ಪರೀಕ್ಷಿತ ಮಹಾರಾಜ
Team Udayavani, May 18, 2017, 3:45 AM IST
ಕೌಶಿಕಿ ನದಿಯ ಸುಂದರ ಪರಿಸರದಲ್ಲಿ ಋಷಿ ಶಮಿಕರ ಆಶ್ರಮವಿತ್ತು. ಅಲ್ಲಿ ಸಾಕಷ್ಟು ಋಷಿಕುಮಾರರು ವೇದಾಧ್ಯಯನದಲ್ಲಿ ನಿರತರಾಗಿದ್ದರು. ಅವರಲ್ಲಿ ಋಷಿ ಶಮಿಕರ ಪುತ್ರನಾದ ಶೃಂಗಿಯೂ ಒಬ್ಬನಾಗಿದ್ದ. ಒಂದು ದಿನ ಋಷಿಕುಮಾರರು ಹೋಮ ಹವನಾದಿಗಳಿಗೆ ಬೇಕಾಗುವ ಸಾಮಗ್ರಿಗಳನ್ನು ಒಟ್ಟು ಮಾಡಲು ಹೋಗಿದ್ದರು. ಋಷಿ ಶಮಿಕರು ಆ ಸಮಯದಲ್ಲಿ ಬ್ರಹ್ಮಧಾನ್ಯದಲ್ಲಿ ನಿರತರಾಗಿದ್ದರು. ಈ ಸ್ಥಿತಿಯಲ್ಲಿ ಅವರಿಗೆ ಹೊರ ಪ್ರಪಂಚದ ಪರಿವೆಯೇ ಇರುತ್ತಿರಲಿಲ್ಲ.
ಇದೇ ಸಮಯದಲ್ಲಿ ಅರಣ್ಯದಲ್ಲಿ ಬೇಟೆ ಆಡಲು ಬಂದ ಪರೀಕ್ಷಿತ ಮಹಾರಾಜರು (ಅರ್ಜುನನ ಮೊಮ್ಮಗ) ಬಿಸಿಲಿನ ಬೇಗೆ ಮತ್ತು ಬೇಟೆಯಾಡಿದ ಆಯಾಸದಿಂದ ಆಶ್ರಯವನ್ನು ಹುಡುಕುತ್ತಾ, ಸಮೀಪದಲ್ಲಿರುವ ಋಷಿ ಶಮಿಕರ ಆಶ್ರಮಕ್ಕೆ ಬರುತ್ತಾರೆ. ಋಷಿ ಶಮಿಕರು ಆಳವಾದ ಧಾನ್ಯದಲ್ಲಿದ್ದು, ಮಹಾರಾಜರು ಆಶ್ರಮ ಪ್ರವೇಶಿಸಿದ್ದು, ನಮಸ್ಕಾರವನ್ನು ಮಾಡಿದ್ದು ಗಮನಕ್ಕೆ ಬರುವುದೇ ಇಲ್ಲ. ಮಹಾರಾಜರು ಪುನಃ “ನಮಗೆ ಬಹಳ ಬಾಯಾರಿಕೆಯಾಗಿದೆ, ನೀರು ಬೇಕು’ ಎಂದು ಕೇಳುತ್ತಾರೆ. ಅದರೆ, ಬ್ರಹ್ಮನ ಸ್ಮರಣೆಯಲ್ಲಿ ಮಗ್ನರಾಗಿದ್ದ ಋಷಿ ಶಮಿಕರಿಗೆ ರಾಜನ ಮಾತುಗಳು ಮೂರ್ನಾಲ್ಕು ಸಲ ಕೂಗಿದರೂ ಕೇಳಿಸುವುದಿಲ್ಲ. ರಾಜ ಪರೀಕ್ಷಿತರಿಗೆ ಸಿಟ್ಟು ಬರುತ್ತದೆ. ಅವರು ಅಂಗಳದಲ್ಲಿ ಸತ್ತು ಬಿದ್ದಿರುವ ಹಾವನ್ನು ಬಾಣದ ತುದಿಯಲ್ಲಿ ಎತ್ತಿ ಅದನ್ನು ಋಷಿ ಶಮಿಕರ ಕೊರಳಿಗೆ ಹಾಕುತ್ತಾರೆ. ಆಶ್ರಮಕ್ಕೆ ಮರಳಿ ಬಂದ ಋಷಿಕುಮಾರರು, ರಾಜಾ ಪರೀಕ್ಷಿತನು ಹೊರಡುತ್ತಿರುವುದನ್ನು ನೋಡುತ್ತಾರೆ ಮತ್ತು ಶೃಂಗಿಯನ್ನು ಕರೆದುಕೊಂಡು ಬರುತ್ತಾರೆ.
ಶೃಂಗಿಯು ಪರೀಕ್ಷಿತರನ್ನು ಆಶ್ರಮಕ್ಕೆ ಬರಮಾಡಿಕೊಳ್ಳಲು ಧಾವಿಸಿ ಬರುತ್ತಾನೆ ಆದರೂ ಕೋಪಗೊಂಡ ಮಹಾರಾಜರು ಹಿಂದಿರುಗದೆ ಹೋಗುತ್ತಾರೆ. ಆಶ್ರಮವನ್ನು ಪ್ರವೇಶಿಸಿದ ಶೃಂಗಿಯು ಋಷಿ ಶಮಿಕರು ಧ್ಯಾನ ಮಗ್ನರಾಗಿರುವುದನ್ನೂ, ಅವರ ಕೊರಳಲ್ಲಿರುವ ಸತ್ತ ಹಾವು ಮತ್ತು ಅದರ ಸುತ್ತ ಒಡಾಡುವ ಇರುವೆಗಳನ್ನೂ ನೋಡಿ ಉದ್ರಿಕ್ತನಾಗುತ್ತಾನೆ. ಕೋಪಗೊಂಡು ಒಂದು ಕೋಲಿನಿಂದ ಹಾವನ್ನು ತೆಗೆದು, “ಯಾರು ಈ ಪಾಪವನ್ನು ಮಾಡಿ¨ªಾರೋ ಅವರು ಇಂದಿನಿಂದ 7 ದಿನಗಳ ಒಳಗೆ ಸರ್ಪರಾಜನಾದ ತಕ್ಷಕನಿಂದ ಮರಣ ಹೊಂದಲಿ’ ಎಂದು ಶಾಪ ಕೊಟ್ಟು, ಕಮಂಡಲದಿಂದ ನೀರನ್ನು ಭೂಮಿಗೆ ಚಿಮಿಕಿಸುತ್ತಾನೆ.
ಅಷ್ಟರಲ್ಲಿ ಎಚ್ಚರಗೊಂಡ ಋಷಿಗಳು ಮಗನು ಕೋಪದಿಂದ ನಡುಗುತ್ತಿರುವುದು ಮತ್ತು ಶಿಷ್ಯರ ಮೊಗದಲ್ಲಿರುವ ಭೀತಿಯನ್ನು ನೋಡಿ ಏನಾಯಿತು ಎಂದು ವಿಚಾರಿಸುತ್ತಾರೆ. ಆಗ ಶೃಂಗಿಯು ನಡೆದ ವಿಷಯವನ್ನು ತಿಳಿಸಿದಾಗ “ಮನುಷ್ಯನು ಸಣ್ಣ ವಿಷಯಕ್ಕೆಲ್ಲ ಕೋಪಿಸಿಕೊಳ್ಳಬಾರದು. ಇಂಥ ವಿಷಯಕ್ಕೆಲ್ಲ ಶಾಪ ಹಾಕಬಾರದು’ ಎಂದು ಶೃಂಗಿಗೆ ಬುದ್ಧಿವಾದ ಹೇಳುತ್ತಾರೆ. “ಮಹಾರಾಜ ಪರೀಕ್ಷಿತರು ವಿಷ್ಣುವಿನ ಅವತಾರವಾಗಿದ್ದು, ರಾಜನಲ್ಲಿ ಕ್ಷಮೆಯನ್ನು ಯಾಚಿಸಿ ಅವರಿಗೆ ಶಾಪದಿಂದ ವಿಮುಕ್ತನಾಗಿ ಮಾಡು’ ಎಂದು ಹೇಳುತ್ತಾರೆ. ಇತ್ತ ರಾಜನು ಅರಮನೆಗೆ ತಲುಪಿದ ನಂತರ ತನ್ನ ದುಷ್ಟ ಕೆಲಸವನ್ನು ನೆನೆಸಿಕೊಂಡು, ತಾನು ತಪ್ಪುಮಾಡಿದೆ. ಋಷಿಗಳಲ್ಲಿ ಕ್ಷಮೆಯಾಚಿಸಬೇಕೆಂದು ನಿಶ್ಚಯಿಸುತ್ತಾನೆ.
– ಹನಮಂತ ಮ. ದೇಶಕುಲಕರ್ಣಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ