ತೊಕ್ಕೊಟ್ಟು: “ನಮ್ಮ ನಡಿಗೆ ಶಿವ ಕ್ಷೇತ್ರದೆಡೆಗೆ’
Team Udayavani, Feb 25, 2017, 4:12 PM IST
ತೊಕ್ಕೊಟ್ಟು: ಮುದ್ದುಕೃಷ್ಣ ತೊಕ್ಕೊಟ್ಟು ಸಾರಥ್ಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಕ್ಲಿಕ್ ಮ್ಯಾರೇಜ್ ಹಾಲ್ನಿಂದ ಪ್ರಾರಂಭಗೊಂಡು ಶ್ರೀ ಕ್ಷೇತ್ರ ಸೋಮೇಶ್ವರದ ವರೆಗೆ “ನಮ್ಮ ನಡಿಗೆ ಶಿವ ಕ್ಷೇತ್ರದೆಡೆಗೆ’ ಪಾದಯಾತ್ರೆ ಕಾರ್ಯಕ್ರಮಕ್ಕೆ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಪ್ರಾಂತ ಸಂಚಾಲಕ ರವೀಶ್ ಕುಮಾರ್ ಚಾಲನೆ ನೀಡಿದರು.
ಶ್ರೀ ಚೀರುಂಭ ಭಗವತೀ ಕ್ಷೇತ್ರದ ಅಧ್ಯಕ್ಷ ಚಂದ್ರಹಾಸ ಉಳ್ಳಾಲ್, ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ಅಧ್ಯಕ್ಷ ಸತೀಶ್ ಕುಂಪಲ, ಸೋಮೇಶ್ವರ ಶ್ರೀ ಸೋಮ ನಾಥ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವಿಶ್ವನಾಥ ಗಟ್ಟಿ ವಗ್ಗ, ಟ್ರಸ್ಟಿಗಳಾದ ರಾಘವ ಉಚ್ಚಿಲ್, ಸೋಮಯ್ಯ, ರಮೇಶ ಕೊಲ್ಯ, ದಿನೇಶ್ ಕುಂಪಲ, ಆನಂದ ಶೆಟ್ಟಿ, ಚಂದ್ರಕಾಂತ್ ಸುಧಾಕರ ಭಂಡಾರಿ ಉಪಸ್ಥಿತರಿದ್ದರು.
ಪಾದಯಾತ್ರೆಯು ತೊಕ್ಕೊಟ್ಟು ವಿದ್ಯಾ ಗಣಪತಿ ರಾಮ ಮಂದಿರದಲ್ಲಿ ಪ್ರಾರ್ಥನೆಯ ಬಳಿಕ ಓವರ್ ಬ್ರಿಡ್ಜ್ ಮಾರ್ಗವಾಗಿ ಶ್ರೀ ಉಮಾಮಹೇಶ್ವರೀ ದೇವಸ್ಥಾನ ಕಾಪಿಕಾಡ್, ಬಳಿಕ ಶ್ರೀ ಕೊರಗಜ್ಜ ಸೇವಾ ಸಮಿತಿ ಕೋಟೆಕಾರು, ಶ್ರೀ ಸಿದ್ಧಿವಿನಾಯಕ ಮಂದಿರ ಬೀರಿ, ಶ್ರೀ ಅಯ್ಯಪ್ಪ ಮಂದಿರ ಕೋಟೆಕಾರು ಅನಂತರ ಶ್ರೀ ಸೋಮನಾಥ ದೇವಸ್ಥಾನದಲ್ಲಿ ಸಮಾಪನಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ