ಪಶ್ಚಿಮಘಟ್ಟದ ತಪ್ಪಲಿನ ನಿವಾಸಿಗಳಲ್ಲಿ ಮತ್ತೆ ಭೀತಿ


Team Udayavani, Mar 23, 2017, 4:21 PM IST

pashchima-gatta.jpg

ಡಾ| ಕಸ್ತೂರಿರಂಗನ್‌ ವರದಿಯ ಪರಿಸರ  ಸೂಕ್ಷ್ಮ ಪ್ರದೇಶ

ಕೊಲ್ಲೂರು: ಕಸ್ತೂರಿರಂಗನ್‌ ವರದಿಯ ಆತಂಕವು ಕುಂದಾಪುರ ಹಾಗೂ ಕಾರ್ಕಳ ತಾಲೂಕಿನ 17 ಗ್ರಾಮಗಳ ಮೇಲೆ ಪರಿಸರ ಸೂಕ್ಷ್ಮಪ್ರದೇಶವೆಂದು ಕೇಂದ್ರ ಸರಕಾರದ ಸಚಿವಾಲಯದ ಅಧಿಸೂಚನೆಯಲ್ಲಿ ಮರುಪ್ರಕಟವಾದ ಹಿನ್ನೆಲೆಯಲ್ಲಿ ಈ ಭಾಗದ ನಿವಾಸಿಗಳಲ್ಲಿ ಮತ್ತೆ ಆತಂಕದ ವಾತಾವರಣ ಸƒಷ್ಟಿಯಾಗಿದೆ.

ಉಭಯ ತಾಲೂಕುಗಳಲ್ಲಿ ಈ ಹಿಂದೆ ಸೂಚಿಸಿದ್ದ ಗ್ರಾಮಗಳನ್ನು ಕಸ್ತೂರಿರಂಗನ್‌ ವರದಿಯಿಂದ ಕೈಬಿಡಬೇಕೆಂದು ಗ್ರಾಮಮಟ್ಟದಲ್ಲಿ ಭಾರೀ ಪ್ರತಿಭಟನೆ ನಡೆದಿತ್ತು. ಏತನ್ಮಧ್ಯೆ ಸಂಪುಟ ಉಪಸಮಿತಿಯು ಸಭೆ ನಡೆಸಿ ಈ ಭಾಗದ ಜನರಿಗೆ ಯಾವುದೇ ತೊಂದರೆಯಾಗದಂತೆ ನಿಗಾ ವಹಿಸಿ ವರದಿ ಸಲ್ಲಿಸಿ ನ್ಯಾಯ ಒದಗಿಸುವ ಭರವಸೆ ನೀಡಿತ್ತು. ಇದೀಗ ಪಶ್ಚಿಮ ಘಟ್ಟದ ತಪ್ಪಲಿನ ಕಾರ್ಕಳ ತಾಲೂಕಿನ ಕಚ್ಚಾರು, ಹೆಬ್ರಿ, ಕಬ್ಬಿನಾಲೆ, ಶಿರ್ಲಾಲ, ಕೆರ್ವಾಶೆ, ದುರ್ಗಾ, ಮಾಳ, ಈದು ಹಾಗೂ ನಾಡಾ³ಲ್‌ ಕುಂದಾಪುರ ತಾಲೂಕಿನ ಕೊಲ್ಲೂರು, ಬೆ„ಂದೂರು, ಹೊಸೂರು, ಹೊಸಂಗಡಿ, ವಂಡ್ಸೆ, ಶೇಡಿಮನೆ, ಹಳ್ಳಿಹೊಳೆ, ಅಮವಾಸ್ಯೆಬೆ„ಲ್‌ ಪರಿಸರಸೂಕ್ಷ್ಮಪ್ರದೇಶವೆಂದು ಗುರುತಿಸಲ್ಪಟ್ಟಿತ್ತು. ಈ ಅವೈಜ್ಞಾನಿಕ ಪರಿಸರಸೂಕ್ಷ್ಮ ಪ್ರದೇಶವೆಂಬ ಪ್ರಕಟಣೆ ಕೊನೆಗೊಳ್ಳುವುದೆಂಬ ನಿರೀಕ್ಷೆಯಲ್ಲಿದ್ದ ಈ ಭಾಗದ ಜನರನ್ನು  ಕೇಂದ್ರದ ಹೊಸ ಅಧಿಸೂಚನೆ ಮತ್ತೆ ಪೇಚಿಗೆ ಸಿಲುಕಿಸಿದ್ದು ರಾಜ್ಯ ಸರಕಾರವು ಸಂಪೂರ್ಣ ಮಾಹಿತಿಯನ್ನೊಳಗೊಂಡ ಮರು ವರದಿ ಸಲ್ಲಿಸುವಿಕೆಯಲ್ಲಿ ಎಡವಬಾರದೆಂಬ ಬೇಡಿಕೆ ಎಲ್ಲೆಡೆಯಿಂದ ಕೇಳಿಬರುತ್ತಿದೆ.

ವಂಡ್ಸೆ ಪರಿಸರದ ನಿವಾಸಿಗಳಲ್ಲಿ ಪರಿಸರ  ಸೂಕ್ಷ್ಮ ಪ್ರದೇಶದ ಆದೇಶದಿಂದ ಆತಂಕ ಉಂಟಾಗಿದ್ದು ಗೊಂದಲಕ್ಕೀಡಾಗಿದ್ದಾರೆ. ಬೆ„ಂದೂರು ಕ್ಷೇತ್ರದ ರಾಜಧಾನಿ ಎಂಬಂತೆ ಬಹಳಷ್ಟು ಅಭಿವೃದ್ಧಿ ಪಥದಲ್ಲಿರುವ ವಂಡ್ಸೆ, ಹೊಸೂರು, ಇಡೂರು, ಕೆರಾಡಿ, ಬೆಳ್ಳಾಲ, ಆಲೂರು ಆ ಭಾಗದ ಜನರಲ್ಲಿ ಹೊಸತೊಂದು ಶಂಕೆ ಮೂಡಿಬರುತ್ತಿದ್ದು ಇದಕ್ಕೊಂದು ಪರಿಹಾರ ಕಂಡುಕೊಳ್ಳುವಲ್ಲಿ ರಾಜ್ಯ ಸರಕಾರವು ನುರಿತ ಅನುಭವಿ ಅಧಿಕಾರಿಗಳೊಡನೆ ಕೊನೆಯ ಸಂಪೂರ್ಣ ಮಾಹಿತಿ ವರದಿಯನ್ನು ಸಲ್ಲಿಸುವುದು ಅಗತ್ಯವಾಗಿದೆ. ಕೇರಳದಲ್ಲಿ ”ಕೇರಳ ಸ್ಟೇಟ್‌ ಬಯೋಡೆ„ವರ್ಸಿಟಿ ಬೋರ್ಡ್‌” ರಚಿಸಿ ಅರಣ್ಯ ಪ್ರದೇಶಕ್ಕೆ ಮಾತ್ರ ಪರಿಸರಸೂಕ್ಷ್ಮವಲಯವೆಂದು ಪರಿಗಣಿಸಿ ಸೀಮಿತಗೊಳಿಸಿ ಉಳಿಸಿರುವುದು ಅಲ್ಲಿನ ಬಹಳಷ್ಟು ಹೆಕ್ಟೇರ್‌ ವಿಸ್ತೀರ್ಣದ ಪ್ರದೇಶದ ಜನರಿಗೆ ಅನುಕೂಲ ಕಲ್ಪಿಸಿದೆ. ಈ ದಿಸೆಯಲ್ಲಿ ಇದಕ್ಕೊಂದು ಮಾರ್ಗೋಪಾಯ ಕಂಡುಹಿಡಿಯುವಲ್ಲಿ ಸರಕಾರ ಬಹಳಷ್ಟು ಶ್ರಮ ವಹಿಸಬೇಕಾಗಿದೆ. ಕೇಂದ್ರದ ಅವೈಜ್ಞಾನಿಕ ಸುತ್ತೋಲೆ ಬಗ್ಗೆ ಶಾಸಕ ಗೋಪಾಲ ಪೂಜಾರಿ, ಸಚಿವ ರಮಾನಾಥ ರೈ ಹಾಗೂ ರಾಜ್ಯ ಸರಕಾರದ ಉನ್ನತ ಅಧಿಕಾರಿಗಳು ಮುಖ್ಯಮಂತ್ರಿ ಗಳೊಡನೆ ಚರ್ಚಿಸಿದ್ದು ಮಾರ್ಗೋಪಾಯ ಕಂಡುಕೊಳ್ಳುವುದರಲ್ಲಿ ನಾನಾ ರೀತಿಯ ಪ್ರಯತ್ನ ನಡೆಸುತ್ತಿರುವುದು ಗಮನೀಯ.

ಕೇಂದ್ರ ಸರಕಾರಕ್ಕೆ ಪರಿಸರ ಸೂಕ್ಷ್ಮಪ್ರದೇಶಗಳ ಸಂಪೂರ್ಣ ಮಾಹಿತಿಯನ್ನು ಒದಗಿಸಲಾಗಿದ್ದರೂ ಹೊಸ ಅದಿಸೂಚನೆಯಲ್ಲಿ ಬದಲಾವಣೆ ಕಾಣದಿರುವುದು ಈ ಭಾಗದ ನಿವಾಸಿಗಳಲ್ಲಿ ನಿರಾಶೆ ಉಂಟುಮಾಡಿದೆ. ಒಟ್ಟಾರೆ ಅವೈಜ್ಞಾನಿಕವಾಗಿ ಸೆಟ್‌ಲೆ„ಟ್‌ ಮೂಲಕ ಪ್ರದೇಶದ ಗುರುತಿಸುವಿಕೆಯ ಪ್ರಕ್ರಿಯೆಯು ಪರಿಸರಸೂಕ್ಷ್ಮಪ್ರದೇಶದಿಂದ ಹೊರಗಿರುವ ಪ್ರದೇಶದ ನಿವಾಸಿಗಳಿಗೆ ಅನ್ಯಾಯ ಮಾಡಿದಂತಾಗುವುದು ಎಂದು ವಂಡ್ಸೆ ಗ್ರಾ.ಪಂ. ಅಧ್ಯಕ್ಷ ಉದಯ ಕುಮಾರ್‌ ಶೆಟ್ಟಿ ಹೇಳಿದ್ದಾರೆ.

– ಡಾ| ಸುಧಾಕರ ನಂಬಿಯಾರ್‌

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.