ಕ್ರಿಕೆಟ್‌ ಅಸೋಸಿಯೇಷ್‌ನ್‌ನಿಂದ ನೀರಾವರಿ ಧರಣಿ


Team Udayavani, May 12, 2017, 4:40 PM IST

Chittani-1.jpg

ಕೋಲಾರ: ನಗರದಲ್ಲಿ ನಡೆಯುತ್ತಿರುವ ನೀರಾವರಿ ಹೋರಾಟವು 334 ನೇ ದಿನ ಪೂರೈಸಿದ್ದು, ಜಿಲ್ಲಾ ಕ್ರಿಕೆಟ್‌ ಅಸೋಸಿಯೇಷನ್‌ ಧರಣಿಯನ್ನು ಮುಂದುವರೆಸಿದರು.  ಮುಖಂಡರಾದ ವಿ.ಮುನಿವೆಂಕಟೇಶಪ್ಪ ಮಾತನಾಡಿ, ಜಿಲ್ಲೆಯ ಜನಪ್ರತಿನಿಧಿಗಳು ತಮ್ಮ ಲಾಭದಾಯಕ ಕೆಲಸಗಳಲ್ಲಿ ನಿರತರಾಗಿದ್ದಾರೆ.

ಪ್ರತಿಯೊಂದು ಸರ್ಕಾರಿ ಕಚೇರಿಗಳಲ್ಲಿ ಸರ್ಕಾರಿ ಅಧಿಕಾರಿಗಳನ್ನು ತಮ್ಮ ಕೆಲಸಗಳಿಗೆ ಹಾಗೂ ಅಧಿಕಾರದ ಅನುಕೂಲಕ್ಕಾಗಿ ತಮ್ಮ ಬೆಂಬಲಿಗರ ಕೆಲಸಗಳನ್ನು ಮಾಡಿಸುತ್ತಾ ಸಾರ್ವಜನಿಕರಿಗೆ ಒಂದು ಸಣ್ಣ ಕೆಲಸವಾಗಬೇಕಾದರೂ ಸಹ ತಿಂಗಳು ಕಟ್ಟಲೆ ಅಲೆದಾಡಿಸುತ್ತಾರೆ. ಈ ನಿಟ್ಟಿನಲ್ಲಿ ಜನತೆಯು ವೋಟನ್ನು ಹಾಕಿ ಗೆಲ್ಲಿಸಿದ ಪರಿಣಾಮ ಈ ಪರಿಸ್ಥಿತಿ ಬಂದೊದಗಿದೆ. ಪ್ರತಿನಿತ್ಯವೂ ನೀರಿಗಾಗಿ ಬೀದಿಗಳಲ್ಲಿ ನೀರಿನ ಕೊಡಗಳನ್ನು ಹಿಡಿದು ಮಹಿಳೆಯರು ಎಲ್ಲಿ ನೀರುಬರುತ್ತದೆಯೋ ಎಂದು ಕಾದುನೋಡುವ ಪರಿಸ್ಥಿತಿ ಉಂಟಾಗಿದೆ ಎಂದು ವಿಷಾದಿಸಿದರು.

ಹೋರಾಟಕ್ಕಿಲ್ಲ ಕಿಮ್ಮತ್ತು: ಸಂಚಾಲಕ ಡಾ.ರಮೇಶ್‌ ಮಾತನಾಡಿ, ಜಿಲ್ಲೆಗೆ ಶಾಶ್ವತ ನದಿ ನೀರನ್ನು ಹರಿಸುವ ಸ್ಪಷ್ಠ ತೀರ್ಮಾನಗಳನ್ನು ಸರ್ಕಾರವಾಗಲಿ ಜಿಲ್ಲೆಯ ಜನಪ್ರತಿನಿಧಿಗಳಾಗಲಿ ಜನರಿಗೆ ತಿಳಿಸದೆ ಮೂರ್ಖರಾಗಿ ಆಡಳಿತ ನಡೆಸುತ್ತಿದ್ದಾರೆ. ಸುಮಾರು 30 ವರ್ಷಗಳಿಂದಲೂ ಶಾಶ್ವತ ನೀರಾವರಿಗಾಗಿ ಹೋರಾಟಗಳು ನಡೆದರೂ ಕೇವಲ ಯೋಜನೆಗಳನ್ನು ಘೋಷಣೆ ಮಾಡಿ ಅನುಷ್ಠಾನಗೊಳಿಸದೆ ಈತನಕ ಯಾಮಾರಿಸಿಕೊಂಡು ಬಂದಿದ್ದಾರೆ.

ಈಗಲೂ ಸಹ ಎತ್ತಿನಹೊಳೆ ಯೋಜನೆಯು ಕೋಲಾರ ಜಿಲ್ಲೆಯ ತನಕ ಹರಿದು ಬರುವುದು ಅನುಮಾನವಾಗಿದೆ. ಆದರೂ ಸರ್ಕಾರ ಮತ್ತು ಜನಪ್ರತಿನಿಧಿಗಳು ಸುಳ್ಳು ಆಶ್ವಾಸನೆಗಳನ್ನು ನೀಡುತ್ತಾ ಕಾಲಹರಣ ಮಾಡುತ್ತಿದ್ದಾರೆಂದು ಆರೋಪಿಸಿದರು. ಸಂಚಾಲಕ ನಗರಸಭಾ ಸದಸ್ಯರು ಮಾತನಾಡಿ, ಒಂದು ವರ್ಷದ ಹಿಂದೆ ಮುಖ್ಯಮಂತ್ರಿಗಳು ಕೃಷ್ಣಾದಲ್ಲಿ ಹೋರಾಟಗಾರರು ಜಿಲ್ಲೆಯ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಎತ್ತಿನಹೊಳೆ ಯೋಜನೆಯಲ್ಲಿ

-ನಿರ್ಧಿಷ್ಠವಾದ ನೀರಿನ ಲಭ್ಯತೆ ಇಲ್ಲವೆಂದು ಸಾಭೀತುಪಡಿಸಿದಾಗ ಅಂದಿನ ಸಭೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಿ ಸಮುದ್ರಕ್ಕೆ ವ್ಯರ್ಥವಾಗಿ ಹರಿದು ಹೋಗುವ ಬೇರೆ ಬೇರೆ ನದಿ ಮೂಲಗಳನ್ನು ತಿರುಗಿಸುವ ಸಮಿತಿಯ ವರದಿಯನ್ನು ಪಡೆದು ಅನುಷ್ಠಾನಗೊಳಿಸುವುದಾಗಿ ತಿಳಿಸಿ ಈತನಕ ಕೇವಲ ಒಂದು ಸಭೆಯನ್ನು ಕಾಟಾಚಾರಕ್ಕೆ ಮಾಡಿದ್ದು, ಕೊಟ್ಟ ಮಾತನ್ನು ನೆರವೇರಿಸದೆ ವಚನ ಭ್ರಷ್ಠರಾಗಿದ್ದಾರೆ ಗಂಭೀರ ಆರೋಪ ಮಾಡಿದ್ದಾರೆ.

ನೀರಾವರಿ ಸಂಚಾಲಕರಾದ ಕುರುಬರಪೇಟೆ ವೆಂಕಟೇಶ್‌, ಅಹಿಂದ ಮಂಜುನಾಥ್‌, ವಿ.ಕೆ. ರಾಜೇಶ್‌, ಗಾಂಧಿನಗರ ಮುಖಂಡರಾದ ಶ್ರೀನಿವಾಸ್‌, ಶ್ರೀರಂಗಣ್ಣ, ಆಂಜನೇಯರೆಡ್ಡಿ, ಆನಂದರೆಡ್ಡಿ, ರುದ್ರೇಶ್‌, ಉಮೇಶ್‌, ರಮೇಶ್‌, ಉದಯ್‌, ಶ್ರೀನಾಥ್‌, ಅಮರ್‌, ಮಂಜು, ನಾಗೇಂದ್ರ, ವಿಶ್ವನಾಥ್‌, ಶಾಂತ ಕುಮಾರ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.