ಬಿಜೆಪಿ ಕಾರ್ಯಕರ್ತರ ಬಸ್‌ಗಳಿಗೆ ಕಲ್ಲೆಸೆತ: ಹಲವರಿಗೆ ಗಾಯ


Team Udayavani, Oct 5, 2017, 12:19 PM IST

05-29.jpg

ಕಾಸರಗೋಡು: ಬಿಜೆಪಿಯ ಜನರಕ್ಷಾ ಯಾತ್ರೆಯಲ್ಲಿ ಪಾಲ್ಗೊಂಡು ಪಯ್ಯನ್ನೂರಿನಿಂದ ಮರಳುತ್ತಿದ್ದ ಬಿಜೆಪಿ ಕಾರ್ಯಕರ್ತರು ವಾಹನಗಳಿಗೆ ವ್ಯಾಪಕ ಕಲ್ಲೆಸೆತ ನಡೆದಿದ್ದು, ಪಡನ್ನಕ್ಕಾಡ್‌ನ‌ಲ್ಲಿ ಕಲ್ಲೆಸೆತದಿಂದ ಕಾಸರಗೋಡು ನಗರಸಭೆಯ ಮಾಜಿ ಕೌನ್ಸಿಲರ್‌ ಹಾಗೂ ಇನ್ನೋರ್ವ ಕಾರ್ಯಕರ್ತ ಕಿಶೋರ್‌ ಗಾಯಗೊಂಡಿದ್ದಾರೆ.

ಬದಿಯಡ್ಕ, ಪಳ್ಳತ್ತಡ್ಕ, ಕುಂಬಾಜೆ, ಮುಳ್ಳೇರಿಯ, ನೀರ್ಚಾಲು, ವರ್ಕಾಡಿ ಸಹಿತ ಜಿಲ್ಲೆಯ ವಿವಿಧೆಡೆಗಳಿಂದ ತೆರಳಿದ ಬಿಜೆಪಿ ಕಾರ್ಯಕರ್ತರ ಬಸ್‌ಗಳಿಗೆ ಕಲ್ಲೆಸೆಯಲಾಗಿದೆ. ಕಾಸರಗೋಡಿನಿಂದ ನೀಲೇಶ್ವರ ಮಧ್ಯೆ ಕಲ್ಲೆಸೆತ ನಡೆದಿದ್ದು, ವಾಹನಗಳಿಗೆ ವ್ಯಾಪಕ ನಾಶನಷ್ಟ ಸಂಭವಿಸಿದೆ. ಹಲವರು ಗಾಯಗೊಂಡಿದ್ದಾರೆ. ವರ್ಕಾಡಿ ಭಾಗಕ್ಕೆ ಮರಳುತ್ತಿದ್ದ ಬಿಜೆಪಿ ಕಾರ್ಯಕರ್ತರು ಸಂಚರಿಸಿದ ಮೂರು ಬಸ್‌ಗಳಿಗೆ ನೀಲೇಶ್ವರ, ಚಂದ್ರಗಿರಿ ಹಾಗೂ ಉದುಮದಲ್ಲಿ ಕಲ್ಲೆಸೆಯಲಾಗಿದೆ. ಉದುಮದಲ್ಲಿ ಪೊಲೀಸರ ಕಣ್ಮುಂದೆಯೇ ಆರು ಮಂದಿಯ ತಂಡ ಕಲ್ಲೆಸೆದು ಪರಾರಿಯಾಗಿದ್ದಾಗಿ ದೂರಲಾಗಿದೆ. ನೀಲೇಶ್ವರ ಬಳಿ ನಡೆದ ಕಲ್ಲೆಸೆತದಿಂದ ಪಳ್ಳತ್ತಡ್ಕ ನಿವಾಸಿಯೊಬ್ಬರು ಗಾಯಗೊಂಡಿದ್ದಾರೆ. ಕಾಸರಗೋಡು ಬಳಿಯ ಚಳಿಯಂಗೋಡಿನಲ್ಲಿ ಬಸ್ಸೊಂದಕ್ಕೆ ಕಲ್ಲೆಸೆಯಲಾಗಿದೆ. ಅದರಿಂದ ಅನಂತರ ಬಂದ ವಾಹನಗಳನ್ನು ಇಲ್ಲಿ ನಿಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಈ ರಸ್ತೆಯಲ್ಲಿ ಬಂದ ಕೆಎಸ್‌ಆರ್‌ಟಿಸಿ ಬಸ್‌ಗೆ ತಂಡವೊಂದು ಕಲ್ಲೆಸೆದಿದೆ. ಇದರಿಂದ ಗಾಜು ಪುಡಿಯಾಗಿದೆ. ಸುಮಾರು 5 ಸಾವಿರ ರೂ. ನಷ್ಟವಾಗಿದೆ. ಸ್ಥಳಕ್ಕೆ ಧಾವಿಸಿದ ಬೇಕಲ ಪೊಲೀಸರು ಅಲ್ಲಿ ಗುಂಪು ಗೂಡಿದ್ದ ಜನರನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದರು.

ಚೆರ್ವತ್ತೂರಿನಲ್ಲಿ ಕೆಎಎಚ್‌ ಆಸ್ಪತ್ರೆಗೂ ಕಲ್ಲೆಸೆದು ಹಾನಿಗೊಳಿಸಲಾಗಿದೆ. ದುಷ್ಕರ್ಮಿಗಳನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಇಲ್ಲಿ ನಾರಾಯಣನ್‌ ಅವರ ಅಂಗಡಿಗೂ ಹಾನಿಗೊಳಿಸಲಾಗಿದೆ. ಇಲ್ಲಿ ನಿಲ್ಲಿಸಿದ್ದ ಹಲವು ವಾಹನಗಳಿಗೆ ಕಲ್ಲೆಸೆದು ಗಾಜು ಪುಡಿ ಮಾಡಲಾಗಿದೆ. ಚೆರ್ವತ್ತೂರು ಬಸ್‌ ನಿಲ್ದಾಣ ಬಳಿ ಆಟೋ ಸ್ಟಾಂಡ್ಡ್‌ನ‌ಲ್ಲಿರಿಸಿದ್ದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಫ್ಲೆಕ್ಸ್‌ ಬೋರ್ಡ್‌ಗೆ ಹಾನಿ ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಗುಂಪನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದರು.
ಕರಿವೆಳ್ಳೂರು ಪೇಟೆಯಲ್ಲಿರುವ ಸಿಂಡಿಕೇಟ್‌ ಬ್ಯಾಂಕ್‌ನ ಎಟಿಎಂ ಕೌಂಟರ್‌ಗೆ ಹಾನಿ ಮಾಡಲಾಗಿದೆ. ಕರಿವೆಳ್ಳೂರು ಟೆಲಿಫೋನ್‌ ಎಕ್ಸ್‌ಚೇಂಜ್‌ಗೆ ಕಲ್ಲೆಸೆದು ಗಾಜು ಪುಡಿ ಮಾಡಲಾಗಿದೆ. ಹಲವು ಮನೆಗಳಿಗೆ ಕಲ್ಲೆಸೆದು ಹಾನಿ ಮಾಡ‌ಲಾಗಿದೆ.

ಬಿಜೆಪಿ ಕಾರ್ಯಕರ್ತರು ಪ್ರಯಾಣಿಸುತ್ತಿದ್ದ ಬಸ್‌ಗಳಿಗೆ ಪಡನ್ನಕ್ಕಾಡ್‌ನ‌ಲ್ಲಿ ಕಲ್ಲೆಸೆಯಲಾಗಿದೆ. ಕಲ್ಲೆಸೆತದಿಂದ ಕಾಸರಗೋಡನ ನಗರಸಭೆಯ ಮಾಜಿ ಕೌನ್ಸಿಲರ್‌ ಗಾಯಗೊಂಡಿದ್ದಾರೆ. ಬಿಜೆಪಿ ಕಾರ್ಯಕರ್ತ ಕಿಶೋರ್‌ ಸಹಿತ ಹಲವರು ಗಾಯಗೊಂಡಿದ್ದಾರೆ. ಸಿಪಿಎಂ ಕಾರ್ಯಕರ್ತರು ಕಲ್ಲೆಸೆದಿರುವುದಾಗಿ ಆರೋಪಿಸಲಾಗಿದೆ. ಕಲ್ಲೆಸೆದವರನ್ನು ಬಂಧಿಸಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ರಸ್ತೆಯಲ್ಲೇ ಕುಳಿತು ಹೆದ್ದಾರಿ ತಡೆಯೊಡ್ಡಿದ್ದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.