ಮುಂಗಾರು ಮಳೆಯ ನಿರೀಕ್ಷೆ: ತಾಲೂಕಿನಲ್ಲಿ ಗರಿಗೆದರಿದ ಕೃಷಿ ಚಟುವಟಿಕೆ


Team Udayavani, May 25, 2017, 3:56 PM IST

2405kde3.jpg

ಕುಂದಾಪುರ:  ಮುಂಗಾರು ಮಳೆಯ ಆರಂಭದ ನಿರೀಕ್ಷೆಯೊಂದಿಗೆ  ತಾಲೂಕಿನಲ್ಲಿ  ಕೃಷಿ ಚಟುವಟಿಕೆಗಳು ಆರಂಭವಾಗಿವೆ.  ಬರದ ಛಾಯೆಯಿಂದ ತತ್ತರಿಸಿದ ರೈತರ ಮುಖದಲ್ಲಿ ಈ ಬಾರಿ ಮುಂಗಾರು ಮಳೆಯ ನಿರೀಕ್ಷೆಯನ್ನು  ಕಾಣಬಹುದಾಗಿದೆ. ಕಳೆದ ಎರಡು ದಿನದಲ್ಲಿ ತಾಲೂಕಿನಲ್ಲಿ ಸುರಿದ ಸಾಧಾರಣ ಮಳೆಯಿಂದ  ಉತ್ತೇಜನಗೊಂಡ ರೈತರು ಬೀಜ ಬಿತ್ತನೆ ಹಾಗೂ ಇತರ ಕೃಷಿ ಚಟುವಟಿಕೆಗೆ ಮುಂದಾಗಿದ್ದಾರೆ.

ಕಳೆದ ವರ್ಷ ಮಳೆ ಉತ್ತಮವಾಗಿ ಬೀಳದೆ ಇದ್ದರೂ  ಮುಂಗಾರು ಬೆಳೆಗೆ ಯಾವುದೇ ಧಕ್ಕೆಯಾಗಿರಲಿಲ್ಲ. ಆದರೆ ಹಿಂಗಾರು ಬೆಳೆಗೆ ನೀರಿನ ಕೊರತೆಯನ್ನು ಕಾಣಬೇಕಾಯಿತು.ರೈತರು  ಜಮೀನನ್ನು ಉಳುಮೆ ಮಾಡಿ ಬೆಳೆ ಬಿತ್ತನೆ ಮಾಡಲು ಭೂಮಿ ಹದ ಮಾಡಿಕೊಳ್ಳಲು ತೊಡಗಿರುವುದು ಕಂಡ ಬಂತು. ಕೃಷಿ ಇಲಾಖೆ ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ನೀಡಲು ಎಲ್ಲ ರೀತಿಯ ಕ್ರಮ ಕೈಗೊಂಡು ಈಗಾಗಲೇ ಕೃಷಿ ಇಲಾಖೆ ರೈತ ಸಂಪರ್ಕ ಕೇಂದ್ರಗಳು ಹಾಗೂ ಸಹಕಾರಸಂಘಗಳ ಮೂಲಕ ಬಿತ್ತನೆ ಬೀಜಗಳನ್ನು ವಿತರಿಸಲಾಗುತ್ತಿದೆ.

ಮುಂಗಾರು ಮಳೆಯ ನಿರೀಕ್ಷೆ  
ಎಪ್ರಿಲ್‌ ಅಂತ್ಯದ ವೇಳೆಗೆ ವಾಡಿಕೆಯಂತೆ 26 ಮಿ.ಮೀ.ನಷ್ಟು  ಮಳೆಯಾಗಬೇಕಾಗಿತ್ತು ಆದರೆ ಈ ಬಾರಿ ಎಪ್ರಿಲ್‌ ತಿಂಗಳಲ್ಲಿ ಮಳೆಯಾಗಿಲ್ಲ.  ಮೇ ತಿಂಗಳಲ್ಲಿ ವಾಡಿಕೆಯಂತೆ 159 ಮಿ.ಮೀ.ನಷ್ಟು ಮಳೆಯಾಗಬೇಕಾಗಿದ್ದು  ಕಳೆದ ವರ್ಷ 105 ಮಿ.ಮೀ.ನಷ್ಟು ಬಂದಿದ್ದರೆ ಈ ಬಾರಿ ಈಗಾಗಲೇ 84.4 ಮಿ.ಮೀ.ರಷ್ಟು ಮಳೆಯಾಗಿದೆ.  ಮುಂದಿನ ವಾರದಲ್ಲಿ  ಹೆಚ್ಚು ಮಳೆಯನ್ನು ನಿರೀಕ್ಷಿಸಲಾಗಿದೆ.

ಒಟ್ಟು  ಗುರಿ 18,250 ಹೆಕ್ಟೇರ್‌ 2016-17ನೇ ಸಾಲಿನಲ್ಲಿ ತಾಲೂಕಿ ನಲ್ಲಿ  ಮುಂಗಾರು ಹಂಗಾಮಿನಲ್ಲಿ  18 ಸಾವಿರ ಹೆಕೆ‌ràರ್‌ನಲ್ಲಿ ಭತ್ತ ಬೆಳೆಯುವ  ಗುರಿ ಹೊಂದಲಾಗಿತ್ತು. ಆದರೆ ಸುಮಾರು 17,750 ಹೆಕೆ‌ràರ್‌ನಲ್ಲಿ ಭತ್ತ ಬೆಳೆಯಲಾಗಿತ್ತು. ಈ ಬಾರಿ ಕುಂದಾಪುರ, ವಂಡ್ಸೆ ಹಾಗೂ ಬೈಂದೂರು ಹೋಬಳಿ ಸೇರಿದಂತೆ 18,250 ಹೆಕ್ಟೇರ್‌ ಗುರಿಯನ್ನು ಹೊಂದಲಾಗಿದೆ.  ಒಟ್ಟು 60,225 ಟನ್‌ ಅಕ್ಕಿ ಉತ್ಪಾದನೆಯ ನಿರೀಕ್ಷೆ ಹೊಂದಲಾಗಿದೆ.

ಕೂಲಿಕಾರ್ಮಿಕರ ಕೊರತೆ
ಪ್ರತಿ ವರ್ಷದಂತೆ ಈ ಬಾರಿಯೂ ಕೃಷಿ ಕೂಲಿ ಕಾರ್ಮಿಕರ ಕೊರತೆ ಕಂಡು ಬಂದಿದೆ. ಕೃಷಿ ವೃತ್ತಿಯನ್ನು ಮಾಡವವರ ಸಂಖ್ಯೆ ಕ್ಷೀಣಿಸುತ್ತಿದ್ದು ರೈತರು ಬಹುತೇಕ ಕೃಷಿ ಯಂತ್ರಗಳತ್ತ ಮುಖಮಾಡಿದ್ದಾರೆ. ಯಾಂತ್ರಿಕ ಕೃಷಿ ಪದ್ಧತಿಯನ್ನು ಪ್ರತಿ ಗ್ರಾಮದಲ್ಲಿ ಇಂದು ಕಾಣಬಹುದಾಗಿದೆ.

ಬಿತ್ತನೆ ಬೀಜ ಪೂರೈಕೆ
ಕೃಷಿ ಇಲಾಖೆಯ  ಮೇ 25ರ ಮಾಹಿತಿಯಂತೆ  ತಾಲೂಕಿನ ಬೈಂದೂರು, ವಂಡ್ಸೆ ಹಾಗೂ ಕುಂದಾಪುರ ರೈತ ಸಂಪರ್ಕ ಕೇಂದ್ರಗಳ ಮೂಲಕ ಈಗಾಗಲೇ ರೈತರಿಗೆ ಭತ್ತದ ಬೀಜ ಪೂರೈಕೆಯಾಗಿದೆ. ಈ ಭಾಗದಲ್ಲಿ ಪ್ರಾಮುಖ್ಯವಾಗಿ  ಎಂಓ4 ಬಿತ್ತನೆ ಬೀಜಕ್ಕೆ ಹೆಚ್ಚಿನ ಬೇಡಿಕೆ ಕಂಡು ಬಂದಿದೆ. ಒಟ್ಟು 665 ಕ್ವಿಂಟಾಲ್‌ ಬಿತ್ತನೆ ಬೀಜದ ಪೂರೈಕೆಯಾಗಿದೆ.  ಕಳೆದ ವರ್ಷ ಸುಮಾರು 2,522 ಫಲಾನುಭವಿಗಳಿಗೆ 1011.33 ಕ್ವಿಂಟಾಲ್‌ನಷ್ಟು ಬಿತ್ತನೆ ಬೀಜ ಪೂರೈಕೆ ಮಾಡಲಾಗಿತ್ತು. ರೈತರಿಗೆ ಅನೇಕ ಯೋಜನೆಯಡಿ ಪವರ್‌ ಟಿಲ್ಲರ್‌, ಟ್ರಾÂಕ್ಟರ್‌, ರೀಪರ್‌, ವೀಡರ್‌, ಟಾರ್ಪ್‌ಲ್‌ಗ‌ಳನ್ನು  ಸಬ್ಸಿಡಿ ರೂಪದಲ್ಲಿ  ನೀಡಲಾಗಿದೆ.

ತಾಲೂಕಿನಲ್ಲಿ ಈ ಬಾರಿ ಸುಮಾರು 18,250 ಹೆಕ್ಟರ್‌ನಲ್ಲಿ  ಭತ್ತ ಬೆಳೆಯುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಹಿಂದಿನ ಬಾರಿ ಮಳೆ ಕಡಿಮೆ ಇದ್ದರೂ ಮುಂಗಾರು ಬೆಳೆಗೆ ಯಾವುದೇ ಧಕ್ಕೆ ಯಾಗಿರಲಿಲ್ಲ.  ಕಳೆದ ಎರಡು ವರ್ಷಗಳಿಂದ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ಹಿಂಗಾರು ಕೃಷಿಯಲ್ಲಿ ಹಿನ್ನಡೆಯನ್ನು ಕಂಡುಕೊಳ್ಳಲಾಗಿದೆ.  ಈಗಾಗಲೇ ಮುಂಗಾರು ಕೃಷಿಗೆ ರೈತರಿಗೆ ಬಿತ್ತನೆ ಬೀಜವನ್ನು ಪೂರೈಸಲಾಗಿದೆ. ಅಲ್ಲದೇ ವಿವಿಧ ಯೋಜನೆಯಡಿ ಕೃಷಿ ಯಂತ್ರೋಪ ಕರಣಗಳನ್ನು ನೀಡಲಾಗಿದೆ. ವಿಶೇಷ‌ ವಾಗಿ ಈ ಬಾರಿ ಸರಕಾರ ಕೃಷಿ ಭಾಗ್ಯ ಯೋಜನೆಯನ್ನು  ಕರಾವಳಿ ಪ್ರದೇಶಕ್ಕೆ ನೀಡಿ ರುವುದರಿಂದ ರೈತರು ಹೆಚ್ಚು  ಕೃಷಿ ಚಟು ವಟಿಕೆಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.
-ವಿಟಲ ರಾವ್‌, ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಇಲಾಖೆ ಕುಂದಾಪುರ.

– ಉದಯ ಆಚಾರ್‌ ಸಾಸ್ತಾನ

ಚಿತ್ರ: ರಾಜೇಶ್‌ ಕೊರವಡಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.