ಚೆರ್ಕಳ – ಅಡ್ಕಸ್ಥಳ ರಸ್ತೆ ದುರವಸ್ಥೆ: ರಸ್ತೆ ತಡೆ ಚಳವಳಿ, ಬಂಧನ
Team Udayavani, Sep 14, 2017, 7:20 AM IST
ಕಾಸರಗೋಡು: ಚೆರ್ಕಳ – ಅಡ್ಕಸ್ಥಳ ರಸ್ತೆಯ ಶೋಚನೀಯಾವಸ್ಥೆಯನ್ನು ಪರಿಹರಿಸದ ಸಂಬಂಧಪಟ್ಟ ಅಧಿಕಾರಿಗಳ ಕ್ರಮವನ್ನು ಪ್ರತಿಭಟಿಸಿ ಬಿಜೆಪಿ ಹಮ್ಮಿಕೊಂಡ ರಸ್ತೆ ತಡೆ ಚಳವಳಿ ಚೆರ್ಕಳದಲ್ಲಿ ಬುಧವಾರ ನಡೆಯಿತು. ಬಿಜೆಪಿ ಜಿಲ್ಲಾ ಅಧ್ಯಕ್ಷ ನ್ಯಾಯವಾದಿ ಕೆ. ಶ್ರೀಕಾಂತ್ ಉದ್ಘಾಟಿಸಿದರು.
ಮಂಡಲ ಅಧ್ಯಕ್ಷ ಸುಧಾಮ ಗೋಸಾಡ ಅಧ್ಯಕ್ಷತೆ ವಹಿಸಿದರು. ಹರೀಶ್ ನಾರಂಪಾಡಿ, ಪ್ರಭಾಕರನ್ ಮೊದಲಾದವರು ಉಪಸ್ಥಿತರಿದ್ದರು. ವಿದ್ಯಾನಗರ ಪೊಲೀಸರು ಚಳವಳಿ ನಿರತರಾದ ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್, ಎಂ. ಸುಧಾಮ, ಹರೀಶ್ ನಾರಂಪಾಡಿ, ಚಂದು ಮಾಸ್ಟರ್, ರಾಜೇಶ್ ಶೆಟ್ಟಿ, ರವೀಂದ್ರ ರೈ ಎಂ., ಮಧುಸೂದನ ಸಹಿತ 10 ಮಂದಿಯನ್ನು ವಿದ್ಯಾನಗರ ಪೊಲೀಸರು ಬಂಧಿಸಿ ಆ ಬಳಿಕ ಬಿಡುಗಡೆಗೊಳಿಸಿದರು.
14ರಂದು ಅಡ್ಕಸ್ಥಳ, 15ರಂದು ಪಳ್ಳತ್ತಡ್ಕ, 16ರಂದು ನೆಲ್ಲಿಕಟ್ಟೆ, 17ರಂದು ಉಕ್ಕಿನಡ್ಕ, 18ರಂದು ಬದಿಯಡ್ಕ ಹಾಗೂ 19ರಂದು ಪೆರ್ಲದಲ್ಲಿ ರಸ್ತೆ ತಡೆ ಸರಣಿ ಕಾರ್ಯಕ್ರಮ ನಡೆಯಲಿದೆ. ಇದೇ ವೇಳೆ ರಾಷ್ಟ್ರೀಯ ಹೆದ್ದಾರಿ ಶೋಚನೀಯಾವಸ್ಥೆಯನ್ನು ಪ್ರತಿಭಟಿಸಿ ಸೆ. 14ರಂದು ಕಾಸರಗೋಡು, ಕುಂಬಳೆ, ಮಂಗಲ್ಪಾಡಿ, ತಲಪ್ಪಾಡಿ ಮೊದಲಾ ದೆಡೆಗಳಲ್ಲಿ ಬಿಜೆಪಿಯಿಂದ ರಸ್ತೆ ತಡೆ ಚಳವಳಿ ನಡೆಯಲಿದೆ.
ಸೆ. 14ರಂದು ಬೆಳಗ್ಗೆ 9.30ಕ್ಕೆ ಹೊಸಂಗಡಿ ಯಲ್ಲಿ ನಡೆಯುವ ರಸ್ತೆ ತಡೆ ಪ್ರತಿಭಟನೆ ಯನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್ ಉದ್ಘಾಟಿಸುವರು. ಉಪ್ಪಳ ಜಂಕ್ಷನ್ನಲ್ಲಿ ನಡೆಯುವ ಪ್ರತಿಭಟನೆಯನ್ನು ಕೆ.ಪಿ. ವಲ್ಸರಾಜ್ ಉದ್ಘಾಟಿಸುವರು. ಕುಂಬಳೆಯಲ್ಲಿ ನಡೆಯುವ ಪ್ರತಿಭಟನೆಯನ್ನು ಬಿಜೆಪಿ ಮಂಜೇಶ್ವರ ಮಂಡಲಾಧ್ಯಕ್ಷ ಕೋಳಾರು ಸತೀಶ್ಚಂದ್ರ ಭಂಡಾರಿ ಉದ್ಘಾಟಿಸುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ
Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು
Kasaragod ಎನ್ಡಿಎ ಅಭ್ಯರ್ಥಿ ಅಶ್ವಿನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು
ಸಿಡಿದ ಗ್ಯಾಸ್ ಸಿಲಿಂಡರ್; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ
Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ
MUST WATCH
ಹೊಸ ಸೇರ್ಪಡೆ
Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!