70ರ ಸಂಭ್ರಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಲ್ಕಟ್ಕರೆ


Team Udayavani, Apr 17, 2017, 4:44 PM IST

17-krk-3.jpg

ಕುಂದಾಪುರ: ಮೇಲ್ಕಟ್ಕರೆ ಸರಕಾರಿ ಹಿ.ಪ್ರಾ. ಶಾಲೆ ಪ್ರಸ್ತುತ 70ರ ಸಂಭ್ರಮದಲ್ಲಿದೆ. ಈ ಸಂಭ್ರಮದಲ್ಲಿ ಶಾಲೆ ಹತ್ತು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಸಮಾರಂಭ ಅದ್ದೂರಿಯಾಗಿ ನಡೆಯಲಿದೆ. ಒಂದು ಕಾಲದಲ್ಲಿ  ಸಾಕಷ್ಟು ಸಂಖ್ಯೆಗಳ ವಿದ್ಯಾರ್ಥಿಗಳು  ಇದ್ದ ಈ ಶಾಲೆ  ದಶಕದ ಈಚೆಗೆ ಶಾಲೆಯಲ್ಲಿ ವಿದ್ಯಾರ್ಥಿಗಳ ದಾಖಲಾತಿ ತೀವ್ರವಾಗಿ ಕುಸಿಯುತ್ತಿದೆ. ಇದನ್ನು  ಗಮನಿಸಿದ ಮೇಲ್ಕಟ್ಕರೆ ಶಾಲೆಯ ಹಳೆ ವಿದ್ಯಾರ್ಥಿಗಳು ಅದೆಷ್ಟೋ ನಮ್ಮೂರ ಮಕ್ಕಳಿಗೆ ವಿದ್ಯೆ ನೀಡಿ ಬದುಕು ಕೊಟ್ಟ ನಮ್ಮೂರ ಶಾಲೆಯನ್ನು ಉಳಿಸಿ ಬೆಳೆಸಬೇಕೆಂಬ ಸಂಕಲ್ಪ ತೊಟ್ಟಿದ್ದಾರೆ. ಈ ಸಂಕಲ್ಪದ ಯಶಸ್ಸಿಗಾಗಿ ಹಾಕಿಕೊಂಡ ಒಂದು ಕಾರಣವೇ ಶಾಲಾ70 ರ ಸಂಭ್ರಮ.

ನಡೆದು ಬಂದ ದಾರಿ ಮೇಲ್ಕಟ್ಕರೆ, ಕುಂದಾಪುರ ತಾಲೂಕಿನ ಕೋಣಿ ಗ್ರಾಮಕ್ಕೆ ಸೇರಿದ ಊರು. ಈ ಊರ ಮಕ್ಕಳ  ವಿದ್ಯಾಭ್ಯಾಸಕ್ಕಾಗಿ ದಿ| ಕೃಷ್ಣಪ್ಪ ಶೆಟ್ಟಿ ಕಟ್ಕರೆ ಮತ್ತು ಕಟ್ಕರೆ ಅಧಿಕಾರಿಮನೆ ಕೃಷ್ಣಪ್ಪ ಶೆಟ್ಟಿ ಅವರ  ಶ್ರಮದ ಫಲವಾಗಿ 1946ರಲ್ಲಿ ಮೇಲ್ಕಟ್ಕರೆಗೆ ಸರಕಾರದಿಂದ ಪ್ರಾಥಮಿಕ ಶಾಲೆ ಮಂಜೂರಾಗುತ್ತದೆ.  

ಆರಂಭದಲ್ಲಿ 1ರಿಂದ 5ನೇ ತರಗತಿ ತನಕ ಮಂಜೂರಾತಿ ದೊರಕಿದ್ದು  1975-76 ರಲ್ಲಿ 6ನೇ ತರಗತಿ ಮತ್ತು 1976-77ರಲ್ಲಿ 7ನೇ ತರಗತಿಗೆ ಸರಕಾರದಿಂದ ಮಂಜೂರಾತಿ ದೊರೆತಿತ್ತು. ಶಾಲೆ ಆರಂಭಗೊಂಡಂದಿನಿಂದ ಮಕ್ಕಳ ದಾಖಲಾತಿ ವರ್ಷದಿಂದ ವರ್ಷಕ್ಕೆ ತೀವ್ರಗತಿಯಲ್ಲಿ ಏರಿಕೆಯನ್ನು ಕಂಡಿದೆ. ಹೀಗೆ ಮಕ್ಕಳಿಂದ ತುಂಬಿ ತುಳುಕುತ್ತಿದ್ದ ಈ ಶಾಲೆಯಲ್ಲಿ  ದಶಕದ ಹಿಂದೆ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರು. ಜತೆಗೆ ಸಾಕಷ್ಟು ತರಗತಿ ಕೋಣೆಗಳು ಇದ್ದವು. ದಶಕದ ಈಚೆಗೆ ಶಾಲೆಯಲ್ಲಿ ವಿದ್ಯಾರ್ಥಿಗಳ ದಾಖಲಾತಿ ತೀವ್ರವಾಗಿ ಕುಸಿಯುತ್ತಿದೆ.

ಶಾಲೆಯ ಅಭಿವೃದ್ಧಿಗೆ  ಯೋಜನೆ  
ಶಾಲೆಯಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳಕ್ಕೆ ಪ್ರಥಮ ಆದ್ಯತೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಪರಿಸರದ ಮಕ್ಕಳ ಹೆತ್ತವರನ್ನು ಭೇಟಿ ಮಾಡಿ ಅವರಿಗೆ ಶಾಲೆಯಲ್ಲಿ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿ ತಮ್ಮ ಮಕ್ಕಳನ್ನು ಮೇಲ್ಕಟ್ಕರೆ ಸರಕಾರಿ ಶಾಲೆಗೆ ದಾಖಲಿಸುವಂತೆ ಮನವೂಲಿಸಲಾಗುತ್ತಿದೆ. ತಾವು ಹಾಕಿಕೊಂಡ ಅಭಿವೃದ್ಧಿ ಯೋಜನೆಗಳಿಗೆ ಹಣಕಾಸಿನ ತೊಡಕು ಉಂಟಾಗಬಾರದೆಂದು ಆರ್ಥಿಕ ಸಂಪನ್ಮೂಲದ ಕ್ರೋಡೀಕರಣಕ್ಕೆ ಹೆಚ್ಚಿನ ಗಮನ ವಹಿಸಲಾಗಿದೆ. ಸಂಗ್ರಹಿಸಿದ ಸಂಪನ್ಮೂಲ ಬಳಸಿಕೊಂಡು ಶಾಲೆಗೆ ಅಗತ್ಯವಿರುವ ಎಲ್ಲ ಶೈಕ್ಷಣಿಕ ಸೌಲಭ್ಯಗಳನ್ನು  ಒದಗಿಸಿ ಸುಂದರ ಶಾಲೆ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ.  ಈ ನೆಲೆಯಲ್ಲಿ ಶಾಲೆಯ ಹಳೆ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಸಂಘಟಿಸುವಲ್ಲಿ ಸ್ಥಳೀಯ ಯುವಶಕ್ತಿ ಯುವಕ ಮಂಡಲದ ಸರ್ವ ಸದಸ್ಯರು  ಕ್ರಿಯಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ.

ಹಲವು ಯೋಜನೆಗಳು
ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ದಾಖಲಾತಿಯಲ್ಲಿ  ಉತ್ತಮ ಪ್ರಗತಿ ಕಾಣಲೇಬೇಕೆಂಬುದು ಸಂಭ್ರಮ ಸಮಿತಿಯವರ ಹೆಬ್ಬಯಕೆ. ಅದಕ್ಕಾಗಿ ಅತ್ಯಂತ ಸಮರ್ಥ ಇಂಗ್ಲಿಷ್‌ ಭಾಷಾ ಶಿಕ್ಷಕರನ್ನು ಶಾಲೆಗೆ ಒದಗಿಸುವುದರೊಂದಿಗೆ ವಿದ್ಯಾರ್ಥಿಗಳು ಇಂಗ್ಲಿಷ್‌ ಭಾಷೆಯನ್ನು  ಲೀಲಾಜಾಲವಾಗಿ ಬಳಸುವಂತೆ ಮಾಡಲು ಆದ್ಯತೆ ನೀಡುವುದು, ದೂರದ ವಿದ್ಯಾರ್ಥಿಗಳಿಗೆ ಉಚಿತ ವಾಹನ ಸೌಕರ್ಯ ಒದಗಿಸುವುದು, ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೂ ಕಂಪ್ಯೂಟರ್‌ ಶಿಕ್ಷಣ ನೀಡುವುದು ಹೀಗೆ ಹತ್ತು ಹಲವು ಯೋಜನೆಗಳನ್ನು ರೂಪಿಸಲಾಗಿದೆ.

ಎ. 23ರಂದು 70ರ ಸಂಭ್ರಮ
ಶಾಲಾ 70ರ ಸಂಭ್ರಮ ಎ. 23ರಂದು ಜರಗಲಿದ್ದು, ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ವಿಧಾನ ಪರಿಷತ್‌ ಸದಸ್ಯ ಪ್ರತಾಪಚಂದ್ರ ಶೆಟ್ಟಿ,  ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಮೋಹನ ಆಳ್ವಾ, ರಾಮೀ ಹೊಟೇಲ್ಸ್‌ ದುಬೈ ಮಾಲಕ ವರದರಾಜ ಎಂ. ಶೆಟ್ಟಿ ಕಾಳಾವರ, ವಿದ್ಯಾಂಗ ಉಪನಿರ್ದೇಶಕ  ದಿವಾಕರ ಶೆಟ್ಟಿ ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.