ತಂತಿ ಮೇಲೆ ಕಸರತ್ತು: ದೇವರಗದ್ದೆ ಎಂಬ ಕುಗ್ರಾಮವನ್ನು ದೇವರೇ ಕಾಯಬೇಕು


Team Udayavani, Jul 23, 2017, 8:20 AM IST

2107bdre1.gif

ಬೈಂದೂರು: ಬೈಂದೂರು ಸಮೀಪದ ಕುಗ್ರಾಮವಾದ ದೇವರಗದ್ದೆ ಎನ್ನುವ ಊರಿನ ಜನರು ಕಳೆದ ಆರು ದಶಕಗಳಿಂದ ತಂತಿ ಮೇಲೆ ಸಂಚರಿಸುತ್ತಾ  ಮಳೆಗಾಲ ಕಳೆಯಬೇಕಾದ ಸಂಕಷ್ಟದ ಪರಿಸ್ಥಿತಿ ಹೊಂದಿದ್ದಾರೆ.

ದೇವರ ಮುನಿಸು!
ಬೈಂದೂರು ನೂತನ ಬಸ್‌ ನಿಲ್ದಾಣದಿಂದ 20 ಕಿ.,ಮೀ ಪೂರ್ವಕ್ಕೆ ಸಾಗಿದಾಗ ಸಹ್ಯಾದ್ರಿ ಪರ್ವತ ಶ್ರೇಣಿಗಳಿವೆ. ಇಲ್ಲಿನ ಪ್ರಸಿದ್ದ ಕೊಸಳ್ಳಿ ಜಲಪಾತಕ್ಕೆ ಸಾಗುವಾಗ ಬಲಭಾಗದ ಕಾಡು ದಾರಿಯಲ್ಲಿ ಸಾಗಿದರೆ ದೇವರಗದ್ದೆ ಕಾಣಸಿಗುತ್ತದೆ. ದೇವರಗದ್ದೆಗೆ ಅಭಿವೃದ್ಧಿಯ ವಿಚಾರದಲ್ಲಿ ದೇವರೆ ಮುನಿದುಕೊಂಡಂತಿದೆ. 35ರಿಂದ40 ಮನೆಗಳಿರುವ ಈ ಭಾಗದಲ್ಲಿ ಮಳೆಗಾಲದ ಮೂರು ತಿಂಗಳು ಹೊರಜಗತ್ತಿನ ಸಂಪರ್ಕವೇ ಇಲ್ಲದಂತಹ ಪರಿಸ್ಥಿತಿಯಿದೆ.

ಊರಿಗೆ ಅಡ್ಡಲಾಗಿ ಹರಿಯುವ ನದಿಯನ್ನು ದಾಟಲು ತಲೆತಲಾಂತರದಿಂದ ತಂತಿಸಂಕವನ್ನು ಬಳಸುತ್ತಿದ್ದಾರೆ. ಜಾಸ್ತಿ ಮಳೆಯಾದಾಗ ನೀರಿನ ರಭಸದಲ್ಲಿ ಕಾಲುಸಂಕವೇ ಕೊಚ್ಚಿ ಹೋಗುತ್ತಿದೆ.

ಅನುಷ್ಠಾನ ಎಂದೋ?
ಹತ್ತಾರು ಬಾರಿ ಕಾಲುಸಂಕ ರಚನೆ ಸೇರಿದಂತೆ ವಿದ್ಯುತ್‌ ಸೌಲಭ್ಯಕ್ಕೆ ಮನವಿ ನೀಡಿದರೂ ಪ್ರಯೋಜನವಾಗಿಲ್ಲ.ಬಳಿಕ ಸ್ಥಳೀಯರೆ ಹಣ ಸಂಗ್ರಹಿಸಿ ಮರದ ತುಂಡುಗಳಿಂದ ಕಾಲುಸಂಕ ರಚಿಸಿಕೊಂಡಿದ್ದಾರೆ. ತುಂಬಿ ಹರಿಯುವ ನದಿಯ ಮೇಲ್ಗಡೆ ತಂತಿ ಹಿಡಿದು ಸಾಗುವಾಗ ಜೀವ ಕೈಗೆ ಬಂದ ಅನುಭವವಾಗುತ್ತದೆ. ಈ ಬಗ್ಗೆ ಕಳೆದ ವರ್ಷ ಪ್ರಕಟಿಸಿದ ವರದಿಗೆ ಸ್ಪಂದಿಸಿದ ಸಂಸದರು ಕ್ಷೇತ್ರದಲ್ಲಿ ಅತ್ಯಗತ್ಯವಿರುವ ಕಡೆಗಳಲ್ಲಿ ಕಾಲುಸಂಕ ಶೀಘ್ರ ನಿರ್ಮಿಸುವ ಬಗ್ಗೆ ಸಂಬಂಧಿಸಿದ ಇಲಾಖೆಯಿಂದ ವರದಿ ತರಿಸಿಕೊಂಡಿದ್ದಾರೆ. ಆದರೆ ಇದುವರಗೆ ಅನುಷ್ಠಾನವಾಗಿಲ್ಲ. ಕೃಷಿಯೆನ್ನೇ ನಂಬಿಕೊಂಡಿರುವ ಇಲ್ಲಿನ ಸ್ಥಳೀಯರಿಗೆ ಸೋಲಾರ್‌ ದೀಪ ಹೊರತುಪಡಿಸಿದರೆ ಚಿಮಣಿ ದೀಪವೇ ಗತಿಯಾಗಿದೆ.

ಕನಿಷ್ಠ ಪಕ್ಷ ಇಂತಹ ಹಳ್ಳಿಗಳ ಜನರ ನೋವಿಗೆ ಸ್ಪಂದಿಸುವ ಔದಾರ್ಯ ತೋರುವ ಮೂಲಕ ಗ್ರಾಮೀಣ ಭಾಗದ ಜನರ ಸಮಸ್ಯೆಗೆ ಸ್ಪಂದಿಸಬೇಕೆನ್ನುವುದು  ಸ್ಥಳೀಯರ ಅಭಿಪ್ರಾಯವಾಗಿದೆ.

ಕಠಿನ ಪರಿಸ್ಥಿತಿ
ಒಂದೆರೆಡು ಬಾರಿ ಇಲಾಖಾ ಅಧಿಕಾರಿಗಳು ಕಾಲುಸಂಕ ನಿರ್ಮಾಣ ಮಾಹಿತಿ ಪಡೆಯಲು ಆಗಮಿಸಿದ್ದು ನದಿ ದಾಟಲಾಗದೆ ವಾಪಸು ತೆರಳಿದ್ದಾರೆ.ಅನಾರೋಗ್ಯ,ಆಕಸ್ಮಿಕ ಅವಘಡ ಸಂಭವಿಸಿದಾಗ ಇಲ್ಲಿನ ಜನರ ಪರಿಸ್ಥಿತಿ ಹೇಳತೀರದಾಗಿದೆ. ಬೈಂದೂರು ಕ್ಷೇತ್ರದ ಬಹುತೇಕ ಗ್ರಾಮೀಣ ಭಾಗದಲ್ಲಿ ಸೇತುವೆ ನಿರ್ಮಾಣವಾಗಿದೆ. ಕೆಲವೇ ಕೆಲವು ಭಾಗಗಳಲ್ಲಿ ತುರ್ತು ವ್ಯವಸ್ಥೆ ಕಲ್ಪಿಸಬೇಕಾಗಿದೆ. 

– ಅರುಣ ಕುಮಾರ್‌ ಶಿರೂರು

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.