ರಸ್ತೆ ಅಪಘಾತ: ಚಿತ್ರಕಲಾ ಶಿಕ್ಷಕ ಭೋಜು ಹಾಂಡ ಮೃತ್ಯು
Team Udayavani, Feb 12, 2017, 3:45 AM IST
ಕುಂದಾಪುರ: ಹೆಮ್ಮಾಡಿ ಬೈಪಾಸ್ ಬಳಿ ಶನಿವಾರ ಮುಂಜಾನೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ, ಖ್ಯಾತ ಚಿತ್ರಕಲಾ ಶಿಕ್ಷಕ, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಭೋಜು ಹಾಂಡ (58) ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.
ಕೋಟೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ ಮೂವತ್ತು ವರ್ಷಗಳಿಂದ ಚಿತ್ರಕಲಾ ಶಿಕ್ಷಕರಾಗಿದ್ದ ಹೆಮ್ಮಾಡಿ ನಿವಾಸಿ ಭೋಜು ಹಾಂಡ ಕಳೆದ ಕೆಲವು ವರ್ಷಗಳಿಂದ ಹೆಮ್ಮಾಡಿ ಹಾಗೂ ಕಟ್ಬೇಲೂ¤ರಿನಲ್ಲಿ ಯೋಗ ತರಬೇತಿ ನೀಡುತ್ತಿದ್ದರು. ಶನಿವಾರ ಹೆಮ್ಮಾಡಿಯ ತರಗತಿಗೆ ಹೋಗಿ ಯೋಗದ ಪರಿಕರ ತೆಗೆದುಕೊಂಡು ಕಟ್ಬೇಲೂ¤ರಿಗೆ ತೆರಳುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆ. ಬೈಕ್ ಹಿಂಬದಿ ಕುಳಿತಿದ್ದ ಅರ್ಪಿತಾ (11) ಗಾಯಗೊಂಡು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಾಗಿ ದ್ದಾರೆ.
ಮುಂಬಯಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ಬೈಕ್ಗೆ ಢಿಕ್ಕಿ ಹೊಡೆದು ಬೈಕ್ನ್ನು ಬಹು ದೂರದ ವರೆಗೆ ಎಳೆದೊಯ್ದಿತ್ತು. ಸ್ಥಳೀಯ ರಿûಾ ಚಾಲಕರು ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು.
ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಭೋಜು ಹಾಂಡ 2013-14ನೇ ಸಾಲಿನ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪಾತ್ರರಾಗಿದ್ದರು. ಉಡುಪಿ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಯೂ ರಾಜ್ಯ ಚಿತ್ರಕಲಾ ಶಿಕ್ಷಕರ ಸಂಘದಲ್ಲಿ ನಿರ್ದೇಶಕರೂ ಉಡುಪಿ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಪ್ರಸ್ತುತ ಸಾಲಿನ ಅಧ್ಯಕ್ಷರೂ ಆಗಿದ್ದರು. ಇವರ ಪ್ರತಿಭೆಗೆ ಉತ್ತಮ ಶಿಕ್ಷಕ ಜಿಲ್ಲಾ ಪ್ರಶಸ್ತಿ ಸೇರಿದಂತೆ ಅನೇಕ ಸಮ್ಮಾನಗಳಿಂದ ಪುರಸ್ಕೃತರಾಗಿದ್ದರು. ಮೃತರು ಉತ್ತಮ ಯೋಗ ಪಟುವೂ ಆಗಿದ್ದು, ಕಳೆದ 17 ವರ್ಷದಿಂದ ಡ್ರಾಯಿಂಗ್ ಹೈಯರ್ ಗ್ರೇಡ್ ಪರೀûಾ ಕೇಂದ್ರವನ್ನು ತಮ್ಮ ಶಾಲೆಯಲ್ಲಿ ನಡೆಸಿಕೊಂಡು ಬರುತ್ತಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಕುಂದಾಪುರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ