ಕೆರೆಯಲ್ಲಿ ಮುಳುಗಿ 3 ಮಕ್ಕಳ ಸಾವು


Team Udayavani, Feb 19, 2017, 8:48 AM IST

18-LOC-6.jpg

ಬದಿಯಡ್ಕ: ಸ್ನಾನ ಮಾಡಲೆಂದು ಕೆರೆಗಿಳಿದ ಒಂದೇ ಕುಟುಂಬದ ಮೂವರು ಬಾಲಕಿಯರು ಮೃತಪಟ್ಟ ಘಟನೆ ಶನಿವಾರ ಅಪರಾಹ್ನ ಬದಿಯಡ್ಕ ಪೊಲೀಸ್‌ ಠಾಣೆ ವ್ಯಾಪ್ತಿಯ ಅಡ್ಯನಡ್ಕ ಕೊಂಬರಬೆಟ್ಟಿನಲ್ಲಿ ಸಂಭವಿಸಿದೆ.

ಕೊಂಬರಬೆಟ್ಟು ನಿವಾಸಿ ಆಸ್ಮ-ಖಾಸಿಂ ದಂಪತಿಯ ಪುತ್ರಿ ಮುಮ್ತಾಝ್ (10), ಆಸ್ಮಾ ಅವರ ಸಹೋದರಿ ಝಹ್ರ – ಅಸೀಂ ದಂಪತಿ ಪುತ್ರಿಯರಾದ ಫಾತಿಮತ್‌ ಫಸಿಲ (11) ಮತ್ತು ಫಿದಾಅಮಿನ (7) ಅವರು ಮೃತಪಟ್ಟ ಮಕ್ಕಳು. ಮುಮ್ತಾಜ್‌ ಕಾಟುಕುಕ್ಕೆ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ. ಫಾತಿಮತ್‌ ಫಸಿಲ ಮತ್ತು ಫಿದಾಅಮಿನ ಅಡ್ಯನಡ್ಕ ಜನತಾ ಶಾಲೆಯ 6ನೇ ಮತ್ತು 2ನೇ ತರಗತಿಯ ವಿದ್ಯಾರ್ಥಿನಿಯರು.

ಶನಿವಾರ ಅಪರಾಹ್ನ ಸುಮಾರು 3 ಗಂಟೆ ವೇಳೆಗೆ ಈ ದುರಂತ ಸಂಭವಿಸಿದೆ. ಮನೆಯ ಸಮೀಪದಲ್ಲೇ ಇರುವ ಕೆರೆಯಲ್ಲಿ ಸ್ನಾನ ಮಾಡಲೆಂದು ಈ ಮಕ್ಕಳು ಹೋಗಿದ್ದರು. ಮುಮ್ತಾಝ್ಳ ತಂಗಿ ಫಸ್ನಾ (7) ಕೂಡ ಸಹೋದರಿಯರೊಂದಿಗೆ ಸ್ನಾನಕ್ಕೆಂದು ಹೋಗಿ
ದ್ದಳು. ಮೂವರು ಸಹೋದರಿಯರು ನೀರಿನಲ್ಲಿ ಒದ್ದಾಡು ತ್ತಿರುವುದನ್ನು ಕಂಡ ಫಸ್ನಾ ಮನೆಗೋಡಿ ಬಂದು ಮಾಹಿತಿ ನೀಡಿದಳು. ತತ್‌ಕ್ಷಣ ಮನೆಯವರು ಮತ್ತು ಸ್ಥಳೀಯರು ಧಾವಿಸಿ ನೀರಿನಲ್ಲಿ ಮುಳುಗೇಳುತ್ತಿದ್ದ ಮೂವರು ಮಕ್ಕಳನ್ನು ಮೇಲಕ್ಕೆತ್ತಿದ್ದರೂ ಅಷ್ಟರಲ್ಲಿ ಅವರು ಮೃತಪಟ್ಟಿದ್ದರು.

ಮಾಹಿತಿ ಪಡೆದ ಬದಿಯಡ್ಕ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಶವ ಮಹಜರಿಗಾಗಿ ಮೃತದೇಹಗಳನ್ನು ಕಾಸರಗೋಡು ಜನರಲ್‌ ಆಸ್ಪತ್ರೆಗೆ ಕೊಂಡೊಯ್ದು ಶವಾಗಾರದಲ್ಲಿರಿಸಲಾಗಿದೆ.

ತೀರಾ ಬಡ ಕುಟುಂಬ
ಮಕ್ಕಳನ್ನು ಕಳೆದುಕೊಂಡಿರುವ ಎರಡೂ ಕುಟುಂಬಗಳು ತೀರಾ ಬಡತನದಿಂದ ಕೂಡಿದ್ದು, ಕೂಲಿ ಮಾಡಿ, ಬೀಡಿ ಕಟ್ಟಿ ಜೀವನ ಸಾಗಿಸುತ್ತಿದ್ದರು. ಆಸ್ಮ-ಖಾಸಿಂ ದಂಪತಿಗೆ ಇಬ್ಬರು ಮಕ್ಕಳು.ಇಬ್ಬರೂ ಇಂದು ಕೆರೆಯತ್ತ ಹೋಗಿದ್ದರು. ಆದರೆ ಕಿರಿಯಾಕೆ ಫ‌ಸ್ನಾ ಕೆರೆಯ ಬದಿಯ ಲ್ಲಿದ್ದು, ಇತರರು ಮುಳುಗವುದನ್ನು ಕಂಡು ಮನೆಗೆ ಓಡಿ ಬಂದು ವಿಷಯ ತಿಳಿಸಿದ್ದಳು.  ಝಹ್ರ-ಅಸೀಂ ದಂಪತಿಗೆ ಮೂವರು ಮಕ್ಕಳಿದ್ದು, ಒಂದು ಮಗು ಮನೆಯಲ್ಲಿಯೇ ಇತ್ತು. ಇತರ ಇಬ್ಬರು ಕೆರೆಗೆ ಸ್ನಾನ ಮಾಡಲು ಹೋಗಿದ್ದರು. ಮನೆಯ ಹತ್ತಿರಲ್ಲಿಯೇ ಇರುವ ಕೆರೆಗೆ ಈ ಮಕ್ಕಳು ಸಾಮಾನ್ಯವಾಗಿ ಸ್ನಾನಕ್ಕೆ ಹೋಗಿ ಬರುತ್ತಿದ್ದರು. ಇಂದೂ ಅದರಂತೆಯೇ ಹೋಗಿದ್ದರಿಂದ ಮನೆಯವರು ಅತ್ತ ಹೆಚ್ಚಿನ ಗಮನ ಹರಿಸಿರಲಿಲ್ಲ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.