ತೈಲೋತ್ಪನ್ನ ಬೆಲೆ ಹೆಚ್ಚಳಕ್ಕೆ ಆಮ್‌ ಆದ್ಮಿ ಖಂಡನೆ


Team Udayavani, Sep 22, 2017, 10:26 AM IST

gul-1.jpg

ಕಲಬುರಗಿ: ತೈಲೋತ್ಪನ್ನಗಳಾದ ಪೆಟ್ರೋಲ್‌, ಡಿಸೆಲ್‌ ಹಾಗೂ ಎಲ್‌ಪಿಜಿ ಗ್ಯಾಸ್‌ದ ದರ ಹೆಚ್ಚಳ ಆಗಿರುವುದನ್ನು ಖಂಡಿಸಿ, ಬೆಲೆ ಇಳಿಕೆಗೆ ಆಗ್ರಹಿಸಿ ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತರು ನಗರದಲ್ಲಿ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾದರೂ ದೇಶದಲ್ಲಿ ಮಾತ್ರ ತೈಲ ಬೆಲೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಾ ಹೋಗುತ್ತಿವೆ. ಇದನ್ನು ನೋಡಿದರೆ ಕೇಂದ್ರದ ಬಿಜೆಪಿ ಸರ್ಕಾರ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದೆ ಎಂದೆನಿಸುತ್ತಿದೆ ಎಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಬಿಜೆಪಿಯ ಜನವಿರೋಧಿ ನೀತಿಗೆ ಪ್ರತಿ ಕಾಂಗ್ರೆಸ್‌ ವಿರೋಧಿಸದೇ ಮೌನವಾಗಿರುವುದನ್ನು ಗಮನಿಸಿದರೆ ಬೆಲೆ ಹೆಚ್ಚಳವನ್ನು ಅದು ಬೆಂಬಲಿಸುತ್ತಿದೆ ಎನ್ನುವುದು ತಿಳಿಯುತ್ತದೆ. ಹಿಂದಿನ ಕಾಂಗ್ರೆಸ್‌ ಸರ್ಕಾರದ ಬೆಲೆ ಹೆಚ್ಚಳವನ್ನು ಕೇಂದ್ರದ ಬಿಜೆಪಿ ಸರ್ಕಾರ ಮುಂದುವರಿಸುತ್ತಿದೆ ಎಂದು ಟೀಕಿಸಿದರು. ಯುಪಿಎ ಸರ್ಕಾರದ ಸಂದರ್ಭದಲ್ಲಿ ಗುಜರಾತ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ, ರಾಜನಾಥಸಿಂಗ್‌ರು ತೈಲ ಬೆಲೆ ಹೆಚ್ಚಳ ಖಂಡಿಸಿ, ಅಧಿಕಾರಕ್ಕೆ ಬಂದರೆ ದರ ಇಳಿಸುವ ಭರವಸೆ ನೀಡಿದ್ದರು. ಆ ಭರವಸೆ ಈಡೇರಿಸುವಲ್ಲಿ ವಿಫಲರಾಗಿದ್ದಾರೆ ಎಂದರು.

ಪ್ರಧಾನಿ ಮೋದಿ ಚುನಾವಣೆ ಸಂದರ್ಭದಲ್ಲಿ ಭ್ರಷ್ಟಾಚಾರ ಮುಕ್ತ ಭಾರತ, ಡಿಜಿಟಲ್‌ ಇಂಡಿಯಾ, ಅಗತ್ಯ ವಸ್ತುಗಳ
ಬೆಲೆ ಇಳಿಕೆ, ಪಾಕಿಸ್ತಾನಕ್ಕೆ ತಕ್ಕ ಉತ್ತರ, ವಿದೇಶದಲ್ಲಿನ ಕಪ್ಪು ಹಣ ದೇಶಕ್ಕೆ ತರುವುದು ಸೇರಿದಂತೆ ಅನೇಕ ಆಶ್ವಾಸನೆಗಳನ್ನು ನೀಡಿದ್ದರೂ, ಆ ಆಶ್ವಾಸನೆಗಳೆಲ್ಲ ಹುಸಿಯಾಗಿವೆ. ಸುಳ್ಳು ಆಶ್ವಾಸನೆ ನೀಡುವುದಲ್ಲದೆ ಸಮಾಜ ಒಡೆಯುವ ಕೆಲಸವನ್ನು ಈಗ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಈಗಲಾದರೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡು ತೈಲ ಹಾಗೂ ಗ್ಯಾಸ್‌ ಸಿಲೆಂಡರ್‌ ಬೆಲೆ ಕಡಿಮೆ ಮಾಡಬೇಕು. ಇಲ್ಲವಾದರೆ ಮುಂದಿನ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಪಕ್ಷದ ಜಿಲ್ಲಾ ಕೋರ್‌ ಸಮಿತಿ ಸದಸ್ಯ ಜಗದೀಶ ಬಳ್ಳಾರಿ, ಸೈಯ್ಯದ್‌ ಖಲೀಲುದ್ದಿನ್‌, ಈರಣ್ಣಗೌಡ ಪಾಟೀಲ, ಶೇಖರಸಿಂಗ್‌, ವಿಶಾಲ ಗುತ್ತೇದಾರ, ಕಿರಣ ರಾಠೊಡ, ಮೀರ್‌ ಮೊಹಸೀನ್‌, ವಿಶಾಲ ಬದೋಲೆ, ಗಜೇಂದ್ರ ಪಾಟೀಲ, ಶರಣು ಬಿರಾದಾರ, ಶಿವಕುಮಾರ ಕಾಂಬಳೆ ಹಾಗೂ ಇತರರಿದ್ದರು.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.