ನೀರ ಮೇಲೊಂದು ಶಾಲೆಯ ಮಾಡಿ


Team Udayavani, Sep 21, 2017, 11:03 AM IST

21STATE-33.jpg

ಚಿಕ್ಕವರಾಗಿದ್ದಾಗ ಜೋರು ಮಳೆ ಬಂದು ರೇಡಿಯೋಗಳಲ್ಲಿ “ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ’ ಎಂಬ ಸುದ್ದಿಗಾಗಿ ನಾವೆಲ್ಲರೂ ಚಾತಕಪಕ್ಷಿಗಳಂತೆ ಕಾದು ಕುಳಿತುಕೊಳ್ಳುತ್ತಿದ್ದೆವು. ಅದರಲ್ಲೂ ಹಳ್ಳಿಗಾಡಿನ ಪ್ರದೇಶವಾಗಿದ್ದರೆ ಒಂದಷ್ಟು ಪ್ರದೇಶಗಳು ನೀರಿನಿಂದ ಆವೃತವಾಗುವುದು, ಸೇತುವೆಗಳು ಮುಳುಗುವುದು ಇತ್ಯಾದಿ ಘಟನೆಗಳು ಸರ್ವೇ ಸಾಮಾನ್ಯವಾಗಿದ್ದವು. ಇವೆಲ್ಲವೂ ಮಕ್ಕಳಿಗೆ ರಜೆಯ ನೆಪಗಳು. ಈ ಕುಂಟು ನೆಪಗಳನ್ನು ಹೋಗಲಾಡಿಸಲೆಂದೇ ಬಾಂಗ್ಲಾದೇಶದಲ್ಲಿ ಬೋಟ್‌ ಶಾಲೆಗಳ ಪರಿಕಲ್ಪನೆಯನ್ನು ಹುಟ್ಟು ಹಾಕಿದ್ದಾರೆ. ಇದರಿಂದಾಗಿ ಮಕ್ಕಳು ಹತ್ತಾರು ಕಿ.ಮೀಗಳನ್ನು ನಡೆದು, ಸೇತುವೆಗಳನ್ನು ದಾಟಿ, ಬಸ್ಸು ಹತ್ತಿ ತ್ರಾಸಪಟ್ಟುಕೊಂಡು ಶಾಲೆಗೆ ತಲುಪಬೇಕಿಲ್ಲ. ಶಾಲೆಯೇ ತೇಲುತ್ತಾ ಮಕ್ಕಳ ಮನೆ ಬಳಿಗೆ ಬರುವವು!

ಬಾಂಗ್ಲಾದೇಶದಲ್ಲಿ ಮಳೆಗಾಲದ ಸಂದರ್ಭದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರುವುದು ಸಾಮಾನ್ಯವಾದ ಸಂಗತಿ. ಆ ಸಂದರ್ಭದಲ್ಲಿ ಜನಜೀವನ ಅಸ್ತವ್ಯಸ್ತಗೊಳ್ಳುವುದಲ್ಲದೆ ಬದುಕುವುದು ದುಸ್ತರವಾಗಿಬಿಡುತ್ತದೆ. ಶಾಲೆಗಳಂತೂ ನೀರಿನಲ್ಲಿ ಮುಳುಗಿ ಹೋಗಿ ತಿಂಗಳುಗಳ ಕಾಲ ಬಂದ್‌ ಆಗಿರುತ್ತವೆ. ಆಹಾರ ನೀರಿಗೆ ಕಷ್ಟಪಡಬೇಕಾದ ಸಂದರ್ಭದಲ್ಲಿ ಯಾರು ತಾನೇ ಮಕ್ಕಳ ವಿದ್ಯಾಭ್ಯಾಸದ ಕುರಿತು ಚಿಂತಿಸುತ್ತಾರೆ ಹೇಳಿ. ಅದಕ್ಕೇ ತೇಲುವ ಶಾಲೆಗಳ ಐಡಿಯಾ ಅಲ್ಲಿ ಚಾಲ್ತಿಯಲ್ಲಿದೆ.

ಮಳೆ ಮತ್ತು ಪ್ರವಾಹದಿಂದ ಮಕ್ಕಳ ವ್ಯಾಸಂಗಕ್ಕೆ ತೊಂದರೆಯಾಗುವುದನ್ನು ಅರಿತ “ಶಿಧುಲಾಯ… ಸ್ವಾನಿರ್ವಾರ್‌’ ಎಂಬ ಸಂಸ್ಥೆಯು ಮಕ್ಕಳಿಗೆ ಅನುಕೂಲ ಕಲ್ಪಿಸಲು 2002 ರಲ್ಲಿ ಬೋಟ… ಶಾಲೆಯೊಂದನ್ನು ಮೊತ್ತ ಮೊದಲ ಬಾರಿಗೆ ಪ್ರಾರಂಭಿಸಿತ್ತು. ಈ ಉಪಾಯ ಇಂದು ಯಶಸ್ವಿಯಾಗಿದ್ದು ಒಟ್ಟು 22 ಬೋಟ… ಶಾಲೆಗಳು ಅಲ್ಲಿ ಕಾರ್ಯಾಚರಿಸುತ್ತಿವೆ.ಅಲ್ಲಿ ಓದುತ್ತಿರುವ ಒಟ್ಟು ಮಕ್ಕಳ ಸಂಖ್ಯೆ ಕೇಳಿದರೆ ನೀವು ಬೆಚ್ಚಿಬೀಳುವುದು ಖಂಡಿತ. ಸುಮಾರು 2,000 ವಿದ್ಯಾರ್ಥಿಗಳು ಬೋಟ್‌ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಸಾಮಾನ್ಯ ಶಾಲೆಗೇ ಅಷ್ಟು ಮಂದಿ ಸೇರಿಸುವುದು ಕಷ್ಟ. ಅಂಥದ್ದರಲ್ಲಿ ಈ ಬೋಟ್‌ ಶಾಲೆ ಮಕ್ಕಳಿಗೆ ಆಕರ್ಷಣೆಯೂ ಆಗಿರುವುದರಿಂದ ಮಕ್ಕಳು ಗೈರುಹಾಜರಾಗುವುದಿಲ್ಲ ಎನ್ನುವುದು ಅಲ್ಲಿನ ಶಿಕ್ಷಕರ ಅಭಿಪ್ರಾಯ.

ಈ ಬೋಟ್‌ಗಳಲ್ಲಿ ಮಕ್ಕಳು ಕಲಿಯಲು ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಅಳವಡಿಸಲಾಗಿದೆ. ಒಂದು ಬೋಟ… ದಿನಕ್ಕೆ ಮೂರು ಪಾಳಿಯಲ್ಲಿ ಕೆಲಸ ನಿರ್ವಹಿಸುತ್ತದೆ. ಇಲ್ಲಿ ಕಲಿಯುವ ಮಕ್ಕಳಿಗೆ ಉಚಿತವಾಗಿ ಕಲಿಕಾ ಸಾಮಗ್ರಿಗಳನ್ನು ಒದಗಿಸಲಾಗುತ್ತದೆ. ಮತ್ತೂಂದು ಸಂಗತಿಯೆಂದರೆ ಹಳ್ಳಿಗಳ ದಡಕ್ಕೆ ತೆರಳುವ ಈ ತೇಲುವ ಶಾಲೆಗಳು ಮಕ್ಕಳನ್ನು ಹತ್ತಿಸಿಕೊಂಡು, ತರಗತಿ ಮುಗಿದ ಬಳಿಕ ಮತ್ತೆ ಅವರವರ ಹಳ್ಳಿಗಳಿಗೆ ಬಿಟ್ಟು ಬರುತ್ತವೆ. ಒಂದು ರೀತಿ ಇವುಗಳು ಶಾಲಾ ವಾಹನಗಳಂತೆಯೂ ಕಾರ್ಯ ನಿರ್ವಹಿಸುತ್ತಿವೆ.

ಸೋಲಾರ್‌ ಮತ್ತು ಕಂಪ್ಯೂಟರ್!
ಈ ಬೋಟ್ಗಳಲ್ಲಿ ನಡೆಯುವ ಶಾಲೆಗಳಲ್ಲಿ ಸೋಲಾರ್‌ ಶಕ್ತಿಯನ್ನು ಅಳವಡಿಸಲಾಗಿದೆ. ಒಳಗಡೆ ಇರುವ ದೀಪದ ಬಲುºಗಳು, ಕಂಪ್ಯೂಟರ್‌ ಮತ್ತಿತರ ಉಪಕರಣಗಳು ಸೋಲಾರ್‌ ಶಕ್ತಿಯಿಂದಲೇ ಕೆಲಸ ಮಾಡುತ್ತವೆ. ಬಿಡುವಿನ ವೇಳೆಯಲ್ಲಿ ಓದಿಕೊಳ್ಳಲು ಮಕ್ಕಳಿಗೊಂದು ಪುಟ್ಟ ಗ್ರಂಥಾಲಯವೂ ಇದೆ.

ದಂಡಿನಶಿವರ ಮಂಜುನಾಥ್‌

ಟಾಪ್ ನ್ಯೂಸ್

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.