ಪಿಣರಾಯಿ ವಿಜಯನ್ ಕಾರ್ಯಕ್ರಮ ಗಡಿ ಪ್ರದೇಶದಲ್ಲಿ ಬಿಗು ಭದ್ರತೆ
Team Udayavani, Feb 25, 2017, 1:32 PM IST
ಕಾಸರಗೋಡು: ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಫೆ. 25ರಂದು ಮಂಗಳೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿರುವುದರಿಂದ ಗಡಿ ಪ್ರದೇಶದಲ್ಲಿ ಬಿಗು ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.
ಪಿಣರಾಯಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ಹರತಾಳಕ್ಕೆ ಕರೆ ನೀಡಿವೆ. ಇದನ್ನು ಪೊಲೀಸರು ಗಂಭೀರವಾಗಿ ತೆಗೆದುಕೊಂಡಿದ್ದು, ಗಡಿಯಲ್ಲಿ ಪೊಲೀಸರನ್ನು ನಿಯೋಜಿಸಿದೆ.
ಮಂಜೇಶ್ವರ ಭಾಗದಲ್ಲಿ ಕೇರಳ ಪೊಲೀಸರು, ತಲಪಾಡಿಯಲ್ಲಿ ಕರ್ನಾಟಕ ಪೊಲೀಸರು ವಾಹನಗಳನ್ನು ತಡೆದು ನಿಲ್ಲಿಸಿ ತೀವ್ರ ತಪಾಸಣೆ ನಡೆಸಿದ ಬಳಿಕವಷ್ಟೇ ಮುಂದುವರಿಯಲು ಅವಕಾಶ ನೀಡುತ್ತಿದ್ದಾರೆ. ಬಸ್ಗಳನ್ನೂ ತಪಾಸಣೆ ಮಾಡಲಾಗುತ್ತಿದೆ. ಗುರುವಾರ ರಾತ್ರಿಯಿಂದ ಆರಂಭಿಸಿ ಶುಕ್ರವಾರ ಬೆಳಗ್ಗಿನ ವರೆಗೂ ವಾಹನ ತಪಾಸಣೆ ನಡೆಸಲಾಗಿದೆ.