ಜ. 19ರಂದು ಮೂಡಬಿದಿರೆಯಲ್ಲಿ ಬಿಜೆಪಿ ಪ್ರತಿಭಟನೆ
Team Udayavani, Jan 17, 2017, 3:45 AM IST
ಮಂಗಳೂರು: ಬಿಜೆಪಿ ಮುಖಂಡ ವಲೇರಿಯನ್ ಕುಟಿನ್ಹೋ ಅವರ ಮೇಲೆ ಮೂಡಬಿದಿರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿರುವುದು ಹಾಗೂ ಬಿಜೆಪಿ ನಾಯಕರ ವಿರುದ್ಧ ಸುಳ್ಳು ಕೇಸು ದಾಖಲಿಸಿರುವುದನ್ನು ಖಂಡಿಸಿ ಜ. 19ರಂದು ಬೆಳಗ್ಗೆ 10.30ಕ್ಕೆ ಮೂಡಬಿದಿರೆ ಸ್ವರಾಜ್ಯ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಜಿಲ್ಲೆಯ ಪ್ರಮುಖ ನಾಯಕರು ಇದರಲ್ಲಿ ಭಾಗವಹಿಸುವರು ಎಂದರು. ಎಪಿಎಂಸಿ ಚುನಾವಣೆಯಲ್ಲಿ ಕಲ್ಲ ಮುಂಡ್ಕೂರು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಜಿತರಾಗಿದ್ದ, ಹಿರಿಯ ನಾಗರಿಕ ವಲೇರಿಯನ್ ಕುಟಿನ್ಹೋ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವದ ವೇಳೆ ತೀವ್ರ ಹಲ್ಲೆ ನಡೆಸಿದ್ದರು. ಪೊಲೀಸರು ಕಾಂಗ್ರೆಸ್ ನಾಯಕರು ಹಾಗೂ ಮೂಡಬಿದಿರೆ ಶಾಸಕರ ಒತ್ತಡಕ್ಕೆ ಮಣಿದು ಆರೋಪಿಗಳನ್ನು ಬಂಧಿಸಿಲ್ಲ. ಇದರ ಬದಲಿಗೆ ಅಂದುಸ್ಥಳದಲ್ಲಿ ಇರದ ಬಿಜೆಪಿಯ ಪ್ರಮುಖ ನಾಯಕರ ವಿರುದ್ಧ ಸುಳ್ಳು ಕೇಸು ದಾಖಲಿಸಿದ್ದಾರೆ ಎಂದರು.
ಪಕ್ಷದ ನಾಯಕರಾದ ರವಿಶಂಕರ ಮಿಜಾರು, ಕ್ಯಾ| ಬೃಜೇಶ್ ಚೌಟ, ಜಿತೇಂದ್ರ ಕೊಟ್ಟಾರಿ, ಜೊಯ್ಲಸ್ ಡಿ’ಸೋಜಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್