ಗಿಳಿಯಾರು: ಬೆಂಕಿ ಅವಘಡ; ಕಲ್ಲಂಗಡಿ ಕೃಷಿಗೆ ಹಾನಿ
Team Udayavani, Mar 25, 2017, 3:54 PM IST
ಕೋಟ: ಕೋಟ ಗ್ರಾ.ಪಂ. ವ್ಯಾಪ್ತಿಯ ಮೂಡುಗಿಳಿಯಾರಿನ ಕೃಷಿಭೂಮಿಯಲ್ಲಿ ಮಾ.23ರಂದು ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ತೀವ್ರತೆ ನೂರಾರು ಎಕ್ರೆ ಕೃಷಿಭೂಮಿಗೆ ವ್ಯಾಪಿಸಿತು ಹಾಗೂ ಹೇರಳವಾಗಿ ಬೆಳೆದಿದ್ದ ಕಲ್ಲಂಗಡಿ ಬೆಳೆಗೆ ಹಾನಿಯಾಯಿತು. ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬಂದಿಗಳ ಜಂಟಿ ಕಾರ್ಯಾಚರಣೆಯಿಂದ ಸಂಭಾವ್ಯ ಭಾರೀ ಅನಾಹುತ ತಪ್ಪಿದೆ.
ಅಗ್ನಿಶಾಮಕದಳ ವಾಹನದ ಅವಸ್ಥೆ ಕುಂದಾಪುರ ಅಗ್ನಿಶಾಮಕ ಠಾಣೆಯಲ್ಲಿ ಕಾರ್ಯನಿರ್ವಹಿಸುವ ವಾಹನವು ಸುಮಾರು ಇಪ್ಪತ್ತು ವರ್ಷಗಳಿಗಿಂತ ಹಳೆಯದಾಗಿದ್ದು ತುರ್ತು ಸಂದರ್ಭಗಳಲ್ಲಿ ಕಾರ್ಯಾಚರಣೆ ನಡೆಸಲು ಇದರಿಂದ ಸಾಧ್ಯವಾಗುತ್ತಿಲ್ಲ. ಗುರುವಾರ ಗಿಳಿಯಾರಿನಲ್ಲಿ ಅಗ್ನಿ ಅವಘಡ ಸಂಭವಿಸಿದಾಗ ಸ್ಥಳಕ್ಕಾಗಮಿಸಿದ ವಾಹನ ತುರ್ತು ಕಾರ್ಯಾಚರಿಸುವಲ್ಲಿ ವಿಫಲವಾಯಿತು. ಈ ಕುರಿತು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿ ಜಿ.ಪಂ.ಸದಸ್ಯ ರಾಘವೇಂದ್ರ ಕಾಂಚನ್ ಅವರ ಗಮನಕ್ಕೆ ತಂದರು. ಅನಂತರ ಜಿ.ಪಂ. ಸದಸ್ಯರು ಸಮಸ್ಯೆಯನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಕ್ರಮಕೈಗೊಳ್ಳುವಂತೆ ವಿನಂತಿಸಿದ್ದಾಗಿ ಪತ್ರಿಕೆಗೆ ತಿಳಿಸಿದ್ದಾರೆ.
ಸ್ಥಳಕ್ಕೆ ಜಿ.ಪಂ. ಸದಸ್ಯ ರಾಘವೇಂದ್ರ ಕಾಂಚನ್, ಕೋಟ ಸಿ.ಎ.ಬ್ಯಾಂಕ್ ಅಧ್ಯಕ್ಷ ತಿಮ್ಮ ಪೂಜಾರಿ, ತಾ.ಪಂ.ಮಾಜಿ ಸದಸ್ಯ ಭರತ್ ಶೆಟ್ಟಿ, ಗ್ರಾ.ಪಂ.ಸದಸ್ಯೆ ಜ್ಯೋತಿ ಬಿ.ಶೆಟ್ಟಿ ಭೇಟಿ ನೀಡಿದ್ದಾರೆ ಹಾಗೂ ಅಗ್ನಿಶಾಮಕದಳದ ಸಿಬಂದಿಗಳಾದ ನವೀನ್, ಚೆನ್ನಯ ಪೂಜಾರಿ , ಸಂತೋಷ್ ಶೆಟ್ಟಿ, ವಿಷ್ಣು ಡಿ.ಗೌಡ, ದೀಪಕ್ ಬೆಂಕಿ ನಂದಿಸುವಲ್ಲಿ ಪರಿಶ್ರಮಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ
“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ
Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ
Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ
Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ