ಬೆಂಗಳೂರು – ಕಾರವಾರ ರೈಲಿನ ವೇಳೆೆ ಬದಲಿಗೆ ಆಗ್ರಹ


Team Udayavani, Oct 23, 2017, 7:53 AM IST

23-5.jpg

ಕುಂದಾಪುರ: ಬೆಂಗಳೂರು-ಕಾರವಾರ ರೈಲು ಫೆಬ್ರವರಿಯ ಅನಂತರ ಕುಣಿಗಲ್‌ ಮಾರ್ಗವಾಗಿ ಸಂಚರಿಸುವ ಬಗ್ಗೆ ನೈಋತ್ಯ ರೈಲ್ವೇ ಮಂಡಳಿ ಒಪ್ಪಿಗೆ ನೀಡಿದ್ದು, ವಾರದಲ್ಲಿ ನಾಲ್ಕು ದಿನ ಬೆಂಗಳೂರು- ಕುಣಿಗಲ್‌- ಶ್ರವಣಬೆಳಗೊಳ- ಹಾಸನ ಮಾರ್ಗವಾಗಿ ಹಾಗೂ ಉಳಿದ ಮೂರು ದಿನ ಮೈಸೂರು ಹಾಸನ ಮಾರ್ಗವಾಗಿ ಮಂಗಳೂರು ತಲುಪಲಿದೆ. ಆದರೆ ಕುಣಿಗಲ್‌ ಮೂಲಕ ಸಂಚರಿಸುವ ವೇಳಾಪಟ್ಟಿಯಲ್ಲಿ ಬದಲಿಸುವಂತೆ ರೈಲು ಪ್ರಯಾಣಿಕರು ಆಗ್ರಹಿಸಿದ್ದಾರೆ.

ಮಂಗಳೂರಿನ ರೈಲು ನಿಲ್ದಾಣದಲ್ಲಿ ಬೆಳಗ್ಗಿನ ಹೊತ್ತಿನಲ್ಲಿ ಬಹಳಷ್ಟು ರೈಲುಗಳು ಬಂದು ಹೋಗುವುದರಿಂದ ಪ್ಲಾಟ್‌ ಫಾರ್ಮ್ನಲ್ಲಿ ಕೊರತೆಯ ಕಾರಣದಿಂದಾಗಿ ವಾರದ ನಾಲ್ಕು ದಿನ ಬೆಂಗಳೂರಿನಿಂದ ರಾತ್ರಿ 8.30ಕ್ಕೆ ಬದಲಾಗಿ ರೈಲು 10.30ಕ್ಕೆ ಹೊರಡುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಇದರಿಂದ ಕರಾವಳಿಯ ಪ್ರಯಾಣಿಕರಿಗೆ ಅನ್ಯಾಯವಾಗಲಿದೆ. ಪ್ರಸ್ತುತ ರೈಲು ಕುಂದಾಪುರಕ್ಕೆ ಬೆಳಗ್ಗೆ 10.56ಕ್ಕೆ ತಲುಪುತ್ತಿದ್ದು, ಬೆಂಗಳೂರಿನಿಂದ ಹೊರಡುವ ಸಮಯವನ್ನು 7.30ಕ್ಕೆ ನಿಗದಿಪಡಿಸಬೇಕು ಎಂದು ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ಬೇಡಿಕೆ ಇಟ್ಟಿದೆ.

ಕುಣಿಗಲ್‌ ಮೂಲಕ ರೈಲು ಸಂಚರಿಸುವುದರಿಂದ  ಸುಮಾರು 90 ಕಿ.ಮೀ. ಉಳಿತಾಯವಾಗಲಿದ್ದು, ರಾತ್ರಿ 8.30ಕ್ಕೆ ಬೆಂಗಳೂರಿನಿಂದ ಹೊರಟ ರೈಲು ಮಂಗಳೂರಿಗೆ ಬೆಳಗ್ಗೆ ಸುಮಾರು 6 ಗಂಟೆಗೆ ತಲುಪುವುದರಿಂದ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ. ಆದರೆ ಈಗಾಗಲೇ ನಿರ್ಧರಿಸಿದಂತೆ ರಾತ್ರಿ 10.30ಕ್ಕೆ ಬೆಂಗಳೂರಿನಿಂದ ರೈಲು ಹೊರಟರೆ ಉಡುಪಿ, ಕುಂದಾಪುರಕ್ಕೆ ತಲುಪುವಾಗ ಸಾಕಷ್ಟು ವಿಳಂಬವಾಗುವ ಸಾಧ್ಯತೆ ಇರುವುದರಿಂದ ಪ್ರಯಾಣಿಕರಿಗೆ ಊಟಕ್ಕಿಲ್ಲದ ಉಪ್ಪಿನ ಕಾಯಿಯಂತಾಗಲಿದೆ ಎನ್ನುವುದು ಪ್ರಯಾಣಿಕರ ಅಭಿಪ್ರಾಯ.

ಬೆಂಗಳೂರಿನಿಂದ ರೈಲು ಹೊರಡುವ ಸಮಯವನ್ನು ಬದಲಾಯಿಸುವಂತೆ ಮಾಡಲಾದ ಬೇಡಿಕೆಗೆ ನೈಋತ್ಯ ರೈಲ್ವೇ ಮುಖ್ಯ ನಿರ್ವಹಣಾಧಿಕಾರಿ ಎಚ್‌.ಎಂ. ದಿನೇಶ್‌ ಅವರು ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಇದಕ್ಕೆ ಮೂರು ರೈಲು ವಲಯಗಳ ಹೊಂದಾಣಿಕೆ ಬೇಕಾಗಿರುವುದರಿಂದ ಮೂರು ವಲಯಗಳ ಹಿರಿಯ ಅಧಿಕಾರಿಗಳ ಜಂಟಿಯಾಗಿ ತೀರ್ಮಾನ ತೆಗೆದುಕೊಳ್ಳಬೇಕಾಗಿದೆ. ಮಂಗಳೂರು ರೈಲು ನಿಲ್ದಾಣವನ್ನು 4.30.-5 ಗಂಟೆಗೆ ತಲುಪುವಂತೆ ಬೆಂಗಳೂರಿನಿಂದ ಬೇಗ ರೈಲು ಹೊರಟಲ್ಲಿ ಕುಂದಾಪುರ, ಉಡುಪಿ ಭಾಗಗಳಿಗೆ ತೆರಳುವವರಿಗೆ ಬಹಳಷ್ಟು ಅನುಕೂಲವಾಗಲಿದೆ. ಇದರಿಂದಾಗಿ ಕರಾವಳಿ ಭಾಗದ ಜನರಿಗೆ ಹೆಚ್ಚು ಅನುಕೂಲವಾಗಲಿದೆ.
ಕೆ. ಜಯಪ್ರಕಾಶ್‌ ಹೆಗ್ಡೆ, ಮಾಜಿ ಸಂಸದ

ಟಾಪ್ ನ್ಯೂಸ್

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Heavy Rain ಸಿದ್ದಾಪುರ: ಮನೆಗೆ ಮರ ಬಿದ್ದು ಮೂವರಿಗೆ ಗಾಯ

Heavy Rain ಸಿದ್ದಾಪುರ: ಮನೆಗೆ ಮರ ಬಿದ್ದು ಮೂವರಿಗೆ ಗಾಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.