ನಿಮ್ಮ ಮನೆ ದುರ್ಗಾ, ಸರಸ್ವತಿ, ಲಕ್ಷ್ಮೀಯರ ತಾಣವಾಗಬೇಕೆ?


Team Udayavani, Jul 17, 2017, 2:45 AM IST

vastu.jpg

ಭಾರತೀಯ ವಾಸ್ತುಕಲೆ, ವಸ್ತು ಸಂಯೋಜನೆಗಳನ್ನು ಸೂಕ್ತ ರೀತಿಯಲ್ಲಿ ಹೊಂದಿಸಿಡಲು ಒತ್ತಿ ಹೇಳುತ್ತದೆ. ಉದಾಹರಣೆಗೆ ಪವಿತ್ರವಾದ ತುಳಸಿ, ದೂರ್ವಾಂಕುರ ಗಂಧ, ರುದ್ರಾಕ್ಷಿ, ಶಂಖ, ಸಾಲಿಗ್ರಾಮ, ಗಂಟೆ, ಸುವಾಸನಾ ಬತ್ತಿ, ಆರತಿಯ ಸಲಕರಣೆಗಳು ದೇವರ ಮನೆಯಲ್ಲಿಯೇ ಇರಬೇಕೇ ವಿನಃ ಅದನ್ನು ಇನ್ನೆಲ್ಲಿಯೋ ಇಡಕೂಡದು. ಪುಸ್ತಕಗಳನ್ನು ಓದುವ ಕೋಣೆ, ಮಲಗುವ ಕೋಣೆ, ಹಜಾರದಲ್ಲಿ ಇಡಬೇಕೇ ವಿನಃ ಬೇರೆಲ್ಲಿಯೂ ಇಡಬಾರದು.
ಅಲ್ಲಿಯೂ ಸಹ ಪುಸ್ತಕಗಳ ರಾಶಿ ತುಂಬಿಸಿರಬಾರದು. ಪುಸ್ತಕಗಳು ನಮ್ಮ ಸಂಸ್ಕೃತಿಯಲ್ಲಿ ದೇವಿ ಸರಸ್ವತಿಯ ವಾಸಸ್ಥಾನ. ಪ್ರತ್ಯಕ್ಷವಾಗಿ ಅದು ಸರಸ್ವತಿಯೇ ಆಗಿದೆ. ಹೀಗಾಗಿ ಪವಿತ್ರತೆಯನ್ನು ಉಳಿಸಿಕೊಳ್ಳುವ ವಿಚಾರ ಪುಸ್ತಕಗಳ ಬಗ್ಗೆ ಅನಿವಾರ್ಯವಾಗಿದೆ. ನಿಯತಕಾಲಿಕೆಗಳು ಹಜಾರದಲ್ಲಿರುವುದು ಸೂಕ್ತ. ನಿಯತಕಾಲಿಕೆಗಳು ಹೊಸ ಕಾಲದ ಆವಿಷ್ಕಾರ. ಅವು ರದ್ದಿಗೆ ಸೇರಲ್ಪಡುವ ವಿಚಾರವನ್ನು ಗಮನಿಸಿ, ಅವನ್ನು ಹಜಾರದಲ್ಲಿಡುವುದು ತಾರ್ಕಿಕವಾಗಿ ಸರಿ. ಸಂಗ್ರಹಯೋಗ್ಯ ಪುಸ್ತಕಗಳನ್ನು ಓದಿನ ಕೋಣೆಯಲ್ಲಿ ಶಿಸ್ತಾಗಿ ಜೋಡಿಸಿಡಬೇಕು.

ರದ್ದಿ ಪೇಪರುಗಳು, ಉಪಯೋಗವಿರದ ಬಾಟಲು, ಕರಡಿಗೆ, ಪೊಟ್ಟಣ, ಪ್ಲಾಸ್ಟಿಕ್‌ ತ್ಯಾಜ್ಯ, ಟೂತ್‌ ಪೇಸ್ಟ್‌ ಟ್ಯೂಬುಗಳು, ಟಿನ್ನು, ತುಕ್ಕು ಹಿಡಿದ ವಸ್ತುಗಳು, ಉಪಯೋಗಕ್ಕೆ ಬಾರದ ಆದರೆ ಇರಲಿ ಎಂದು ಇಟ್ಟುಕೊಂಡ ಹರಗಣಗಳನ್ನು
ಸೂಕ್ತವಾಗಿ ವಿಲೇವಾರಿ ಮಾಡಿ. ಮನೆಯಿಂದ ದೂರವಿಡುವುದೇ ಕ್ಷೇಮ. ಪೀಠೊಪಕರಣಗಳ ವಿಚಾರದಲ್ಲಿ ಜಾಗ್ರತೆ ಇರಲಿ. ಎಂಥೆಂಥದೋ ರೀತಿಯಲ್ಲಿ ಜೋಡಿಸಿಡಬಾರದು. ಹಲವು ಸಲ ಸೋಫಾಗಳು ಕುರ್ಚಿಗಳು ಮನೆಗೆ ಬರುವ ಅಭ್ಯಾಗತರನ್ನು ಒಂದು ದಿವ್ಯದ ಕಲ್ಪನಾಲಹರಿಗೆ ಒಯ್ಯುವ ಹಾಗೆ ಇರಲಾರದು. ಬೇಕಾಬಿಟ್ಟಿ ಇರುತ್ತದೆ.

ಬದಲು ಅಂದವಾಗಿ ಜೋಡಿಸಿಟ್ಟರೆ ಅತಿಥಿಗೆ ಒಂದು ಸುಂದರ ತಾಣಕ್ಕೆ ಹಾರ್ದಿಕವಾದ ತೃಪ್ತಿಯೊಂದಿಗೆ ಬಂದ ಅನುಭವವಾಗುತ್ತದೆ. ಒಳ್ಳೆಯ ವಿಚಾರವನ್ನು ಹಂಚಿಕೊಳ್ಳಬಹುದು. ಮನೆಗೆ ಬರುತ್ತಿರುವಂತೆ ಹೊರಗೆ ಓಡಿಹೋಗುವ
ಅನುಭವ ಆಗಬಾರದು. ಅಡುಗೆ ಮನೆಯಲ್ಲಿ ಅಗ್ನಿಗೆ ಸಂಬಂಧಿಸಿದ ಸಲಕರಣೆಗಳು, ಒಲೆಯ ಬೆಂಕಿಯಲ್ಲಿ ಅಡುಗೆಗೆ ಒದಗಿ ಬರುವ ಸರಂಜಾಮುಗಳು ಇರಬೇಕು. ಆಗ್ನೇಯ ದಿಕ್ಕನ್ನು ಅಡುಗೆಯ ಕೋಣೆಯ ಒಳಗೆ, ಅಡುಗೆಗೆ ಬೇಕಾದ ಇತರ ಘಟಕ ಗ್ಯಾಸ್‌, ವಿದ್ಯುತ್‌ ಸ್ಟೌವ್‌, ಒಲೆಯ ಹತ್ತಿರವೇ ಆಗಿರದ ಹಾಗೆ, ಆದರೂ ಆಗ್ನೇಯದ ಸಮೀಪ μÅಡುj,
ಪಾತ್ರೆ, ಹರಿವಾಣ ಲೋಟ, ಮುಚ್ಚಳ ಇತ್ಯಾದಿ ವಸ್ತುಗಳನ್ನು ಅಂದವಾಗಿ ಜೋಡಿಸಿರಬೇಕು. ಅಡುಗೆ ಮನೆಯಲ್ಲೇ ಅಥವಾ ಹಜಾರದಲ್ಲೇ ಊಟದ ಸ್ಥಳ ಇರಬಾರದು. ದೇವರ ಮನೆ ಅಥವಾ ಪೀಠ ಕೂಡಾ. ಊಟದ ಸ್ಥಳಕ್ಕೂ, ದೇವರ ಪೀಠಕ್ಕೂ, ದೇವರ ಪೀಠದಿಂದ ಸ್ನಾನ ಗೃಹಗಳಿಗೂ, ಶೌಚಾಲಯಗಳಿಗೂ ಅಂತರ ಇರಬೇಕು. ಒಂದು ಕಡೆಯ ವಸ್ತುಗಳು ಇನ್ನೊಂದು ಕಡೆ ಬಂದಿರಬಾರದು. ಊಟದ ಟೇಬಲ್ಲನ್ನೇ ಗಮನಿಸಿ, ಹಲವರಿಗೆ ಊಟದ ಟೇಬಲ್‌ ಮೇಲೆ ಪುಸ್ತಕ ಪೇಪರ್‌ ಓದದಿದ್ದರೆ ಸಮಾಧಾನವೇ ಆಗದು. ಊಟದ ಎಂಜಲು ಮುಸುರೆಗಳಿರುವ ತಿನಿಸು, ಅನ್ನ ಸಾಂಬಾರ್‌ ಪುಸ್ತಕ ಅಥವಾ ಪೇಪರುಗಳಿಗೆ ಅಂಟಿಕೊಂಡು ಕೊಳೆಯಾಗುತ್ತದೆಂಬ ಅರಿವು ಇವರಿಗಿರುವುದಿಲ್ಲ.

ಇನ್ನು ಕೆಲವರು ಟೂತ್‌ ಬ್ರಷ್‌, ಪೇಸ್ಟ್‌ ತಂದು ಮಲಗುವ ಕೋಣೆಯಲ್ಲಿ ಇಡುವುದೂ ಇದೆ. ದವಸ ಧಾನ್ಯಗಳನ್ನು
ಹಜಾರದಲ್ಲಿಡುವುದೂ ಇದೆ. ಅಂದವಾದ ಜೋಡಣೆಗಾಗಿ ಸಹನೆಯಿಂದ ಮುಂದಾಗದಿರುವ ಪರಿಸ್ಥಿತಿ ಇದೆ. ಇದರಿಂದ ಸಕಾರಾತ್ಮಕ ಸುಳಿಗಳು, ಅಲೆಗಳು, ಹೊಯ್ದಾಟಗಳು ತರಂಗ ದಾಡ್ಯìತೆಗಳು ಸೊರಗುತ್ತವೆ.

ಒಳಗೆ ಮನೆಯೊಂದು ಪುಟ್ಟ ಅಮರಾವತಿಯಾಗಿರಬೇಕು. ಇರಬೇಕಾದ್ದು ಅರಬೇಕಾದ ಸ್ಥಳದಲ್ಲಿದ್ದರೆ ಸೊಗಸು ಪುಟಿಯುತ್ತದೆ. ದುರ್ಗಾ, ಸರಸ್ವತಿ, ಲಕ್ಷಿ$¾ ರಿಗೆ ತಾಣ ಒದಗುತ್ತದೆ. 

– ಅನಂತಶಾಸ್ತ್ರಿ

ಟಾಪ್ ನ್ಯೂಸ್

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.