ಸಹಕಾರ ನಗರದಲ್ಲೊಂದು ಸುಂದರ ಬಸ್‌ ನಿಲ್ದಾಣ


Team Udayavani, Mar 18, 2017, 4:54 PM IST

1004.jpg

ಬಿಸಿಲ ಬೇಗೆಯಲ್ಲಿ ದಣಿದು ಬರುವ ಪ್ರಯಾಣಿಕರಿಗೆ ಈ ಬಸ್‌ ನಿಲ್ದಾಣದಲ್ಲಿ ಸಂಗೀತದ ಇಂಪಿನೊಂದಿಗೆ ಕನ್ನಡದ ಕಂಪು ಸವಿಯುವ ಅವಕಾಶ. ಜತೆಗೆ ಕನ್ನಡದ ವರ್ಣಮಾಲೆಯಿಂದ ಹಿಡಿದು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರ ಸಂಪೂರ್ಣ ಮಾಹಿತಿ. 

ಇದು ಯಲಹಂಕದ ಸಹಕಾರ ನಗರದಲ್ಲಿ ನಿರ್ಮಾಣವಾಗಿರುವ “ಸುವರ್ಣ ಕರ್ನಾಟಕ ಬಿಎಂಟಿಸಿ ಬಸ್‌ ತಂಗು ನಿಲ್ದಾಣ’ದ ವಿಶೇಷತೆ.

 ಅರಮನೆ ಹಾಗೂ ಗುಮ್ಮಟಗಳ ವಿನ್ಯಾಸದಲ್ಲಿ ಕಲ್ಲುಗಳಿಂದ ನಿರ್ಮಿಸಲಾಗಿರುವ ಈ ತಂಗುದಾಣ ಸುತ್ತಮುತ್ತಲ ಭಾಗದ ಪ್ರಯಾಣಿಕರ ಅಚ್ಚುಮೆಚ್ಚಿನ ತಾಣವೂ ಹೌದು.

ತಂಗುದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕುಳಿತುಕೊಳ್ಳಲು ಸುಸಜ್ಜಿತವಾದ ಬೆಂಚು ಕಲ್ಲುಗಳನ್ನು ಅಳವಡಿಸಲಾಗಿದೆ. ಜತೆಗೆ ಪ್ರಯಾಣಿಕರಿಗೆ ಸಮಯ ನೋಡಿಕೊಳ್ಳಲು ಗಡಿಯಾರವೂ ಇಲ್ಲಿದೆ. ಕುಡಿಯುವ ನೀರಿನ ಸೌಲಭ್ಯವೂ ಇದೆ.

ಸಹಕಾರ ನಗರದ ನಿವಾಸಿ ಸಮಾಜ ಸೇವಕ ಎಂ.ಎಸ್‌.ಸುರೇಶ್‌ ಕುಮಾರ್‌ ಎಂಬುವವರು ಬಸ್‌ ತಂಗುದಾಣವನ್ನು ಸ್ವಂತ ವೆಚ್ಚದಲ್ಲಿ  ನಿರ್ಮಿಸಿದ್ದು, ಭದ್ರತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಎರಡು ಸಿ.ಸಿ ಟಿ.ವಿ ಕ್ಯಾಮೆರಾಗಳನ್ನೂ ಅಳವಡಿಸಲಾಗಿದೆ.  ತಂಗುದಾಣದ ಸ್ವತ್ಛತೆಯನ್ನು ನೋಡಿಕೊಳ್ಳಲು ಪ್ರತ್ಯೇಕವಾಗಿ ಒಬ್ಬರು ಸಿಬ್ಬಂದಿಯನ್ನು ನೇಮಿಸಲಾಗಿದೆ.

ಬಸ್‌ ನಿಲ್ದಾಣ ಸಂಪೂರ್ಣ ಕನ್ನಡಮಯವಾಗಿದ್ದು ಕನ್ನಡದ ವರ್ಣಮಾಲೆ, ಕನ್ನಡದ ಪ್ರಸಿದ್ಧ ಸಾಹಿತಿ ಲೇಖಕರು, ರಾಜ ಮನೆತನಗಳು, ದಾಸರು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ಕನ್ನಡ ಶಾಸನಗಳು, ರಾಜ್ಯದ ಗಿರಿಧಾಮಗಳು, ಪ್ರೇಕ್ಷಣೀಯ ಸ್ಥಳಗಳು, ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಕನ್ನಡಿಗರು, ಮ್ಯಾಗ್ಸೆಸ್ಸೆ ಪ್ರಶಸ್ತಿ ಪುರಸ್ಕೃತ ಕನ್ನಡಿಗರು, ಕನ್ನಡ ಚಲನಚಿತ್ರ ಕ್ಷೇತ್ರದ ಮಹನೀಯರು… ಹೀಗೆ ಕನ್ನಡದ ಎಲ್ಲ ವಿಭಾಗಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳ ಪರಿಚಯ ಮಾಹಿತಿ ಸಹ ಇದೆ. ಬಸ್‌ ತಂಗುದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕನ್ನಡದ ಎಲ್ಲ ದಿನ ಪತ್ರಿಕೆಗಳೂ ಲಭ್ಯವಿದೆ.

ಸಂಗೀತದ ಇಂಪು
ತಂಗುದಾಣದಲ್ಲಿ ಸಂಗೀತ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಬೆಳಗಿನಿಂದ ರಾತ್ರಿಯವರೆಗೆ ನಿರಂತರವಾಗಿ ಸಂಗೀತ ಕೇಳಬಹುದಾಗಿದೆ. ಬೆಳಗ್ಗೆ 6ರಿಂದ 7ರವರೆಗೆ ಸುಪ್ರಭಾತ, 7-8 ಭಕ್ತಿ ಗೀತೆಗಳು, 8 ರಿಂದ 1 ಜಾನಪದ ಗೀತೆಗಳು, 1ರಿಂದ 4ರವರೆಗೆ ಶಾಸ್ತ್ರೀಯ ಸಂಗೀತ, ಸಂಜೆ 4ರಿಂದ 8ವರೆಗೆ ಹಳೆಯ ಕನ್ನಡ ಚಲನಚಿತ್ರ ಗೀತೆಗಳು, ರಾತ್ರಿ 8 ರಿಂದ 12ರ ತನಕ ಕನ್ನಡ ಹೊಸ ಚಲನಚಿತ್ರ ಗೀತೆಗಳನ್ನು ಕೇಳಿ ಆನಂದಿಸಬಹುದಾಗಿದೆ. 

*ಇಂತಹ ಒಳ್ಳೆಯ ಕೆಲಸಗಳನ್ನು ಮಾಡಿರುವವರಿಗೆ ನಾಗರಿಕರು ಧನ್ಯವಾದಗಳನ್ನು ಹೇಳಬೇಕು. ನಗರದ ಎಲ್ಲ ಭಾಗಗಳಲ್ಲಿ ಇಂತಹ ನಿಲ್ದಾಣಗಳ ನಿರ್ಮಾಣಕ್ಕೆ ಬಿಬಿಎಂಪಿ ಮುಂದಾಗಬೇಕು.
– ಆರ್‌.ಎಸ್‌.ಚಿಕ್ಕಮs…, ಸಹಕಾರ ನಗರ ನಿವಾಸಿ

*ಬಸ್‌ ನಿಲ್ದಾಣಕ್ಕೆ ಬಂದು ಬಸ್‌ಗಾಗಿ ಕಾಯುವ ಪ್ರಯಾಣಿಕರು ಬಸ್‌ ಬರುವ ವೇಳೆಯೊಳಗೆ ಕನ್ನಡ ಕುರಿತು ಹಲವಾರು ಮಾಹಿತಿ ಪಡೆಯಬಹುದು. ಇದರೊಂದಿಗೆ ಕನ್ನಡ ಹಲವು ಮಾದರಿಯ ಸಂಗೀತ ಪ್ರಕಾರಗಳನ್ನು ಸವಿಯುವ ಅವಕಾಶ ಇಲ್ಲಿದೆ. 
– ಶಶಿಕುಮಾರ್‌, ಸಂಜೀವಿನಿ ನಗರ ನಿವಾಸಿ

*ಬಸ್‌ ನಿಲ್ದಾಣದಲ್ಲಿ ಸಂಗೀತ ಕೇಳುವ ವ್ಯವಸ್ಥೆಯನ್ನು ಕಲ್ಪಿಸಿರುವುದು ಉತ್ತಮ ಸಂಗತಿಯಾಗಿದೆ. ಇದರೊಂದಿಗೆ ಕನ್ನಡ ಕುರಿತು ಜಾಗೃತಿ ಮೂಡಿಸುವ ಫ‌ಲಕಗಳು ಮತ್ತು ಸಂಚಾರಿ ನಿಯಮಗಳ ಪಾಲನೆ ಕುರಿತಂತೆ ಸಂದೇಶಗಳು ಮತ್ತು ಮಹಿಳೆಯರ ಸುರಕ್ಷತೆಗಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಿರುವುದು ಅಭಿನಂದನೀಯ. 
– ಮಹೇಶ್‌, ಆರ್‌.ಟಿ.ನಗರ

– ವೆಂ. ಸುನೀಲ್‌ಕುಮಾರ್‌ 

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.