ಶಿರೂರು ಹೆದ್ದಾರಿ ಕಾಮಗಾರಿ ನಿರ್ಲಕ್ಷ್ಯ: ಕಾಯಿಲೆ ಹರಡುವ ಭೀತಿ


Team Udayavani, Mar 21, 2017, 4:48 PM IST

shiroor.jpg

ಬೈಂದೂರು: ಆರೋಗ್ಯ ಇಲಾಖೆ ಸಾರ್ವಜನಿಕರು ರೋಗ ರುಜಿನಗಳಿಂದ ಮುಕ್ತವಾಗಬೇಕು, ಸಾಂಕ್ರಾಮಿಕ ಕಾಯಿಲೆಗಳು ಹರಡಬಾರದು ಎಂದು ಹಲವು ವಿಭಾಗಗಳ ಮೂಲಕ ಜನಜಾಗೃತಿ ಮೂಡಿಸುತ್ತಿದೆ.ಆದರೆ ಇಲಾಖೆಯ ನಿದರ್ಶನವನ್ನು ಕಡೆಗಣಿಸಿ ಸಾರ್ವಜನಿಕ ಸ್ಥಳದಲ್ಲಿ ತೆರೆದ ಗಟಾರ ನಿರ್ಮಿಸುವ ಮೂಲಕ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಚತುಷ್ಪಥ ಹೆದ್ದಾರಿ ಕಾಮಗಾರಿ ಅಧಿಕಾರಿಗಳಿಂದ ನಡೆಯುತ್ತಿದೆ.

ಏನಿದು ಸಮಸ್ಯೆ? 
ಬೈಂದೂರು ವಲಯದಲ್ಲಿ ಸದಾ ಒಂದಿಲ್ಲೊಂದು ಸಮಸ್ಯೆಗಳಿಂದಾಗಿ ಹೆದ್ದಾರಿ ಚತುಷ್ಪಥ ಕಾಮಗಾರಿ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ಆರು ತಿಂಗಳ ಹಿಂದೆ ತರಾತುರಿಯಲ್ಲಿ ವಾಣಿಜ್ಯ ಮಳಿಗೆಗಳ ಎದುರು ಮಾರುದ್ದದ ಚರಂಡಿ ತೆಗೆಯುವ ಮೂಲಕ ವ್ಯಾಪಾರ ವಹಿವಾಟಿಗೆ ಹಿನ್ನಡೆ ನೀಡಿದರು.ಬಳಿಕ ಸಾರ್ವಜನಿಕರು ಪ್ರತಿಭಟಿಸಿದ ಬಳಿಕ ಎಚ್ಚೆತ್ತುಕೊಂಡ ಅಧಿಕಾರಿಗಳು ಅಲ್ಲಲ್ಲಿ ತೇಪೆ ಹಾಕುವ ಕಾಮಗಾರಿ ನಡೆಸಿದರು. ಇನ್ನು ಕೆಲವು ಕಡೆ ಮಾರುದ್ದದ ಹೊಂಡಗಳು ಅಪಾಯದ ಮುನ್ಸೂಚನೆ ನೀಡುತ್ತಿದೆ.ಆಶ್ಚರ್ಯವೆಂದರೆ ಸರಕಾರದ ನಿಯಮದ ಪ್ರಕಾರ ಕಾಮಗಾರಿ ನಡೆಸುವ ಕಂಪೆನಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾಮಗಾರಿ ನಡೆಸಬೇಕು ಮತ್ತು ಸೂಕ್ತ ಮುಂಜಾಗ್ರತೆ ವಹಿಸಬೇಕೆಂದಿದ್ದರೂ ಸಹ ಅಧಿಕಾರಿಗಳು ಮಾತ್ರ ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಹೆದ್ದಾರಿ ತುಂಬಾ ಧೂಳು, ಕಲ್ಲು ಮಣ್ಣುಗಳ ಶೇಖರಣೆ, ಸೂಕ್ತ ಎಚ್ಚರಿಕೆಯ ಫಲಕಗಳಿಲ್ಲದೆ ವಾಹನ ಸವಾರರು ಕಂಗೆಡಬೇಕಾದ ಪರಿಸ್ಥಿತಿಯಿದೆ.ಪ್ರತಿಫಲಕದ ಅಳವಡಿಕೆಗಳಿಲ್ಲದ ರಾತ್ರಿ ವೇಳೆ ಸರಣಿ ಅಪಘಾತಗಳು ನಡೆಯುತ್ತಿವೆ. ಮಂದಗತಿಯ ಕಾಮಗಾರಿಯಿಂದಾಗಿ ಸಾರ್ವಜನಿಕರಿಗೆ ನಿತ್ಯದ ಗೋಳು ಸಾಮಾನ್ಯವಾಗಿಬಿಟ್ಟಿದೆ.

ಇಲಾಖೆಗಳು ಕೂಡ ತಟಸ್ಥ  
ಇತ್ತೀಚಿಗೆ ವಿವಿಧ ಇಲಾಖೆಗಳ ತಟಸ್ಥ ನಡವಳಿಕೆಗಳು ಹೆದ್ದಾರಿ ಕಾಮಗಾರಿಯ ನಿರ್ಲಕ್ಷ್ಯಕ್ಕೆ ಇನ್ನಷ್ಟು ಹುರುಪು ನೀಡಿದಂತಾಗಿದೆ.ಈಗಾಗಲೇ ಕಾಮಗಾರಿ ಮಾರ್ಗದಲ್ಲಿ ಸಂಚರಿಸುವ ಬಹುತೇಕ ಲಾರಿಗಳು ಅನ್ಯ ರಾಜ್ಯಗಳದ್ದಾಗಿವೆ. ಹೆಚ್ಚಿನ ವಾಹನಗಳಲ್ಲಿ ಸೂಕ್ತ ದಾಖಲೆಗಳು, ಹೆದ್ದಾರಿ ನಿಯಮಗಳನ್ನು ಅನುಸರಿಸಬೇಕಾದ ವ್ಯವಸ್ಥೆಗಳಿಲ್ಲ. ಪ್ರತಿದಿನ ತೆರೆದ ಬೃಹತ್‌ ಕಂಟೈನರ್‌ಗಳಲ್ಲಿ ಕೂಲಿಯಾಳುಗಳನ್ನು ಸಾಗಿಸಲಾಗುತ್ತಿದೆ.ಸೇತುವೆ ಸೇರಿದಂತೆ ಅಪಾಯಕಾರಿ ಕೆಲಸಗಳಲ್ಲಿ ಸಮವಸ್ತ್ರ ಹಾಗೂ ಹೆಲ್ಲೆಟ್‌ ಧರಿಸಬೇಕೆಂಬ ನಿಯಮವಿದ್ದರೂ ಸಹ ಗುತ್ತಿಗೆದಾರರು ಗಮನಹರಿಸುತ್ತಿಲ್ಲ.

ಸಂಬಂಧ ಪಟ್ಟ ಇಲಾಖೆಯು ಸಹ ಯಾವುದೇ ಕ್ರಮಕೈಗೊಳ್ಳದೆ ಕಣ್ಮುಚ್ಚಿ ಕುಳಿತುಕೊಂಡಿದೆ. ಸಾರ್ವಜನಿಕರು ರಸ್ತೆ ನಿಯಮ ಪಾಲಿಸದಿದ್ದರೆ ಕ್ರಮಕೈಗೊಳ್ಳುವ ಇಲಾಖೆ ಚತುಷ್ಪಥ ಕಾಮಗಾರಿಯ ವಾಹನಗಳ ಮೇಲೆ ಸಡಿಲಿಕೆ ಮಾಡಿರುವುದು ತಾರತಮ್ಯದ ಜೊತೆಗೆ ಅನುಮಾನಪಡುವಂತೆ ಮಾಡಿದೆ ಎನ್ನುವುದು ರಾಘು ಬೈಂದೂರು ಅವರ ಅಭಿಪ್ರಾಯವಾಗಿದೆ.

ಅದೇನೆಯಿದ್ದರೂ ಸಹ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ಕಾಮಗಾರಿ ನಡೆಸುವ ಕಂಪೆನಿಯ ವಿರುದ್ಧ ಜನಸಾಮಾನ್ಯರು ಪ್ರತಿಭಟಿಸುವ ಮೊದಲು ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಾಗಿದೆ. ತೆರೆದ ಗಟಾರಗಳನ್ನು ಮುಚ್ಚುವ ಮೂಲಕ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕಾಗಿದೆ.

ತೆರೆದ ಗಟಾರಗಳು: ಕಾಯಿಲೆ ಭೀತಿ 
ಶಿರೂರು ಚೆಕ್‌ಪೋಸ್ಟ್‌ ಬಳಿ ಕಳೆದ ಎಂಟು ತಿಂಗಳುಗಳಿಂದ ತೆರೆದ ಗಟಾರದಲ್ಲಿ ದುರ್ನಾತ ಬೀರುತ್ತಿದೆ.ಸೂಕ್ತ ಮೇಲ್ಛಾವಣಿ ಅಳವಡಿಸದ ಕಾರಣ ಸತ್ತ ಪ್ರಾಣಿಗಳನ್ನು, ಇನ್ನಿತರ ತ್ಯಾಜ್ಯ ಕಸಗಳನ್ನು ಗಟಾರಕ್ಕೆ ಎಸೆಯುತ್ತಿದ್ದಾರೆ. ಇದರಿಂದಾಗಿ ತ್ಯಾಜ್ಯ ವಸ್ತುಗಳು ಕೊಳೆತು ನಿತ್ಯ ಸಾರ್ವಜನಿಕರು ಮೂಗು ಮುಚ್ಚಿ ಸಾಗಬೇಕಾಗಿದೆ.ಈ ಬಗ್ಗೆ ಗ್ರಾಮ ಪಂಚಾಯತ್‌ ಅಧಿಕಾರಿಗಳು, ಸಾರ್ವಜನಿಕರು ದೂರು ನೀಡಿದರೂ ಸಹ ಹೆದ್ದಾರಿ ಕಾಮಗಾರಿ ಅಧಿಕಾರಿಗಳು ಮಾತ್ರ ತಲೆ ಕೆಡಿಸಿಕೊಳ್ಳುತ್ತಿಲ್ಲ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.