ಲಿಂಗಾಯತ ರ್ಯಾಲಿಗೆ ಜನಸಾಗರ
Team Udayavani, Sep 25, 2017, 10:36 AM IST
ಕಲಬುರಗಿ: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ರಾಷ್ಟ್ರೀಯ ಬಸವ ಸೇನಾದ ಅಧ್ಯಕ್ಷರಾಗಿ ಸಚಿವ ವಿನಯ ಕುಲಕರ್ಣಿ ಅವರು ಬಸವ ಧರ್ಮದ ಧ್ವಜ ಸ್ವೀಕರಿಸಿದರು.
ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗೆ ಆಗ್ರಹಿಸಿ ರವಿವಾರ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ನಡೆಸಲಾದ ಲಿಂಗಾಯತ ಮಹಾರ್ಯಾಲಿಯಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ್ದ ಬಸವಾಭಿಮಾನಿಗಳು, ಮಠಾಧೀಶರು ಮತ್ತು ವಿವಿಧ ರಾಜಕೀಯ ಗಣ್ಯರ ಸಮ್ಮುಖದಲ್ಲಿ ಕುಲಕರ್ಣಿ ಧ್ವಜ ಸ್ವೀಕರಿಸಿದರು.
ನಗರದ ನೆಹರು ಗಂಜ್ದಿಂದ ಸಮಾವೇಶದ ಸ್ಥಳ ನೂತನ ವಿದ್ಯಾಲಯವರೆಗೂ ಬೃಹತ್ ರ್ಯಾಲಿ ನಡೆಯಿತು. ಲಾಹೋಟಿ ಕಲ್ಯಾಣ ಮಂಟಪದ ಎದುರು ಸಚಿವರಾದ ಎಂ.ಬಿ.ಪಾಟೀಲ, ಬಸವರಾಜ ರಾಯರಡ್ಡಿ, ವಿನಯ ಕುಲಕರ್ಣಿ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಶಾಸಕ ಶರಣಪ್ಪ ಮಟ್ಟೂರ ಮುಂತಾದವರು ಚಾಲನೆ ನೀಡಿ ರ್ಯಾಲಿ ಪಾದಯಾತ್ರೆಯಲ್ಲೂ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ವೇದಿಕೆಯಲ್ಲಿ ನೂರಾರು ಸ್ವಾಮೀಜಿಗಳು, ರಾಜಕೀಯ ಗಣ್ಯರು, ಹಾರಾಡುತ್ತಿರುವ ಬಸವ ಧರ್ಮದ ಧ್ವಜ, ಸಹಸ್ರಾರು ಜನಸಾಗರದ ಸಮಾವೇಶದಲ್ಲಿ ಲಿಂಗಾಯತ ಧರ್ಮದ ಮಾನ್ಯತೆ ಹಾಗೂ ಸಮಾಜ ಸಂಘಟನೆ ನಿಟ್ಟಿನಲ್ಲಿ ಹೊಸತನ ಮೂಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು