ಸಮಾಜದಲ್ಲಿ ಮಾಧ್ಯಮ ಪಾತ್ರ ದೊಡ್ಡದು


Team Udayavani, Jul 24, 2017, 3:29 PM IST

24-GUB-4.jpg

ಕಲಬುರಗಿ: ಸಮಾಜದ ಎಲ್ಲ ಸ್ಥರಗಳು ಸರಿಯಾದ ನಿಟ್ಟಿನಲ್ಲಿ ಮುನ್ನಡೆಯುವಂತೆ ಆಗಲು ಹಾಗೂ ಸಮಾಜ ಕಟ್ಟುವಲ್ಲಿ, ಪ್ರಜಾಪ್ರಭುತ್ವ ಸರಿಯಾಗಿ ನಿಭಾಯಿಸುವಲ್ಲಿ ಮಾಧ್ಯಮಗಳ ಪಾತ್ರ ಬಹಳಮುಖ್ಯವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಹೇಳಿದರು.

ರವಿವಾರ ನಗರದ ಡಾ| ಎಸ್‌.ಎಂ. ಪಂಡಿತ ರಂಗಮಂದಿರಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಹಾಗೂ ಪತ್ರಕರ್ತರು ನಟಿಸಿದ ಕೋಣನ ಮುಂದೆ ಕಿನ್ನೋರಿ ನಾಟಕ ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಗತ್ತು ಇಂದು ವೇಗವಾಗಿ ಹೋಗುತ್ತಿದೆ. ಇದಕ್ಕೆ ಮಾಧ್ಯಮವೇ ಕಾರಣ. ಜನರಲ್ಲಿ ಜಾಗೃತಿ ಹಾಗೂ ಸೂಕ್ತ ಮಾಹಿತಿಯನ್ನು ಮಾಧ್ಯಮಗಳಿಂದು ಸ್ಪರ್ಧೆ ಎನ್ನುವ ರೀತಿ ಕೊಡುತ್ತಿವೆ. ಮಾಧ್ಯಮಗಳ ಸಲಹೆ, ಟೀಕೆಗಳನ್ನು ಸರ್ಕಾರ ಸಕರಾತ್ಮಕವಾಗಿ ಸ್ವೀಕರಿಸಿ ಸ್ಪಂದಿಸುತ್ತಿದೆ ಎಂದರು.

ಸಾಮಾಜಿಕ ಹೊಣೆಗಾರಿಕೆಗಿಂತ ಭಾವನೆಗಳನ್ನು ತಲ್ಲಣಗೊಳಿಸುವ ಸುದ್ದಿಗಳಿಗೆ ಹೆಚ್ಚು ಮಹತ್ವ ಸಿಗುತ್ತಿದೆ. ಆದ್ದರಿಂದ ಜನರಲ್ಲಿ ವಿಶ್ವಾಸಕ್ಕೆ ಕೊರತೆಯಾಗದಂತೆ ಕೆಲಸ ಮಾಡುವುದು ಅದರಲ್ಲೂ ಸಾಮಾಜಿಕವಾಗಿ ವಿಶ್ವಾಸಕ್ಕೆ ಧಕ್ಕೆಯಾಗದ ರೀತಿಯಲ್ಲಿ ಸುದ್ದಿ ಸಮಾಚಾರ ಕೊಡುವುದು ಮುಖ್ಯವಾಗಿದೆ ಎಂದು ನುಡಿದರು.

10 ಲಕ್ಷ ರೂ: ಮುಖ್ಯ ಅತಿಥಿಯಾಗಿದ್ದ ಮಹಾಪೌರ ಶರಣಕುಮಾರ ಮೋದಿ ಮಾತನಾಡಿ, ಮಾಧ್ಯಮದವರು ಮಹಾನಗರ ಪಾಲಿಕೆಗೆ
ಸಂಬಂಧಪಟ್ಟಂತೆ ಟೀಕೆ ಹಾಗೂ ಮೆಚ್ಚುಗೆಯ ವರದಿಗಳನ್ನು ಪ್ರಕಟಿಸುತ್ತಿದ್ದಾರೆ. ಇದನ್ನು ತಾವು ಅವಲೋಕಿಸುತ್ತಿದ್ದೇನೆ ಎಂದು ಹೇಳಿದರು. ಅಲ್ಲದೇ ಪತ್ರಿಕಾ ಭವನದಲ್ಲಿ ನಡೆಯುತ್ತಿರುವ ಸಭಾ ಮಂಟಪಕ್ಕೆ ಅಗತ್ಯ ಪೀಠೊಪಕರಣಗಳಿಗೆ ಮಹಾನಗರ ಪಾಲಿಕೆ ವತಿಯಿಂದ 10 ಲಕ್ಷ ರೂ. ನೀಡುವುದಾಗಿ ಪ್ರಕಟಿಸಿದರು. ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌. ಶಶಿಕುಮಾರ ಮಾತನಾಡಿ, ನಿಷ್ಪಕ್ಷಪಾತ ವರದಿ ಹಾಗೂ ಸಾಮಾಜಿಕ ಅಭಿಪ್ರಾಯ ವ್ಯಕ್ತಪಡಿಸುವಲ್ಲಿ ಮಾಧ್ಯಮಗಳು ಸಮರ್ಪಕವಾದ ಪಾತ್ರ ನಿರ್ವಹಿಸುತ್ತಿವೆ ಎಂದರು. ವಿಧಾನ ಪರಿಷತ್‌ ಸದಸ್ಯ ಬಿ.ಜಿ.ಪಾಟೀಲ ಸಹ ಮಾತನಾಡಿದರು.

ವಿಶೇಷ ಸನ್ಮಾನ: ಇದೇ ಜುಲೈ 31ರಂದು ಸೇವೆಯಿಂದ ನಿವೃತ್ತಿಯಾಗುತ್ತಿರುವ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜಿ. ಚಂದ್ರಕಾಂತ ಅವರನ್ನು ಸನ್ಮಾನಿಸಲಾಯಿತು. ಪತ್ರಕರ್ತರ ಸಂಘದ ಅಧ್ಯಕ್ಷ ಭವಾನಿಸಿಂಗ್‌ ಠಾಕೂರ ಅಧ್ಯಕ್ಷತೆ ವಹಿಸಿದ್ದರು.

ಪ್ರಶಸ್ತಿ ಪ್ರದಾನ: ದಿ| ವಿ. ಎನ್‌. ಕಾಗಲಕರ್‌ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ ಗೋವಿಂದರಾವ್‌ ಖಮಿತಕರ್‌ ಅವರಿಗೆ ನೀಡಲಾಯಿತು.  ಪತ್ರಕರ್ತರಾದ ಶೇಷಗಿರಿ ಎಚ್‌., ಮಂಜುನಾಥ ಅಂಜುಟಗಿ, ಶರಣಬಸಪ್ಪ ವಡಗಾಂವ, ವಿಜಯಕುಮಾರ ಕಲ್ಲಾ, ನಾಗಯ್ಯ ಸ್ವಾಮಿ ಬೊಮ್ಮನಳ್ಳಿ , ನರಸಿಂಗ್‌ ಕುದಂಪುರೆ, ಶಿವರಾಜ ವಾಲಿ, ಮಲ್ಲಿಕಾರ್ಜುನ ಮೂಡಬೂಳಕರ್‌, ಆಸ್ಮಾ ಇನಾಂದಾರ್‌, ಶರಣಬಸಪ್ಪ ಅನ್ವರ್‌, ಅರುಣ ಕದಮ್‌, ವಿಜಯಕುಮಾರ ವಾರದ (ಛಾಯಾಗ್ರಾಹಕ), ಮಿರ್ಜಾ ಸರ್ಪರಾಜ್‌ (ಇನ್‌ಕಿಲಾಬ್‌ ಡೆಕ್ಕನ್‌), ಆನಂದ ರಾಜಪ್ಪ (ಮುದ್ರಣ ವಿಭಾಗ), ನಾಗಶೆಟ್ಟಿ ಡಾಕುಳಗಿ (ಜಾಹೀರಾತು ವಿಭಾಗ), ಸಿದ್ಧಾರೂಢ ಬಿರಾದಾರ (ಪ್ರಸಾರಂಗ ವಿಭಾಗ) ಅವರಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಕಾರ್ಯದರ್ಶಿ ಶಿವರಂಜನ್‌ ಸತ್ಯಂಪೇಟೆ ಸ್ವಾಗತಿಸಿದರು. ಪ್ರಭುಲಿಂಗ ನೀಲೂರೆ ಹಾಗೂ ಸುರೇಶ ಬಡಿಗೇರ ನಿರೂಪಿಸಿದರು. ಖಜಾಂಚಿ
ಚಂದ್ರಕಾಂತ ಹಾವನೂರ ಸನ್ಮಾನಿತರ ಪರಿಚಯ ಮಾಡಿದರು. ನಂತರ ಪತ್ರಕರ್ತ ಡಾ| ಶಿವರಾಮ ಅಸುಂಡಿ ರಚನೆಯ ಕೋಣನ ಮುಂದೆ ಕಿನ್ನೂರಿ
ನಾಟಕವನ್ನು ಪತ್ರಕರ್ತರೆಲ್ಲರೂ ಪ್ರದರ್ಶಿಸಿದರು. ಪತ್ರಕರ್ತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಉದಯವಾಣಿ ಇಬ್ಬರಿಗೆ ಪ್ರಶಸ್ತಿ
ಉದಯವಾಣಿ ಕಲಬುರಗಿ ಆವೃತ್ತಿಯ ಜಾಹೀರಾತು ವಿಭಾಗದ ಮ್ಯಾನೇಜರ್‌ ನಾಗಶೆಟ್ಟಿ ಡಾಕುಳಗಿ, ಜೇವರ್ಗಿ ತಾಲೂಕು ಪ್ರತಿನಿಧಿ ವಿಜಯಕುಮಾರ ಕಲ್ಲಾ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. 

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.