ಮರೋಳಿ ನಿಡ್ಡೇಲ್‌: ಹಿಂ.ಜಾ.ವೇ.ಕಾರ್ಯಕರ್ತನ ಕೊಲೆ


Team Udayavani, Feb 20, 2017, 3:45 AM IST

1902mlr32–prathap.jpg

ಮಂಗಳೂರು:  ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಮರೋಳಿಯ ಪ್ರತಾಪ್‌ ಪೂಜಾರಿ (26) ಅವರನ್ನು  ನಗರದ ಮರೋಳಿ ನಿಡ್ಡೇಲ್‌ನಲ್ಲಿ  ಶನಿವಾರ ತಡ ರಾತ್ರಿ ಅದೇ ಸಂಘಟನೆಗೆ ಸೇರಿದ ಯುವಕರ ಗುಂಪು ಮಾರಕಾಸ್ತ್ರಗಳಿಂದ ಅಟ್ಟಾಡಿಸಿ ಕೊಚ್ಚಿ ಕೊಲೆ ಮಾಡಿದ್ದು,  ಆತನ ಸ್ನೇಹಿತ ಮಣಿಕಂಠ (28) ಅವರನ್ನು ಗಂಭೀರ ಗಾಯಗೊಳಿಸಿ ಪರಾರಿಯಾಗಿದೆ. 
 
ಗಾಯಾಳು ಮಣಿಕಂಠ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಲೆಯಾದ ಪ್ರತಾಪ್‌ ಮತ್ತು ಕೊಲೆ ಮಾಡಿದವರೆಲ್ಲರೂ ಸ್ನೇಹಿತರಾಗಿದ್ದು, ಹಿಂದೂ ಜಾಗರಣ ವೇದಿಕೆಯ ಸಕ್ರಿಯ ಕಾರ್ಯಕರ್ತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ವಿವರ
ಮಣಿಕಂಠ ಗಾರೆ ಕೆಲಸ ಮಾಡುತ್ತಿದ್ದು, ಶನಿವಾರ ಬೆಳಗ್ಗೆ ನಿಡ್ಡೇಲ್‌ನಲ್ಲಿರುವ ತನ್ನ ಬಾಡಿಗೆ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ. ಆಗ ಅಲ್ಲಿಗೆ ಬಂದಿದ್ದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರೆನ್ನಲಾದ ವಿನೇಶ್‌, ನೀಶೂ ಹಾಗೂ ಇತರ ನಾಲ್ಕು ಮಂದಿಯ ಗುಂಪು ಮನೆಗೆ ನುಗ್ಗಿ ಜಗಳಕ್ಕಿಳಿದಿದೆ. ಈ ವೇಳೆ ಮನೆಯಲ್ಲಿದ್ದ ಇತರರು ಅವರನ್ನು ಅಲ್ಲಿಂದ ಓಡಿಸಿದ್ದಾರೆ. ಇದೇ ತಂಡ ಸಂಜೆ ವೇಳೆ ಅದೇ ಪರಿಸರದ ಹಿಂಜಾವೇ ಕಾರ್ಯಕರ್ತ ಅಚ್ಚು ಎಂಬವನ ಹುಟ್ಟುಹಬ್ಬದ ಪಾರ್ಟಿಯಲ್ಲಿ ಪಾಲ್ಗೊಂಡಿತ್ತು. ಅಲ್ಲಿಗೆ ಪ್ರತಾಪ್‌ ಹಾಗೂ ಮಣಿಕಂಠ ತೆರಳಿದ್ದನ್ನು ಕಂಡ ಅಚ್ಚು, ವಿನೇಶ್‌, ನೀಶೂ ಸೇರಿದಂತೆ ಸುಮಾರು 10 ಮಂದಿಯಿದ್ದ ತಂಡ ಅವರನ್ನು ಅಟ್ಟಾಡಿಸಿಕೊಂಡು ಹೋಗಿದೆ.
  
ತಡರಾತ್ರಿ 2 ಗಂಟೆಯ ಸುಮಾರಿಗೆ ಮರೋಳಿ ನಿಡ್ಡೇಲಬಳಿ ಕಾದು ಕುಳಿತಿದ್ದ ತಂಡ ಪ್ರತಾಪ್‌ ಹಾಗೂ ಮಣಿಕಂಠನ ಮೇಲೆ ತಲವಾರು, ಮಚ್ಚಿನಿಂದ ದಾಳಿ ನಡೆಸಿದೆ. ತಲೆ ಹಾಗೂ ಎಡ ತೊಡೆಗೆ ಗಂಭೀರ ಸ್ವರೂಪದ ಗಾಯಗೊಂಡ ಪ್ರತಾಪ್‌ ವಿಪರೀತ ರಕ್ತಸ್ರಾವಕ್ಕೊಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಂಡ ಮಣಿಕಂಠನ ಮೇಲೂ ದಾಳಿ ನಡೆಸಿದೆ. ತಲೆ, ಕೈಗೆ ಗಂಭೀರ ಗಾಯಗೊಂಡಿದ್ದ ಮಣಿಕಂಠ ಓಡಿ ತಪ್ಪಿಸಿಕೊಂಡು ಮನೆಯೊಂದರ ಹಿಂಭಾಗ ಅವಿತು ಪ್ರಾಣ ಉಳಿಸಿಕೊಂಡಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಸ್ಥಳೀಯರು ಕಂಕನಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕೊಲೆಯಾದ ಪ್ರತಾಪ್‌ ಮೈಸೂರಿನ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದು, ಕೆಲವು ದಿನಗಳ ಹಿಂದೆಯಷ್ಟೇ ರಜೆ ಪಡೆದು ಊರಿಗೆ ಬಂದಿದ್ದ. ಮಣಿಕಂಠ ಗಾರೆ ಕೆಲಸ ಮಾಡುತ್ತಿದ್ದು, ಇಬ್ಬರೂ ಸ್ನೇಹಿತರಾಗಿದ್ದರು. 

ಕೊಲೆಗೆ ಕಾರಣವೇನು?
ಮೂರು ವರ್ಷಗಳ ಹಿಂದೆ ಕಟೀಲಿನಲ್ಲಿ ಯಕ್ಷಗಾನ ಬಯಲಾಟ ನಡೆಯುತ್ತಿದ್ದ ಸಂದರ್ಭ ಅಲ್ಲಿಗೆ ತೆರಳಿದ್ದ ವಿನೇಶ್‌ ಮತ್ತು ಇತರರು ಯಕ್ಷಗಾನ ಕಲಾವಿದರೊಬ್ಬರ ಬ್ಯಾಗ್‌ನಿಂದ ಹಣ ಎಗರಿಸಿದ್ದರು. ಈ ಬಗ್ಗೆ ಮಣಿಕಂಠ ಪೊಲೀಸರಿಗೆ ದೂರು ನೀಡಿದ್ದ. ಇದರಿಂದ ಮಣಿಕಂಠ ಅವರ ಮೇಲೆ ದ್ವೇಷ ಬೆಳೆಸಿಕೊಂಡಿದ್ದ ಸಂಘಟನೆಯ ಇನ್ನೊಂದು ಗುಂಪು ಆತನನ್ನು ಕೊಲೆಗೈಯಲು ಸಂಚು ರೂಪಿಸಿತ್ತು ಎನ್ನಲಾಗಿದೆ. ಮಣಿಕಂಠನ ಮೇಲೆ ದಾಳಿ ನಡೆಸುವಾಗ ಪ್ರತಾಪ್‌ ತಡೆಯಲು ಬಂದಿದ್ದು ಆಗ  ತನ್ನ ಸಂಘಟನೆಯ ಕಾರ್ಯಕರ್ತರಿಂದಲೇ ಹತ್ಯೆಗೀಡಾಗಿದ್ದಾರೆ. ಒಂದೊಮ್ಮೆ ಎಲ್ಲರೂ ಸ್ನೇಹಿತರಾಗಿದ್ದರು. ಹುಟ್ಟು ಹಬ್ಬದ ಪಾರ್ಟಿಗೆ ಹೋಗಿದ್ದ ಅವರು ಮದ್ಯಪಾನ ಮಾಡಿದ್ದರು. ಇದೇ ನಶೆಯಲ್ಲಿ ಘಟನೆ ಸಂಭಧಿವಿಸಿದೆ. ಕೊಲೆಯಾದ ಪ್ರತಾಪ್‌ ವಿರುದ್ಧ ಬರ್ಕೆ,ಕಾವೂರು,ಮಂಗಳೂರು ಉತ್ತರ ಪೊಲೀಸ್‌ ಠಾಣೆಗಳಲ್ಲಿ ಹಲ್ಲೆ ಪ್ರಕರಣ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಂಕನಾಡಿ ನಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ನಡೆಸಿದ್ದಾರೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.