ಕುಂಬಳೆ ಕಣಿಪುರ ಕ್ಷೇತ್ರದಲ್ಲಿ ಕಳ್ಳತನ ಯತ್ನ ವಿಫ‌ಲ


Team Udayavani, May 19, 2017, 12:27 PM IST

Theft,crime-news.jpg

ಕುಂಬಳೆ: ಕುಂಬಳೆ ಸೀಮೆಯ ಪ್ರಧಾನ ದೇವಾಲಯ ದಲ್ಲೊಂದಾದ ಕುಂಬಳೆ ಕಣಿಪುರ ಶ್ರೀ ಗೋಪಾಲಕೃಷ್ಣ ಕ್ಷೇತ್ರದಲ್ಲಿ ಗುರುವಾರ ಮುಂಜಾನೆ ಕಳ್ಳತನಕ್ಕೆ ಯತ್ನ ನಡೆದಿದೆ. 

ಮೇ 18ರಂದು ಮುಂಜಾನೆ 3.30ಕ್ಕೆ ಕ್ಷೇತ್ರದ ಪ್ರಧಾನ ಅರ್ಚಕ ಮಾಧವ ಆಡಿಗ ಅವರು ದೇವಾಲಯಕ್ಕೆ ಪೂಜೆಗೆ ಆಗಮಿಸಿದಾಗ ಗರ್ಭಗುಡಿಯ ಕೆಳಭಾಗದ ಎರಡು ಮೆಟ್ಟಿಲಿನ ತಗಡು ಮಾಯವಾಗಿತ್ತು. ಕ್ಷೇತ್ರದ ಮುಂದಿನ ದ್ವಾರಪಾಲಕ ಜಯ ವಿಜಯರ ಮೂರ್ತಿಯಲ್ಲಿ ಒಂದು ಕೆಳಗೆ ಬಿದ್ದಿತ್ತು. ಕ್ಷೇತ್ರದ ಗೋಪುರ ಮಾಡಿನಿಂದ ಬಡಬಡ ಶಬ್ದ ಕೇಳಿಸುತ್ತಿತ್ತು. ತತ್‌ಕ್ಷಣ ಕಾವಲು ಗಾರ ಆಡೂರು ಲಕ್ಷ್ಮಣರೊಂದಿಗೆ ಹೊರ ತೆರಳಿ ನೋಡಿದಾಗ ಕ್ಷೇತ್ರದ ಸುತ್ತು ಗೋಪುರದ ತಾಮ್ರದ ತಗಡಿನ ಮಾಡಿನಲ್ಲಿ ಓರ್ವ ಅವಿತಿದ್ದನು. ಟಾರ್ಚ್‌ ಬೆಳಕು ಹಾಯಿಸಿದಾಗ ಈತ ಮಾಡಿನ ಮೇಲೆ ಮಲಗಿದನು. ಬಳಿಕ ಪೊಲೀ ಸರಿಗೆ ಮಾಹಿತಿ ನೀಡಿ ಪೋಲಿಸರು ಆಗಮಿಸು ವಷ್ಟರಲ್ಲಿ ಮಾಡಿನ ಮೇಲೆ ಇರಿಸಿದ್ದ ಸೊತ್ತುಗಳನ್ನು ತುಂಬಿದ ಗೋಣಿ ಚೀಲ ಕಟ್ಟವನ್ನು ಅಲ್ಲೇ ಬಿಟ್ಟು ಕ್ಷೇತ್ರದ ಹಿಂಭಾಗದ ಮೂಲಕ ಹೆದ್ದಾರಿಯಲ್ಲಿ ಪರಾರಿಯಾದನು.

ಕುಂಬಳೆ ಪೊಲೀಸ್‌ ಠಾಣೆಯ ಮುಂಭಾಗದ ಕೂಗಳತೆಯ ದೂರದಲ್ಲಿದ್ದ ಠಾಣೆಗೆ ಕ್ಷೇತ್ರದ ಕಾವಲುಗಾರ ಲಕ್ಷ್ಮಣ ಅವರು ದೂರವಾಣಿ ಮೂಲಕ ತತ್‌ಕ್ಷಣ ಮೊಬೈಲ್‌ ಮೂಲಕ ಮಾಹಿತಿ ನೀಡಿದರೂ ಠಾಣೆಯಲ್ಲಿ ಪೊಲೀಸ ರಿಲ್ಲದ ಕಾರಣ ದೂರದ ಬಂಗ್ರ ಮಂಜೇಶ್ವರದಿಂದ ಗಸ್ತು ಪೊಲೀಸ ರನ್ನು ಕರೆಸುವಷ್ಟರಲ್ಲಿ ಕಳ್ಳರು ಪರಾರಿಯಾಗಿದ್ದರು.

ಕ್ಷೇತ್ರದಲ್ಲಿ ಬ್ರಹ್ಮಶ್ರೀ ದೇಲಂಪಾಡಿ ಬಾಲಕೃಷ್ಣ ತಂತ್ರಿವರ್ಯರ ಮಾರ್ಗದರ್ಶನದಂತೆ ಶ್ರೀ ದೇವರಿಗೆ ಪಂಚಗವ್ಯ ಪುಣ್ಯಾಹ ಶುದ್ಧಿ ಕಲಶ ನಡೆಸಿದ ಬಳಿಕ ನಿತ್ಯಪೂಜೆ ಜರಗಿಸಲಾಯಿತು. ಕ್ಷೇತ್ರದ ಆನುವಂಶಿಕ ಮೊಕ್ತೇಸರ, ಮಾಯಿಪ್ಪಾಡಿ ನ್ಯಾಯವಾದಿ ರಾಜೇಂದ್ರ ರಾವ್‌ ಮತ್ತು ಕ್ಷೇತ್ರದ ಕಾರ್ಯ ನಿರ್ವಹಣಾಧಿಕಾರಿ ಎಂ.ಟಿ. ರಾಮನಾಥ ಶೆಟ್ಟಿಯವರು ಕುಂಬಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಕುಂಬಳೆ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸು ತ್ತಿದ್ದಾರೆ. ಕಾಸರಗೋಡಿನಿಂದ ಬೆರಳಚ್ಚು  ತಜ್ಞರು ಆಗಮಿಸಿ  ಮಾಹಿತಿ ಸಂಗ್ರಹಿಸಿದ್ದಾರೆ. ಉನ್ನತ ಪೊಲೀಸ್‌ ಅಧಿಕಾರಿಗಳು ಕ್ಷೇತ್ರಕ್ಕೆ ಆಗಮಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಕ್ಷೇತ್ರದೊಳಗೆ ಓರ್ವ ಕಳ್ಳನೇ ಇದ್ದರೂ ಇದು ತಂಡದ ಕೃತ್ಯವಾಗಿರಬಹುದೆಂದು ಶಂಕಿಸಲಾಗಿದೆ. ಕ್ಷೇತ್ರದಲ್ಲಿ ಸಿ.ಸಿ. ಕ್ಯಾಮರಾ ಅಳವಡಿಸದ ಕಾರಣ ಕಳ್ಳರನ್ನು ಪತ್ತೆಹಚ್ಚಲಾಗಲಿಲ್ಲ.

ಕಳ್ಳರು ಕ್ಷೇತ್ರದ ಪ್ರಧಾನ ಗರ್ಭಗುಡಿಯ ಸೋಪಾನದ ಮೆಟ್ಟಿಲಿನ ತಾಮ್ರದ ಮತ್ತು ಬೆಳ್ಳಿಯ ತಗಡಿನ ಮೊಳೆ ಕಿತ್ತು ತಗಡನ್ನು ತೆಗೆದಿದ್ದಾರೆ. ಗರ್ಭಗುಡಿಯ ಮುಂಭಾಗದಲ್ಲಿದ್ದ ಜಯ ವಿಜಯರ ಮೂರ್ತಿಗಳ ಬೆಳ್ಳಿ ಕವಚಗಳನ್ನು ಕಳಚಿದ್ದು ಗರ್ಭಗುಡಿಯ ಮತ್ತು ಮುಂಭಾಗದ ಕಾಣಿಕೆ ಭಂಡಾರದ ಬೀಗ ಒಡೆದಿದ್ದಾರೆ. ದೇವಸ್ಥಾನದ ಹೊರಭಾಗದ ಅರ್ಚಕರ ಸ್ನಾನ ಗೃಹದ ಗೋಡೆಹಾರಿ ಸುತ್ತುಪೌಳಿಯ ಛಾವಣಿಯ ಮೇಲೆ ಏರಿ ಬಂದ ಕಳ್ಳರು ಕ್ಷೇತ್ರದೊಳಗೆ ನುಗ್ಗಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಕ್ಷೇತ್ರದ ಪ್ರಧಾನ ಅರ್ಚಕರ ಮತ್ತು ಕಾವಲುಗಾರರ ಪ್ರಸಂಗಾವಧಾನದಿಂದ ಕಳ್ಳರು ಗೋಣಿಚೀಲದಲ್ಲಿ ತುಂಬಿಸಿದ್ದ ಬೆಳ್ಳಿಯ ಬೆಲೆ ಬಾಳುವ ಒಡವೆಗಳನ್ನು ಒಯ್ಯುವಲ್ಲಿ ವಿಫಲರಾಗಿದ್ದಾರೆ. ಅಲ್ಲದೆ ಕ್ಷೇತ್ರದ ಗರ್ಭಗುಡಿಯ ಮತ್ತು ಕಾಣಿಕೆ ಹುಂಡಿಯ ಬೀಗ ಒಡೆದಿದ್ದರೂ ದೇವರ ಚಿನ್ನಾಭರಣಗಳನ್ನು ಮತ್ತು ಹುಂಡಿಯ ಹಣವನ್ನು ಕಳ್ಳತನ ಮಾಡುವ ಸಂಚು ವಿಫಲಗೊಂಡಿದೆ.
 

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.