ಕೈಕೊಟ್ಟ ಕೆಮ್ಮಿನ ಸಿಗ್ನಲ್‌!


Team Udayavani, Aug 15, 2017, 7:40 AM IST

kemmu.jpg

ನಾನು ಪ್ರಥಮ ಪಿಯುಸಿ ಓದುತ್ತಿದ್ದ ಸಮಯ. ನಾನು ಮತ್ತು ನನ್ನ ಸ್ನೇಹಿತ ಯಾವಾಗಲೂ ಜೊತೆಯಾಗಿಯೇ ಇರುತ್ತಿದ್ದೆವು. ಪ್ರತಿದಿನ ತುಂಟಾಟ ಮಾಡಿ ಶಿಕ್ಷಕರಿಂದ ಬಯ್ಸಿಕೊಳ್ಳುತ್ತಿದ್ದೆವು. ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯದಿದ್ದರೆ ಪಾಲಕರನ್ನು ಕರೆದುಕೊಂಡು ಬರಬೇಕು ಎಂದು ಶಿಕ್ಷಕರು ನಮಗಿಬ್ಬರಿಗೂ ತಾಕೀತು ಮಾಡಿದ್ದರು. ಅವರು ಹೇಳಿದ್ದನ್ನು ಕೇಳಿ ಭೂಕಂಪ, ಸುನಾಮಿಯೆಲ್ಲಾ ಒಮ್ಮೆಲೇ ಬಡಿದಂತಾಯ್ತು.

ಸರಿ, ಚೆನ್ನಾಗಿ ಓದಿ ಒಳ್ಳೆಯ ಮಾರ್ಕ್ಸ್ ತೆಗೆಯೋಣ ಅಂದುಕೊಂಡರೆ ಇತಿಹಾಸದ ಇಸವಿಗಳು, ಹೆಸರುಗಳು ಒಂದೂ ನೆನಪಲ್ಲಿ ಉಳಿಯುತ್ತಿರಲಿಲ್ಲ. ಇತಿಹಾಸ ಪರೀಕ್ಷೆಗೆ ಎರಡೇ ದಿನ ಬಾಕಿ ಉಳಿದಿತ್ತು. ಮೊದಲ ಪರೀಕ್ಷೆಗಳಲ್ಲಿ ನಮ್ಮಿಬ್ಬರ ಬೆಂಚ್‌ಗಳು ಹಿಂದೆ ಮುಂದೆ ಬಂದಿದ್ದವು. ಅದೇ ಧೈರ್ಯದ ಮೇರೆಗೆ ನಾವಿಬ್ಬರೂ ಇತಿಹಾಸ ಪರೀಕ್ಷೆಯ ದಿನ ಅರ್ಧ ಪುಸ್ತಕವನ್ನು ಅವನು, ಉಳಿದರ್ಧ ಪುಸ್ತಕವನ್ನು ನಾನು ಕಾಪಿ ಮಾಡಿಕೊಂಡು ಹೋದೆವು. ನಮ್ಮ ದುರದೃಷ್ಟಕ್ಕೆ ನನ್ನ ನಂಬರ್‌ ಮೊದಲ ಬೆಂಚಲ್ಲಿ ಮತ್ತು ಅವನದ್ದು ಕೊನೆಯ ಬೆಂಚಲ್ಲಿ ಬಂದಿತ್ತು. ಬೆಂಚ್‌ ನಂಬರ್‌ಗಳು ನಮ್ಮ ಆಶಾಗೋಪುರವನ್ನೇ ಕುಸಿಯುವಂತೆ ಮಾಡಿತ್ತು.

ಹಾಗಂತ, ಧೃತಿಗೆಡುವ ಹಾಗಿರಲಿಲ್ಲ. ಹೇಗಾದರೂ ಮಾಡಿ ಪಾಸಾಗಬೇಕೆಂದು ಒಂದು ನಿರ್ಣಯಕ್ಕೆ ಬಂದೆವು. ನನ್ನ ಸ್ನೇಹಿತನ ಬೆಂಚ್‌ ಬಾಗಿಲ ಬಳಿ ಇದ್ದಿದ್ದರಿಂದ, “ಮೇಲ್ವಿಚಾರಕರು ಹೊರಗೆ ಹೋದಾಗ ಕೆಮ್ಮುವುದರ ಮೂಲಕ ಸಿಗ್ನಲ್‌ ಕೊಡು. ಆಗ ಕಾಪಿ ವರ್ಗಾವಣೆ ಮಾಡಿಕೊಳ್ಳೋಣ’ ಎಂದು ಹೇಳಿದೆ. ಹಾಗೆ ಮಾಡಿ ಎರಡು ಸಲ ಯಶಸ್ವಿಯಾದೆವು ಕೂಡ. ಆದರೆ, ಒಂದು ಬಾರಿ ಮೇಲ್ವಿಚಾರಕರು ಸದ್ದೇ ಆಗದಂತೆ ಮೆಲ್ಲನೆ ನಡೆದುಕೊಂಡು ಹೋಗಿ ನನ್ನ ಸ್ನೇಹಿತನ ಬಳಿ ನಿಂತಿದ್ದರು. ಅವರಿಗೆ ಗೊತ್ತಾಗಿಯೋ, ಗೊತ್ತಿಲ್ಲದೆಯೋ ಒಮ್ಮೆ ಕೆಮ್ಮಿಬಿಟ್ಟರು. ತಕ್ಷಣ ನಾನದನ್ನು ಸಿಗ್ನಲ್‌ ಎಂದು ಭಾವಿಸಿ ನನ್ನಲ್ಲಿದ್ದ ಕಾಪಿಚೀಟಿಯನ್ನು ನನ್ನ ಸ್ನೇಹಿತನ ಕಡೆಗೆ ಎಸೆದು ಬಿಟ್ಟೆ!

ರೆಡ್‌ಹ್ಯಾಂಡ್‌ ಆಗಿ ಇಬ್ಬರೂ ಸಿಕ್ಕಿಬಿಟ್ಟೆವು. ಕೋಪದಿಂದ ನಮ್ಮ ಪತ್ರಿಕೆಗಳನ್ನು ಕಸಿದುಕೊಂಡ ಅವರು ನಮ್ಮನ್ನು ಪ್ರಿನ್ಸಿಪಾಲರ ಬಳಿ ಕಳಿಸಿದರು. ಕೊನೆಗೆ ಪ್ರಿನ್ಸಿಪಾಲರ ಮುಂದೆ ಗೋಳಾಡಿ ಕ್ಷಮೆ ಗಿಟ್ಟಿಸಿಕೊಳ್ಳುವಾಗ ಸಾಕು ಸಾಕಾಗಿ ಹೋಯ್ತು.

– ಮಹಾಂತೇಶ ದೊಡವಾಡ

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.