ವಿಶ್ವ ರಂಗಭೂಮಿ ದಿನಾಚರಣೆ
Team Udayavani, Mar 25, 2017, 4:01 PM IST
27 ಮಾರ್ಚ್ 2017ರಂದು ಸೋಮವಾರ ಪರಂಪರಾ ಕಲ್ಚರಲ್ ಫೌಂಡೇಶನ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶ್ವ ರಂಗಭೂಮಿ ದಿನಾಚರಣೆ ಆಯೋಜಿಸಲಾಗಿದೆ.
ಅಂದು ಸಂಜೆ 5 ಗಂಟೆಗೆ ನಯನ ಸಭಾಂಗಣದಲ್ಲಿ ನಡೆಯಲಿರುವ ರಂಗಸಂಗೀತ ಮತ್ತು ರಂಗಗೌರವ ಕಾರ್ಯಕ್ರಮವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸುವರು.
ಕೇಂದ್ರ ಸಂಗೀತ ಮತ್ತು ನಾಟಕ ಅಕಾಡೆಮಿ ಪ್ರಶಸ್ತಿ ಹಿರಿಯ ಕಲಾವಿದ ಡಾ.ಲಕ್ಷ್ಮಣದಾಸ್, ಬಿಬಿಎಂಪಿ ಸಾರ್ವಜನಿಕ ಆರೋಗ್ಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷಎಂ.ಮುನಿರಾಜು, ರಂಗಕರ್ಮಿ ಮುನಿಮಾರಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಸಮಾಜ ಸೇವಾ ಧುರೀಣ ಎಸ್.ವಿ.ಶಿವರಾಂ ಅಧ್ಯಕ್ಷತೆ ವಹಿಸುವರು. ಪರಂಪರಾ ಅಧ್ಯಕ್ಷ ಜಿ.ಪಿ.ರಾಮಣ್ಣ ಉಪಸ್ಥಿತರಿರುವರು. ಇದೇ ಸಂದರ್ಭದಲ್ಲಿ ಖ್ಯಾತ ರಂಗಕರ್ಮಿ ಹಾಗೂ ವಾಗ್ಮಿ ವೈ.ವಿ.ಗುಂಡೂರಾವ್ ಮತ್ತು ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಸದಸ್ಯ, ರಂಗಕರ್ಮಿ ಎಂ.ಎಸ್.ಗುಣಶೀಲನ್ ಅವರಿಗೆ ರಂಗಗೌರವ ಸಲ್ಲಿಸಲಾಗುವುದು. ಸಭಾ ಕಾರ್ಯಕ್ರಮದ ಆರಂಭಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ರಂಗಕಲಾವಿದರ ಸಂಘದ ಸದಸ್ಯರು ರಂಗಸಂಗೀತ ಕಾರ್ಯಕ್ರಮ ನಡೆಸಿಕೊಡುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ