ಕಾಡಾನೆ ದಾಳಿ: ಗ್ರಾಮಸ್ಥರು ಕಂಗಾಲು


Team Udayavani, Aug 19, 2017, 8:10 AM IST

ELEPHENT-600.jpg

ಸೋಮವಾರಪೇಟೆ: ಗೌಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಾರ, ಕೂಗೂರು, ಹಿರಿಕರ, ದೊಡ್ಡಮಳೆ¤ ಗ್ರಾಮದಲ್ಲಿ ಕಾಡಾನೆಗಳ ಹಾವಳಿಯಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ.ಪ್ರತಿದಿನ ಕೃಷಿ ಬೆಳೆಗಳನ್ನು ನಾಶಪಡಿಸುತ್ತಿವೆ. ಹಗಲಿನ ವೇಳೆ ಮಾಲಂಬಿ, ನಿಡ್ತ ಮೀಸಲು ಅರಣ್ಯದಲ್ಲಿ ವಿಶ್ರಾಂತಿ ಪಡೆದುಕೊಳ್ಳುವ ಕಾಡಾನೆಗಳು, ರಾತ್ರಿಯಾಗುತ್ತಲೆ ಗ್ರಾಮಗಳಿಗೆ ನುಗ್ಗಿ ಉಪಟಳ ನೀಡುತ್ತಿವೆ. 

ಅರಣ್ಯ ಇಲಾಖಾ ಸಿಬ್ಬಂದಿಗಳು ಹಾಗು ಗ್ರಾಮಸ್ಥರು ವಾರದಲ್ಲಿ ಎರಡು ದಿನ ಪಟಾಕಿ ಸಿಡಿಸಿ, ಗ್ರಾಮದ ಸುತ್ತಮುತ್ತಲಿನಿಂದ ಕಾಡಾನೆಗಳನ್ನು ದೂರದ ಅರಣ್ಯ ಪ್ರದೇಶಕ್ಕೆ ಅಟ್ಟುವ ಪ್ರಯತ್ನ ನಡೆಯುತ್ತಿದೆ. ಆದರೆ ಗಜಪಡೆ ಗ್ರಾಮವನ್ನು ತೊರೆಯುತ್ತಿಲ್ಲ. 
ನಾಟಿಯಾದ ಭತ್ತದ ಪೈರು ಬೇರು ಹಿಡಿದು ಹಸಿರು ತಿರುಗುತ್ತಿದ್ದು, ಅದನ್ನೆ ಕಾಡಾನೆಗಳು ತಿನ್ನುತ್ತಿವೆ. ತೆಂಗಿನ ಗಿಡಗಳು ಹಾಗು ಉತ್ತಮ ತಳಿಯ ಬಾಳೆಗಿಡಗಳು ಕಾಡಾನೆಗಳಿಗೆ ಆಹಾರವಾಗುತ್ತಿರುವುದರಿಂದ ಕೃಷಿಕರು ಕಂಗಾಲಾಗಿದ್ದಾರೆ.ಕೃಷಿ ಭೂಮಿಯ ಸಮೀಪ ಮರದ ಮೇಲೆ ಅಟ್ಟಣಿಕೆ ಮಾಡಿಕೊಂಡು, ರಾತ್ರಿಯಿಡಿ ಪಟಾಕಿ ಸಿಡಿಸಿ ಕಾಡಾನೆಗಳನ್ನು ಬೆದರಿಸುವ ಪ್ರಯತ್ನವನ್ನು ಮಾಡಲಾಗುತ್ತಿದೆ. ಆದರೆ ಶಬ್ದಕ್ಕೂ ಕಾಡಾನೆಗಳು ಭಯಪಡುತ್ತಿಲ್ಲ ಎಂದು ಕೃಷಿಕ ಸಿ.ಎಲ್‌.ಮಂಜುನಾಥ್‌ ಹೇಳಿದರು.

ಹಿರಿಕರ ಮಂಜುನಾಥ್‌ ಅವರ ಬಾಳೆಗಿಡಗಳನ್ನು ನಾಶಪಡಿಸಿವೆ. ಎಚ್‌.ಎಂ.ಚಂದ್ರಪ್ಪ ಸೇರಿದಂತೆ ಹೆಚ್ಚಿನ ಬೆಳೆಗಾರರ ಕಾಫಿ ತೋಟಗಳಲ್ಲಿ ಗಿಡಗಳನ್ನು ಹಾನಿಪಡಿಸಿವೆ. ಕಾಡಾನೆ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯಬೇಕೆಂದು ಕೃಷಿಕರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.