ಸಾಕ್ಷರತೆ ಅಭಿವೃದ್ಧಿಗೆ ಮಾನದಂಡ


Team Udayavani, Aug 20, 2017, 11:04 AM IST

saksharate.jpg

ಕಲಬುರಗಿ: ಸಾಕ್ಷರತೆ, ಆರೋಗ್ಯ ಮತ್ತು ತಲಾ ಆದಾಯ ಆಯಾ ದೇಶದ ಅಭಿವೃದ್ಧಿಯ ಮಾನದಂಡಗಳಾಗಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಾಂತಗೌಡ ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು. ಶನಿವಾರ ನಗರದ ಸಾರ್ವಜನಿಕ ಉದ್ಯಾನವನದ ರೋಟರಿ ಶಾಲೆ ಸಭಾಂಗಣದಲ್ಲಿ ರೋಟರಿ ಕ್ಲಬ್‌ ಹಮ್ಮಿಕೊಂಡಿದ್ದ ಭಾರತ ಸಾಕ್ಷಾರತಾ ಅಭಿಯಾನದಡಿ ಸರಕಾರಿ ಪ್ರೌಢಶಾಲೆ ಶಿಕ್ಷಕರಿಗಾಗಿ ಏರ್ಪಡಿಸಿದ್ದ ಸಮಗ್ರ ರಸಾಯನಶಾಸ್ತ್ರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಭಾರತದ ಸಾಕ್ಷರತಾ ಪ್ರಮಾಣ ಶೇ.75, ಕರ್ನಾಟಕದ್ದು ಶೇ.76 ಮತ್ತು ಕಲಬುರಗಿ ಜಿಲ್ಲೆಯದು ಶೇ 68 ರಷ್ಟು ಇದೆ. ಸಾಕ್ಷರತೆ ಪ್ರಮಾಣವನ್ನು ಶತ ಪ್ರತಿಶತವಾಗಿಸುವ ಪ್ರಯತ್ನವನ್ನು ಶಿಕ್ಷಣ ಇಲಾಖೆ ನಡೆಸುತ್ತಿದೆ. ಈ ಕಾರ್ಯದಲ್ಲಿ ರೋಟರಿ ಕ್ಲಬ್‌ನಂತಹ ಸಂಸ್ಥೆಗಳು ಉದಾತ್ತ ಮನಸ್ಸಿನಿಂದ ಶಿಕ್ಷಣ ಇಲಾಖೆ ಜತೆ ಕೈಜೋಡಿಸುತ್ತಿರುವುದು ಶ್ಲಾಘನೀಯ ಎಂದರು. ರೋಟರಿ ಕ್ಲಬ್‌ ಜಿಲ್ಲಾ ಸಾಕ್ಷಾರತಾ ಸಮಿತಿ ಅಧ್ಯಕ್ಷ ಡಾ| ಬಿ.ಇ. ರಂಗಸ್ವಾಮಿ ಮಾತನಾಡಿ, ಪೋಲಿಯೋ ನಿರ್ಮೂಲನಾ ಅಭಿಯಾನದಲ್ಲಿ ತೊಡಗಿಸಿಕೊಂಡ ರೋಟರಿ ಕ್ಲಬ್‌ ಇದೀಗ ಸಾಕ್ಷಾರತಾ ಆಂದೊಲನ ಕೈಗೆತ್ತಿಕೊಂಡಿದೆ. ಕಳೆದ 3ವರ್ಷದಲ್ಲಿ ಸುಮಾರು 15ಸಾವಿರ ಶಿಕ್ಷಕರಿಗೆ ವಿವಿಧ ವಿಷಯದ ತರಬೇತಿ ನೀಡಲಾಗಿದೆ. ಜಿಲ್ಲೆಯಲ್ಲಿ ವಿವಿಧ ಶಾಲೆಗಳಿಗೆ 200 ಇ ಕಲಿಕಾ ಉಪಕರಣ ವಿತರಿಸಲಾಗಿದೆ. ಶಾಲೆ ಬಿಟ್ಟ 6 ರಿಂದ 13 ವರ್ಷದದೊಳಗಿನ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ಉದ್ದೇಶ ರೋಟರಿ ಸಂಸ್ಥೆ ಹೊಂದಿದ್ದು, ಇದಕ್ಕಾಗಿಯೇ ಕಲಿಕಾಕೇಂದ್ರ ತೆರೆಯಲಾಗುವುದು. ವಿದ್ಯಾರ್ಥಿಗಳ ಅಭಿಪ್ರಾಯವನ್ನು ಆಧರಿಸಿ ಶಿಕ್ಷಕರನ್ನು ಗುರತಿಸಿ ಶಿಕ್ಷಕರ ದಿನಾವಾದ ಸಪ್ಟೆಂಬರ್‌ 5ರಂದು ಗೌರವಿಸಲಾಗುತ್ತಿದೆ ಎಂದರು. ರೋಟರಿ ಕ್ಲಬ್‌ ಅಸಿಸ್ಟಂಟ್‌ ಗೌರ್ನರ್‌ ಲಕ್ಷ್ಮೀಕಾಂತಮೈಲಾಪುರ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿಆಗಮಿಸಿದ ಪದ್ಮಾಪ್ರಭು, ಕರೀಮ ಅಂಜುಮ್‌, ವಲಯ ಕಾರ್ಯದರ್ಶಿ ಚೇತನ ಜೋಶಿ, ರೋಟರಿ ಕ್ಲಬ್‌ ಅಧ್ಯಕ್ಷರಾದ ಚಂದ್ರಶೇಖರ ತಳ್ಳಳ್ಳಿ, ಧನರಾಜ ಭಾಷಗಿ, ಎಂ.ಮುರಳಿಧರ, ಚಂದ್ರಶೇಖರ ಸುತ್ರಾವೆ, ಮಂಜುನಾಥ ಮಂಗಾಣೆ ಹಾಜರಿದ್ದರು. ರೋಟರಿ ಕ್ಲಬ್‌ ಸಾಕ್ಷರತಾ ವಲಯ ಅಧ್ಯಕ್ಷರಾದ ಡಾ| ಕೇಶವ ಬಿರಾದಾರ ಸ್ವಾಗತಿಸಿದರು. ಸುಮಾರು 160ಕ್ಕಿಂತ ಹೆಚ್ಚು ಶಿಕ್ಷಕ ಶಿಕ್ಷಕಿಯರು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.