮಕ್ಕಳು ಮೆಟ್ರಿಕ್‌ನಲ್ಲಿ ಶೇ. 60 ರಷ್ಟು ಅಂಕ ತೆಗೆದುಕೊಂಡರು ತಮ್ಮ ಕಾಲೇಜಿನಲ್ಲಿ ಪಿಯುಗೆ ಉಚಿತ ಪ್ರವೇಶ ನೀಡುವುದಾಗಿ ಹೇಳಿದ್ದಾರೆ ಎಂದು ನೆನಪಿಸಿಕೊಂಡರು. ಅತಿಥಿಯಾಗಿದ್ದ ಗುವಿವಿ ಪ್ರಾಧ್ಯಾಪಕ ಡಾ| ಕೆ.ಲಿಂಗಪ್ಪ, ಅಧ್ಯಕ್ಷತೆ ವಹಿಸಿದ್ದ ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರ್‌ ಮಾತನಾಡಿದರು. 

ಒಬ್ಬ ಶಿಕ್ಷಕ ಮನಸ್ಸು ಮಾಡಿದರೆ ಏನೆಲ್ಲಾ ಮಾಡಬಲ್ಲ ಎನ್ನಲಿಕ್ಕೆ ಇದಕ್ಕಿಂತ ಉತ್ತಮ ಉದಾಹರಣೆ ಮತ್ತೂಂದಿಲ್ಲ ಎಂದರು. ಪರಶುರಾಮ ಕೆ., ಬಸವರಾಜ ಜಾನೆ, ಮಂಜುಳಾ ಜಾನೆ, ಎಸ್‌.ಎಂ.ನೀಲಾ, ಬಸವರಾಜ ಉಪ್ಪಿನ್‌, ವಿಶ್ವೇಶ್ವರಿ ತಿವಾರಿ, ಭೀಮಾಶಂಕರ ಚಿನಮಳ್ಳಿ, ಬಾಬುರಾವ್‌ ಇದ್ದರು. ಬಿ.ನಯನಾ ನಿರೂಪಿಸಿದರು. ಪರುಶರಾಮ ಸಿ.ಎಂ. ವಂದಿಸಿದರು.  

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.