ಸಾಸ್ತಾನ: ಫೆ. 4ರ ವರೆಗೆ ಟೋಲ್ ಸಂಗ್ರಹವಿಲ್ಲ
Team Udayavani, Feb 3, 2017, 3:45 AM IST
ಕೋಟ: ಸಾಸ್ತಾನದ ಹೆದ್ದಾರಿ ಹಿತರಕ್ಷಣಾ ಸಮಿತಿ ಸದಸ್ಯರು ಹಾಗೂ ಹೋರಾಟಗಾರರು ಗುರುವಾರ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಭೇಟಿಯಾಗಿ ಟೋಲ್ ವಿರುದ್ಧದ ಹೋರಾಟಕ್ಕೆ ಸಹಕಾರ ನೀಡುವಂತೆ ಮನವಿ ಸಲ್ಲಿಸಿದರು.
ಹೋರಾಟಗಾರರ ಮನವಿ ಸ್ವೀಕರಿಸಿದ ಶಾಸಕರು, ಉಡುಪಿ ಜಿಲ್ಲಾಧಿಕಾರಿ ಜತೆ ಚರ್ಚೆ ನಡೆಸಿದರು ಹಾಗೂ ಸಾರ್ವಜನಿಕರ ಒಮ್ಮತವಿಲ್ಲದೆ ಶುಲ್ಕ ಸಂಗ್ರಹಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.
ಫೆ. 4ರಂದು ಹೋರಾಟಗಾರರು ಹಾಗೂ ಟೋಲ್ ಸಂಗ್ರಹಿಸುವ ಕಂಪೆನಿ ಜತೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುವುದಾಗಿ ಈ ಸಂದರ್ಭ ಜಿಲ್ಲಾಧಿಕಾರಿ ತಿಳಿಸಿದರು ಹಾಗೂ ಅಲ್ಲಿಯ ತನಕ ಶುಲ್ಕ ಸಂಗ್ರಹಕ್ಕೆ ಅವಕಾಶ ನೀಡುವುದಿಲ್ಲ ಎನ್ನುವ ಭರವಸೆ ನೀಡಿದರು ಎಂದು ಶಾಸಕರ ಬಳಿ ತೆರಳಿದ ನಿಯೋಗದಲ್ಲಿದ್ದ ಜಿ.ಪಂ. ಸದಸ್ಯ ರಾಘವೇಂದ್ರ ಕಾಂಚನ್ ಪತ್ರಿಕೆಗೆ ತಿಳಿಸಿದ್ದಾರೆ.
ಪಡುಬಿದ್ರಿ ಹಾಗೂ ತಲಪಾಡಿ ಟೋಲ್ಗೇಟ್ಗಳಲ್ಲಿ ಅನಿರ್ದಿಷ್ಟಾವಧಿಗೆ ಶುಲ್ಕ ಸಂಗ್ರಹ ತಡೆ ಹಿಡಿಯಲಾಗಿದೆ. ಪಡುಬಿದ್ರಿಯಲ್ಲಿ ಶುಕ್ರವಾರ ಸಮಾಲೋಚನೆ ಸಭೆ ನಡೆಯಲಿದೆ. ತಲಪಾಡಿ ಟೋಲ್ಗೇಟ್ನಲ್ಲಿ ಶುಲ್ಕ ಸಂಗ್ರಹ ಕುರಿತು ಇದುವರೆಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
Jadkal: ಬೈಕ್ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ