ಕೃಷಿಯಲ್ಲಿ ಖುಷಿ ಕಂಡ ಎಂಜಿನಿಯರ್‌ 


Team Udayavani, Sep 25, 2017, 1:14 PM IST

25-ZZ-1.jpg

ಇವರು ಮನಸ್ಸು ಮಾಡಿದ್ದರೆ ಕೈತುಂಬ ಸಂಬಳ ಪಡೆಯಬಹುದಿತ್ತು. ಅಂಥ ಉದ್ಯೋಗವಿತ್ತು. ಆ ಉದ್ಯೋಗ ಕಾರಣದಿಂದಲೇ ನಗರದಲ್ಲಿದ್ದುಕೊಂಡು ಐಷಾರಾಮಿ ಜೀವನ ನಡೆಸಬಹುದಿತ್ತು. ಆದರೆ ಇವರನ್ನು ಸೆಳೆದದ್ದು ಮಣ್ಣಿನ ವಾಸನೆ. ಅದಕ್ಕೆಂದೇ ಕೃಷಿಯಲ್ಲಿ ಖುಷಿ ಕಂಡುಕೊಂಡವರು ಬೆಳಗಾವಿ ಜಿಲ್ಲೆ ರಾಮದುರ್ಗದ ಚಿಕ್ಕೊಪ್ಪ ಕೆ.ಎಸ್‌. ಗ್ರಾಮದ ರವಿ ಭೀಮಪ್ಪ ವಾಸನದ. ಕೃಷಿಯಲ್ಲೇ ಖುಷಿ ಕಾಣುವ ಆಸೆಯಿಂದ ಅವರು ಸಿವಿಲ್‌ ಎಂಜನಿಯರ್‌ ಸೇವೆಗೆ ಗುಡ್‌ಬೈ ಹೇಳಿ ಹೊಲದತ್ತ ಹೆಜ್ಜೆ ಹಾಕಿದರು. ತೋಟಗಾರಿಕೆಯಲ್ಲಿ ಮಿಶ್ರ ಬೇಸಾಯ ಪದ್ಧತಿ ಅನುಸರಿಸಿ ಒಂದೇ ತೋಟದಲ್ಲಿ ಬಹು ಬೆಳೆಗಳನ್ನು ಬೆಳೆದು ಕೈತುಂಬಾ ಸಂಪಾದಿಸುವ ಇವರು ಗರಸು ಭೂಮಿಯಲ್ಲಿ ಬಹುಬೆಳೆ ಬೆಳೆದು ಹೊಸ ಪ್ರಯೋಗಕ್ಕೆ ನಾಂದಿ ಹಾಡಿದ್ದಾರೆ.

ಮಿಶ್ರ ಬೇಸಾಯ
ಜಲಾನಯನ ಇಲಾಖೆಯಿಂದ ರವಿ ಸೂಕ್ತ ಮಾರ್ಗದರ್ಶನ ಪಡೆದಿದ್ದಾರೆ.  47 ಎಕರೆ ಗರಸು ಜಮೀನಿನ 15 ಎಕರೆಯಲ್ಲಿ 5 ಎಕರೆಗೊಂದರಂತೆ 3 ಒಡ್ಡುಗಳನ್ನು ನಿರ್ಮಿಸಿ ಭೂಮಿಯ ಫಲವತ್ತತೆ ವೃದ್ಧಿಸಿದ್ದಾರೆ. 15 ಎಕರೆ ಜಿ-9 ಬಾಳೆ ಹಾಗೂ 3 ಎಕರೆ ಜವಾರಿ ಬಾಳೆ ಸೇರಿ ಒಟ್ಟು 18 ಎಕರೆ ಬಾಳೆ ಬೆಳೆದಿದ್ದಾರೆ. ಅದರಲ್ಲಿ ತಾಳೆ ಬೆಳೆ, ಸಿತಾರ ಮೆಣಸಿನ ಬೆಳೆ, ಈರುಳ್ಳಿ ಬೆಳೆದು ಅಂತರ ಬೇಸಾಯದಲ್ಲಿ ಹೆಚ್ಚಿನ ಲಾಭ ಪಡೆದಿದ್ದಾರೆ.

ಫಲ ವೈವಿಧ್ಯ
ಜಮೀನಿನ ಎಲ್ಲ ಬದುಗಳಲ್ಲಿ ಸಾಂದ್ರ ಬೇಸಾಯದಂತೆ ಹಣ್ಣಿನ ಗಿಡಗಳನ್ನು ಬೆಳೆಸಿದ್ದಾರೆ. 710 ಕೇಸರಿ ಮಾವು, 50ಕ್ಕೂ ಅ ಧಿಕ ತಿಪಟೂರು ತೆಂಗಿನ ಗಿಡ, 75 ಪೇರಲು, 25ಕ್ಕೂ ಅಧಿ ಕ ಜವಾರಿ ಲಿಂಬೆ, ಚಿಕ್ಕು (ಕ್ರಿಕೆಟ್‌ ಬಾಲ್‌), ನೆಲ್ಲಿ, ಮೋಸಂಬಿ, ಗೋಡಂಬಿ, ಕಿತ್ತಳೆ, ಸೇಬು ಮಾದರಿ ಬಾರಿ, ಕವಳಿ, ಸೀತಾಫಲ(ಬಾಲಾನಗರ), ದಾಳಿಂಬೆ, ಕಂಚಿಕಾಯಿ, ಕರಿಬೇವು ಸೇರಿದಂತೆ ವಿವಿಧ ಜಾತಿಯ ಹಣ್ಣಿನ ಗಿಡಗಳ ಜೊತೆಗೆ ಜನಿಫರ್‌ ಶೋಗಿಡ, ದಾಸವಾಳ, ಮಲ್ಲಿಗೆ, ಸಂಪಿಗೆ, ಗುಲಾಬಿ ಹೂವಿನ ಗಿಡಗಳನ್ನು  ಬೆಳೆಸುತ್ತಿರುವುದು ಕಾಡು ಗಿಡಗಳಾದ ಸುಬಾಬುಲ್‌, ಗೊಬ್ಬರ ಗಿಡ, ಬೇವಿನಮರವನ್ನು ಬೆಳೆಸಿದ್ದಾರೆ.

ಒಟ್ಟು 25 ಎಕರೆ ಜಮೀನಲ್ಲಿ 1100 ತಾಳೆ ಗಿಡಗಳನ್ನು ಬೆಳೆಸುತ್ತಿದ್ದಾರೆ. ಆಮೂಲಕ ಬೆಳಗಾವಿಯಲ್ಲಿಯೇ ಅತಿ ಹೆಚ್ಚು ತಾಳೆ ಬೆಳೆದ ಕೀರ್ತಿಗೆ ಪಾತ್ರರಾಗಿದ್ದಾರೆ. ತಾಳೆ ಬೆಳೆ 5 ವರ್ಷಕ್ಕೆ ಫಲ ನೀಡುತ್ತಿದೆ. ನಾಟಿ ಮಾಡಿ 1.5 ವರ್ಷವಾಗಿದ್ದು.  ಪ್ರತಿ ತಿಂಗಳಿಗೆ ಸುಮಾರು 2.30 ಲಕ್ಷ ರೂ. ಆದಾಯವಂತೆ. 

ಹನಿ ನೀರಾವರಿ ಬೇಸಾಯ
ಸದ್ಯ ಸಾಗುವಳಿಯಾಗುತ್ತಿರುವ 25 ಎಕರೆ ಜಮೀನಿನಲ್ಲಿ 2 ಬೋರ್‌ವೆಲ್‌ ಕೊರೆಸಲಾಗಿದ್ದು, ಎರಡರಲ್ಲೂ 3.5 ಇಂಚಿನಷ್ಟು ನೀರು ಲಭ್ಯವಾಗಿದೆ. ಎರಡು ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ. ಸಮಗ್ರ ಹ‌ನಿ ನೀರಾವರಿ ಪದ್ಧತಿ ಅನುಸರಿಸುತ್ತಿದ್ದಾರೆ. ಸರ್ಕಾರಿ ನೌಕರಿಯಿಂದ ಕೇವಲ ಒಂದು ಕುಟುಂಬದ ಅಭಿವೃದ್ಧಿ ಮಾತ್ರ ಸಾಧ್ಯ. ಕೃಷಿಯಲ್ಲಿ ಏನಾದರೂ ಸಾಧನೆ ಮಾಡಬೇಕೆಂದು ಅಣ್ಣಾ ಹಜಾರೆ ಅವರನ್ನು ಪ್ರೇರಣೆಯಾಗಿಟ್ಟುಕೊಂಡಿದ್ದೇನೆ. ಮಿಶ್ರಬೇಸಾಯ ಮಾಡುವ ಸಾಹಸಕ್ಕೆ ಕೈಹಾಕಿ, ಸತತ ಪರಿಶ್ರಮದಿಂದ ಕೆಲಸ ಮಾಡುತ್ತಿದ್ದೇನೆ. ನಂಬಿದರೆ ಭೂಮಾತೆ ಎಂದೂ ಕೈಬಿಡುವುದಿಲ್ಲ ಎಂಬುದಕ್ಕೆ ನಾನೇ ಸಾಕ್ಷಿ ಎನ್ನುತ್ತಾರೆ ರವಿ. 

ಈರನಗೌಡ ಪಾಟೀಲ

ಟಾಪ್ ನ್ಯೂಸ್

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.