ದಾನದಿಂದ ಸುಖ ಪ್ರಾಪ್ತಿ: ಸತೀಶ್ ಕಿಣಿ ಬೆಳ್ವೆ
Team Udayavani, Sep 12, 2017, 7:55 AM IST
ಸಿದ್ದಾಪುರ: ಸಮಾಜದಿಂದ ಸಾಕಷ್ಟು ಪಡೆದಿದ್ದೇವೆ. ಸಮಾಜದಿಂದ ಪಡೆದುದರಲ್ಲಿ ಸ್ವಲ್ಪವಾದರೂ ಸಮಾಜಕ್ಕೆ ಕೊಡಬೇಕು. ಕೊಡುವುದರಲ್ಲಿ ಇರುವ ಸುಖ ಪಡೆಯುವುದರಲ್ಲಿ ಇಲ್ಲ ಎಂದು ಎಂದು ಬೆಳ್ವೆ ಸಂದೇಶ್ ಕಿಣಿ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್ ಅಧ್ಯಕ್ಷ ಬಿ. ಸತೀಶ್ ಕಿಣಿ ಬೆಳ್ವೆ ಅವರು ಹೇಳಿದರು.
ಅವರು ಬೆಳ್ವೆ ಸಂದೇಶ್ ಕಿಣಿ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್, ಲಯನ್ಸ್ ಕ್ಲಬ್ ಸಂತೆಕಟ್ಟೆ, ಕಸ್ತೂರ್ಬಾ ಹಾಸ್ಪಿಟಲ್ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಫೌಂಡೇಶನ್ ಸಭಾಂಗಣದಲ್ಲಿ ನಡೆದ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಂತೆಕಟ್ಟೆ ಲಯನ್ಸ್ ಕ್ಲಬ್ನ ಅಧ್ಯಕ್ಷ ಜೀಸನ್ ಡಯಾಸ್ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಸಂಘ- ಸಂಸ್ಥೆಗಳು ಹಮ್ಮಿಕೊಳ್ಳು ವ ವೈದ್ಯಕೀಯ ಚಿಕಿತ್ಸೆಯ ಉಚಿತ ಸೇವೆಗಳು ಗ್ರಾಮೀಣ ಭಾಗದ ಜನತೆಗೆ ಪ್ರಯೋಜನವಾಗಲಿದೆ. ಸಂಸ್ಥೆಗಳ ಉತ್ತಮ ಸೇವೆಯು, ಗೌರವವನ್ನು ಹೆಚ್ಚಿಸುವುದರೊಂದಿಗೆ ಸಮಾಜದ ಅಭಿವೃದ್ಧಿಗೆ ಸಹಕಾರಿಯಾಗಲಿವೆ ಎಂದರು.
ಬೆಳ್ವೆ ಸಂದೇಶ್ ಕಿಣಿ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್ ಟ್ರಸ್ಟಿ ಬಿ. ಉಮೇಶ್ ಕಿಣಿ ಬೆಳ್ವೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.
ಮುಖ್ಯ ಅತಿಥಿಗಳಾಗಿ ಮಣಿಪಾಲ ಕಸ್ತೂರ್ಬಾ ಹಾಸ್ಪಿಟಲ್ ಕಣ್ಣಿನ ತಜ್ಞ ಡಾ| ಕಿರಣ್, ಸಮುದಾಯ ಆರೋಗ್ಯ ವಿಭಾಗದ ಡಾ| ಅರ್ಪಣಾ, ಮಧುಮೇಹ ವಿಭಾಗದ ಡಾ| ಶುಭಾ ಜಿ. ಮಯ್ಯ, ಡಾ| ಅನ್ನಾ, ಸಂತೆಕಟ್ಟೆ ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷ ಅಶೋಕ ಕುಮಾರ್ ಶೆಟ್ಟಿ, ಸುದರ್ಶನ ನಾಯಕ್, ಬೆಳ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕ ಹರಿಶ್ಚಂದ್ರ ಆಚಾರ್ಯ, ಆವರ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದ ಉಮೇಶ್ ಶೆಟ್ಟಿ, ಶಿಬಿರದ ಸಂಯೋಜಕ ನೀತಿನ್, ನಿರ್ದೇಶಕರಾದ ಬಿ. ಗೋಪಾಲಕೃಷ್ಣ ಕಿಣಿ, ಬಿ. ಹರೀಶ ಕಿಣಿ, ಬಿ. ಗೋಕುಲ್ ಕಿಣಿ ಮತ್ತಿತತರು ಉಪಸ್ಥಿತರಿದ್ದರು.
ಶಿಬಿರದಲ್ಲಿ ಮಣಿಪಾಲ ಕಸ್ತೂರ್ಬಾ ಹಾಸ್ಪಿಟಲ್ನ ನುರಿತ ವೈದ್ಯರಿಂದ ಕಣ್ಣಿನ ತಪಾಸಣೆ, ಮಧುಮೇಹ, ಆಹಾರ ಮತ್ತು ಪತ್ಯೆ, ಮಹಿಳೆಯರಿಗೆ ಆರೋಗ್ಯ ತಪಾಸಣೆ ಮತ್ತು ವೈದ್ಯಕೀಯ ಸಲಹೆಗಳನ್ನು ನೀಡಲಾಯಿತು. ಸುಮಾರು 400ಕ್ಕೂ ಹೆಚ್ಚು ಜನರು ಶಿಬಿರದಿಂದ ಪ್ರಯೋಜನ ಪಡೆದರು. ಕಣ್ಣಿನ ತಪಾಸಣೆಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಚಿಕಿತ್ಸೆ ಪಡೆದರು. ಇದರಲ್ಲಿ 110 ಜನರಿಗೆ ಕನ್ನಡಕದ ಆವಶ್ಯಕತೆ ಇದ್ದು, ಫೌಂಡೇಶನ್ ಉಚಿತವಾಗಿ ಕನ್ನಡಕವನ್ನು ನೀಡುವ ಭರವಸೆ ನೀಡಿದರು.
ಬಿ. ಗೋಕುಲ್ ಕಿಣಿ ಸ್ವಾಗತಿಸಿ, ಮಂಜುನಾಥ ಹಿಲಿಯಾಣ ಕಾರ್ಯಕ್ರಮ ನಿರೂಪಿಸಿದರು. ಬಿ. ಹರೀಶ ಕಿಣಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ