ತೋಳದ ಅತಿಯಾಸೆ


Team Udayavani, Jul 20, 2017, 5:25 AM IST

chinnari-2.jpg

ಕಾಡಿನಲ್ಲಿದ್ದ ತೋಳ ಹಸಿವಿನಿಂದ ಕಂಗಾಲಾಗಿತ್ತು. ಹಲವು ದಿನಗಳಿಂದ ಅದಕ್ಕೆ ಸರಿಯಾಗಿ ಆಹಾರ ಸಿಕ್ಕಿರಲಿಲ್ಲ. ಅದಕ್ಕೇ ಹಳ್ಳಿಯ ಕಡೆಗೆ ಹೆಜ್ಜೆ ಹಾಕಿತು. ಕಾಡಿನ ಅಂಚಿನಲ್ಲಿದ್ದ ರೈತನ ಮನೆಯ ಮುಂದೆ ಹೊಂಚು ಹಾಕತೊಡಗಿತು. ರೈತ ಇದನ್ನು ಗಮನಿಸಿ, “ಏನಪ್ಪಾ ಮಾರಾಯ? ಬೆಳಗ್ಗೆನೇ ಬಂದು ಮನೆ ಮುಂದೆ ನಿಂತಿದ್ದೀಯಾ’ ಅಂದನು. ಅದಕ್ಕೆ ತೋಳವು, “ಮೂರು- ನಾಲ್ಕು ದಿನಗಳಿಂದ ಆಹಾರ ಸಿಕ್ಕಿಲ್ಲ, ಹಸಿವಿನಿಂದ ಕಂಗಾಲಾಗಿದ್ದೇನೆ.’ ಎಂದಿತು. ರೈತನು ಸ್ವಲ್ಪ ಹೊತ್ತು ಯೋಚಿಸಿ, ತನಗೆಂದು ಮಾಡಿಕೊಂಡಿದ್ದ ಮಾಂಸಾಹಾರದಲ್ಲಿ ಸ್ವಲ್ಪ ಪಾಲನ್ನು ಕೊಟ್ಟನು. ಗಬಗಬನೆ ತಿಂದ ತೋಳ “ಇನ್ನೂ ಬೇಕೆಂದಿತು.’. ರೈತ ಒಳಕ್ಕೆ ಹೋಗಿ ಇನ್ನೂ ಸ್ವಲ್ಪ ಕೊಟ್ಟನು. ತೋಳಕ್ಕೆ ಎಷ್ಟು ತಿಂದರೂ ತೃಪ್ತಿಯೇ ಆಗುತ್ತಿರಲಿಲ್ಲ. ಕೊನೆಗೆ ಹಾಲು, ಸೊಪ್ಪು, ತರಕಾರಿ, ಹಣ್ಣು, ಹಂಪಲು, ಮುದ್ದೆ, ಸಾರು ಅದನ್ನೂ ಬಿಡಲಿಲ್ಲ. ರೈತನಿಗೇ ಆ ದಿನ ಊಟ ಇಲ್ಲದಾಯಿತು. ರೈತ ತನ್ನ ಬಗ್ಗೆ ಯೋಚಿಸದೆ, ತೋಳದ ಹಸಿವು ನೀಗಿತಲ್ಲ ಎಂದು ಸಂತಸಪಟ್ಟನು..

ಅದೇ ದಿನ ರಾತ್ರಿ ರೈತ ನೀರು ಕುಡಿದು ಮಲಗಿದ್ದಾಗ ತೋಳ ಕಳ್ಳ ಹೆಜ್ಜೆಯನ್ನಿಡುತ್ತಾ ಮನೆಯಂಗಳಕ್ಕೆ ಬಂದಿತು. ತೋಳದ ಮನಸ್ಸಿನಲ್ಲಿ ದುರಾಸೆ ಮನೆ ಮಾಡಿತ್ತು. ರೈತನ ಸಾಕುಪ್ರಾಣಿಗಳ ಮೇಲೆ ತೋಳದ ಕಣ್ಣು ಬಿದ್ದಿತ್ತು. ಇನ್ನೇನು ಅದು ಲಾಯದಲ್ಲಿದ್ದ ಕುದುರೆಯ ಮೈಮೇಲೆ ಬೀಳಬೇಕು, ಅಷ್ಟರಲ್ಲಿ ರೈತ ಬಂದುಬಿಟ್ಟನು. ಲಾಯದಲ್ಲಿ ತೋಳವನ್ನು ನೋಡಿ ಅವನಿಗೆಲ್ಲವೂ ಅರ್ಥವಾಯಿತು. ತೋಳ ತಲೆಬಗ್ಗಿಸಿತು. ರೈತ “ಕುದುರೆಯನ್ನು ತಿನ್ನಲೆಂದು ಬಂದೆಯಲ್ಲವೇ? ಧಾರಾಳವಾಗಿ ತಿನ್ನು. ನನ್ನದೇನೂ ಅಭ್ಯಂತರವಿಲ್ಲ’ ಎಂದು ಕುದುರೆಯತ್ತ ಕಣ್ಣು ಮಿಟುಕಿಸಿದನು. ಸಂತಸಗೊಂಡ ತೋಳ ಕುದುರೆ ಬಳಿಗೆ ತೆರಳಿತು. ಕುದುರೆ “ತೋಳಪ್ಪ ನೀನು ನನ್ನನ್ನು ಹಿಂದಿನಿಂದ ತಿನ್ನು.’ ಎಂದಿತು. ತೋಳಕ್ಕೆ ಇನ್ನೂ ಖುಷಿಯಾಯಿತು. ಕುದುರೆಯ ಬಾಲಕ್ಕೆ ಬಾಯಿ ಹಾಕುವಷ್ಟರಲ್ಲಿ ಕುದುರೆ ತನ್ನ ಬಲಶಾಲಿ ಕಾಲುಗಳಿಂದ ಜೋರಾಗಿ ಒದ್ದಿತು. ಅದರ ಒದೆತಕ್ಕೆ ತೋಳ ದೂರ ಹೋಗಿ ಬಿದ್ದಿತು. ಅದರ ಹಲ್ಲುಗಳೆಲ್ಲಾ ಮುರಿದವು. ಅಲ್ಲಿಂದ ಓಡಿಹೋದ ತೋಳ ಮತ್ತೆ ಆ ಕಡೆ ತಲೆ ಹಾಕಲಿಲ್ಲ.

– ಆದಿತ್ಯ ಹೆಚ್‌.ಎಸ್‌. ಹಾಲ್ಮತ್ತೂರು

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.