ಸರ್ಕಾರಿ ಆಸ್ತಿ: ಮಾಹಿತಿಗೆ ಕಾಲಾವಕಾಶ
Team Udayavani, Jul 26, 2017, 8:54 AM IST
ಕಲಬುರಗಿ: ವೇಗವಾಗಿ ಬೆಳೆಯುತ್ತಿರುವ ಮಹಾನಗರವನ್ನು 2021ರವರೆಗೆ ಚಾಲ್ತಿಯಲ್ಲಿರುವ ಮಾಸ್ಟರ್ ಪ್ಲಾನ್ ಪರಿಷ್ಕೃತ-3 ತಯಾರಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಆಸ್ತಿಗಳ ಕುರಿತು ಮಾಹಿತಿ ನೀಡಲು ಹತ್ತು ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮೊಹ್ಮದ್ ಅಸಗರ್ ಚುಲಬುಲ್ ತಿಳಿಸಿದರು.
ಮಂಗಳವಾರ ಪ್ರಾಧಿಕಾರದ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರವು ಯೋಜನಾಬದ್ಧವಾಗಿ ಬೆಳೆಯಬೇಕಾಗಿದೆ. ಈ ದಿಸೆಯಲ್ಲಿ ಸೂಕ್ತ ಕ್ರಿಯಾ ಯೋಜನೆ ರೂಪಿಸಲಾಗಿದೆ. ಯೋಜನೆಯನ್ನು ಪರಿಷ್ಕೃತಗೊಳಿಸುವ ದಿಸೆಯಲ್ಲಿ ಸರ್ಕಾರದ ಆಸ್ತಿಗಳ ಕುರಿತು ಮಾಹಿತಿ ಕಲೆ ಹಾಕಬೇಕಾಗಿದೆ. ಆ ಮಾಹಿತಿಯನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕೂಡಲೇ ನೀಡಬೇಕು ಎಂದರು. ನಗರವು ವಿಭಾಗೀಯ ಕೇಂದ್ರವಾಗಿದೆ. ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿದೆ. ಶೈಕ್ಷಣಿಕ, ವಾಣಿಜ್ಯ ಮತ್ತು ವಸತಿ ಅಭಿವೃದ್ಧಿ ಮತ್ತು ಕೈಗಾರಿಕೆಗಳು ವ್ಯಾಪಕವಾಗಿ ಬೆಳೆಯುತ್ತಿದ್ದು, ನಗರವನ್ನು ಯೋಜನಾಬದ್ಧವಾಗಿ ರೂಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಮೂರನೇ ಕ್ರಿಯಾ ಯೋಜನೆಯನ್ನು ಪರಿಷ್ಕೃತಗೊಳಿಸಲಾಗುತ್ತದೆ ಎಂದು ಹೇಳಿದರು. ವಿವಿಧ ಇಲಾಖೆಗಳು ತಮ್ಮ ತಮ್ಮ ಇಲಾಖೆಯ ವ್ಯಾಪ್ತಿಯಲ್ಲಿನ ಆಸ್ತಿಯನ್ನು ಸರ್ವೇ ನಂಬರುಗಳ ಮೂಲಕ ಮಾಹಿತಿ ಒದಗಿಸಬೇಕು. ಪರಿಷ್ಕೃತ ಕ್ರಿಯಾ ಯೋಜನೆಗೆ ಎಲ್ಲ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ಹೇಳಿದರು.
ಕುಡಾ ಪ್ರಾಧಿಕಾರದ ವ್ಯಾಪ್ತಿಯಲ್ಲಿ ನಗರದ ಸುತ್ತಮುತ್ತಲಿನ ಸುಮಾರು 33 ಗ್ರಾಮಗಳು ಬರುತ್ತವೆ. ಆ ಗ್ರಾಮಗಳಲ್ಲಿನ ಸರ್ಕಾರಿ ಆಸ್ತಿಯ ಕುರಿತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಮಾಹಿತಿ ಒದಗಿಸಬೇಕು ಎಂದು ಕುಡಾ ಅಧ್ಯಕ್ಷ ಮಹಮ್ಮದ ಅಸಗರ ಚುಲ್ಬುಲ್ ಸೂಚಿಸಿದರು. ಕುಡಾ ಆಯುಕ್ತ ಇಲಿಯಾಸ್ ಅಹ್ಮದ್, ಸದಸ್ಯರಾದ ಭೀಮರೆಡ್ಡಿ ಪಾಟೀಲ ಕುರಕುಂದಾ, ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ ಹಾಗೂ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?