ಮಳೆ ಕೊರತೆಗೆ ಅಲ್ಪಾವಧಿ ಬೆಳೆ ಹಾಳು


Team Udayavani, Aug 20, 2017, 10:49 AM IST

Farmerstory1 copy.JPG

ಅಫಜಲಪುರ: ತಾಲೂಕಿನಾದ್ಯಂತ ಮಳೆ ಕೊರತೆ ಹಿನ್ನೆಲೆಯಲ್ಲಿ ಅಲ್ಪಾವಧಿ ಬೆಳೆಗಳು ಸಂಪೂರ್ಣ ಹಾಳಾಗಿದ್ದು, ರೈತರು ಆತಂಕಪಡುವಂತೆ ಆಗಿದೆ. ಉತ್ತಮ ಮುಂಗಾರು ಮಳೆ ಬಂದ ಹಿನ್ನೆಲೆಯಲ್ಲಿ ರೈತರು ಖುಷಿಯಿಂದ ಅಲ್ಪಾವಧಿ ಬೆಳೆಗಳಾದ ಉದ್ದು, ಎಳ್ಳು, ಹೆಸರು ಬಿತ್ತನೆ ಮಾಡಿದ್ದರು. ಬಿತ್ತನೆಯಾದ ಮೇಲೆ ಮಳೆಯೇ ಬಾರದಿರುವ ಹಿನ್ನೆಲೆಯಲ್ಲಿ ಬೆಳೆಗಳು ಹಾಳಾಗಿವೆ. ಕೆಲವೆಡೆ ರೈತರು ತಾವೇ ಬಿತ್ತಿದ ಬೆಳೆಯನ್ನು ಕಿತ್ತು ಹಾಕುತ್ತಿದ್ದಾರೆ. ತಾಲೂಕಿನ ಘತ್ತರಗಿಯಲ್ಲಿ ರೈತರೊಬ್ಬರು ಮಳೆ ಆಗದಿದ್ದರೇನಂತೆ ಎಂದು ಸ್ಪಿಂಕ್ಲರ್‌ ಮೂಲಕ ನೀರು ಸಿಂಪಡಿಸಿ ನೋಡುತ್ತೇನೆ ಎಂದು ಬೆಳೆಗೆ ನೀರು ಸಿಂಪಡಿಸುತ್ತಿದ್ದಾರೆ. ಈ ಪ್ರಯತ್ನ ಫಲ ನೀಡಿದರೆ ಶ್ರಮಕ್ಕೆ ಫಲ ಸಿಗಲಿದೆ. ತಾಲೂಖೀನ ಗೊಬ್ಬೂರ (ಬಿ) ಗ್ರಾಮದಲ್ಲಿ ರೈತರು ಮಳೆ ಕೊರತೆಯಿಂದ ಬಾಡಿ ಹೋಗುತ್ತಿರುವ ಹೆಸರು ಬೆಳೆಯನ್ನು ಕಿತ್ತು ಹಾಕುತ್ತಿದ್ದಾರೆ. ಸಾಲ ಮಾಡಿಕೊಂಡು ದುಬಾರಿಯಾದರೂ ಯೋಚಿಸದೆ ಆಳುಗಳನ್ನು ಹಚ್ಚಿ ಬಿತ್ತನೆ ಮಾಡಿದ್ದ ರೈತರು ಅದೇ ಕೂಲಿ ಆಳುಗಳಿಂದ ಬಿತ್ತಿದ ಬೆಳೆಯನ್ನು ಕಿತ್ತಿಸುತ್ತಿದ್ದಾರೆ. ಹಿಂಗಾರಿ ಬೆಳೆ ಮೇಲೆ ಆಸೆ: ಮುಂಗಾರು ಮಳೆ ಕೈ ಕೊಟ್ಟಿದ್ದು, ಹಿಂಗಾರು ಮಳೆ ಉತ್ತಮವಾಗಿ ಆದರೆ ಜೋಳವನ್ನಾದರೂ ಬೆಳೆದುಕೊಂಡು ವರ್ಷದ ಗಂಜಿ ಮಾಡಿಕೊಳ್ಳುತ್ತೇವೆ. ದನಕರುಗಳಿಗೆ ಕಣಕಿ ಮೇವಾದರೂ ಸಿಗಲಿದೆ. ಹಿಂಗಾರು ಮಳೆಯೂ ಬಾರದಿದ್ದರೆ ನಾವು ಈ ಬಾರಿ ಗುಳೆ ಹೋಗುವುದಂತು ಖಂಡಿತ ಎಂದು ರೈತರು ತಮ್ಮ ಗೋಳನ್ನು ಹೇಳಿಕೊಳ್ಳುತ್ತಾರೆ. ಈ ಬಾರಿ ತಾಲೂಕಿನಾದ್ಯಂತ 2095 ಹೆಕ್ಟೇರ್‌ ಪ್ರದೇಶದಲ್ಲಿ ಮಳೆಯಾಶ್ರಿತ ಬಿತ್ತನೆಯಾಗಿದೆ. ಈ ಪೈಕಿ 1676 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಇದು ಮಳೆಯಾಶ್ರಿತ ಬೆಳೆಯಾಗಿದ್ದರಿಂದ ಸ್ಪಿಂಕ್ಲರ್‌ ಪಯೋಗಿಸದರೆ ಪ್ರಯೋಜನವಿಲ್ಲ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶರಣಗೌಡ ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ

ಹಿಂಗಾರು ಕೈಕೊಟ್ಟರೆ ಬೀದಿಪಾಲು: ಮುಂಗಾರು ಮಳೆ ಬಾರದೇ ಇರುವುದರಿಂದ ಬಿತ್ತಿದ ಬೆಳೆ ಹಾಳಾಗಿದೆ. ಹಿಂಗಾರು ಮಳೆಯಾದರೂ ಉತ್ತಮವಾಗಿ ಬಂದರೆ ಜೋಳ ಬೆಳೆದುಕೊಂಡು ನಮಗೂ ಮತ್ತು ದನಕರುಗಳಿಗೂ
ತುತ್ತಿನ ಗಂಜಿ ಬೆಳೆದುಕೊಳ್ಳುತ್ತೇವೆ. ಇಲ್ಲದಿದ್ದರೆ ನಮ್ಮ ಬಾಳು ಬೀದಿಪಾಲಾಗಲಿದೆ. 

ಶಿವಾನಂದ ಬಸಣ್ಣ ಕಲಶೆಟ್ಟಿ, ಗೊಬ್ಬೂರ (ಬಿ) ಗ್ರಾಮದ ರೈತ

ಬೆಳೆ ಕೈ ಹಿಡಿಯದಿದ್ದರೆ ಪರದಾಟ: ಸ್ಪಿಂಕ್ಲರ್‌ ಬಳಸಿ ಹೆಸರು ಬೆಳೆಗೆ ನೀರು ಹರಿಸುತ್ತಿದ್ದೇನೆ. ಇದರಿಂದ ಬೆಳೆ ಕೈಹಿಡಿದರೆ ನಾವು, ನಮ್ಮ ಕುಟುಂಬದವರು ಬದುಕಲು ಸಹಕಾರಿಯಾಗಲಿದೆ. ಇಲ್ಲದಿದ್ದರೆ ತುತ್ತು ಅನ್ನಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಬೆಳೆ ಕೈ ಹಿಡಿದರೆ ಇತರ ರೈತರಿಗೂ ಮಾದರಿ ಆಗಲಿದೆ.
ಮಹಾದೇವಪ್ಪ ಗುರುಪ್ಪ ಭೂಸನೂರ, ಘತ್ತರಗಾ ಗ್ರಾಮದ ರೈತ

ಟಾಪ್ ನ್ಯೂಸ್

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.