ರಂಗಸ್ಥಳದಲ್ಲೇ ಇಹಲೋಕ ತ್ಯಜಿಸಿದ ಗೇರುಕಟ್ಟೆ ಗಂಗಯ್ಯ ಶೆಟ್ಟಿ


Team Udayavani, Mar 23, 2017, 10:06 AM IST

9.jpg

ಮಂಗಳೂರು:  ಕಟೀಲು ಮೇಳದ ಮೇರು ಕಲಾವಿದ ಗೇರುಕಟ್ಟೆ ಗಂಗಯ್ಯ ಶೆಟ್ಟಿ (63) ಅವರು ಪಾತ್ರ ನಿರ್ವಹಿಸುತ್ತಿರುವ ವೇಳೆಯಲ್ಲೇ  ವೇದಿಕೆಯಲ್ಲೇ ಕುಸಿದು ಇಹಲೋಕ ತ್ಯಜಿಸಿದ್ದಾರೆ. 

ಬುಧವಾರ ರಾತ್ರಿ ಎಕ್ಕಾರಿನ ದುರ್ಗಾನಗರದಲ್ಲಿ ನಡೆದ ಯಕ್ಷಗಾನ ಪ್ರದರ್ಶನ ಕಟೀಲು ಕ್ಷೇತ್ರ ಮಹಾತ್ಮೆ ಪ್ರಸಂಗದಲ್ಲಿ  ಅರುಣಾಸುರ ಪಾತ್ರವನ್ನು ನಿರ್ವಹಿಸಿ ದುಂಬಿಯನ್ನು ಕೊಲ್ಲಲು ಬಂಡೆಯನ್ನು ಒಡೆಯುವ ದೃಶ್ಯದಲ್ಲಿ ಮನೋಜ್ಞ ಅಭಿನಯ ನೀಡುತ್ತಿದ್ದ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದರು.  ಕೂಡಲೇ ಅವರನ್ನು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು. 

ಕಟೀಲು ಮೇಳವೊಂದರಲ್ಲೇ ಸುದೀರ್ಘ‌ 47 ವರ್ಷಗಳ ಕಾಲ ಸೇವೆ ಸಲ್ಲಿಸಿದ ಅವರಿಗೆ  ದೇವಿಮಹಾತ್ಮೆಯಲ್ಲಿನ ಮಹಿಷಾಸುರ ಪಾತ್ರ ಅಪಾರ ಖ್ಯಾತಿ ತಂದು ಕೊಟ್ಟಿತ್ತು. ದುರೃಷ್ಟವಷಾತ್‌ 15 ವರ್ಷಗಳ ಹಿಂದೆ ಹೃದಯಾಘಾತಕ್ಕೊಳಗಾದ ಬಳಿಕ ಅವರು ವೈದ್ಯರ ಸಲಹೆಯಂತೆ ಮಹಿಷಾಸುರನ ಪಾತ್ರವನ್ನು ನಿರ್ವಹಿಸುತ್ತಿರಲಿಲ್ಲ. 

ಬೆಳ್ತಂಗಡಿಯ ಗೆರುಕಟ್ಟೆಯಲ್ಲಿ ಅಮ್ಮು ಶೆಟ್ಟಿ  ಮತ್ತು ಕಮಲಾ ಶೆಟ್ಟಿ ದಂಪತಿಗಳ ಮಗನಾಗಿ ಜನಿಸಿದ ಗಂಗಯ್ಯ ಶೆಟ್ಟಿ ಅವರು 16 ನೇ ವಯಸ್ಸಿನಲ್ಲಿ ಯಕ್ಷಗಾನ ರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಧರ್ಮಸ್ಥಳ ಯಕ್ಷಗಾನ ಕೇಂದ್ರ ದಲ್ಲಿ ನಾಟ್ಯಾಭ್ಯಾಸ ಮಾಡಿದ ಅವರು ಹಂತ ಹಂತವಾಗಿ ವಿವಿಧ ಪಾತ್ರಗಳನ್ನು ನಿರ್ವಹಿಸಿ ಕಲಾ ರಸಿಕರ ಮನ ಗೆದ್ದಿದ್ದರು. 

ಬಣ್ಣದ ವೇಷಗಳಿಗೆ ವಿಶೇಷ ಜೀವ ತುಂಬುತ್ತಿದ್ದ ಗಂಗಯ್ಯ ಶೆಟ್ಟಿ ಅವರಿಗೆ ದುಷ್ಯಾಸನ ವಧೆಯ ರುದ್ರ ಭೀಮನ ಪಾತ್ರ ಅಪಾರ ಖ್ಯಾತಿ ತಂದುಕೊಟ್ಟಿತ್ತು. ರಕ್ತ ಬೀಜಾಸುರ ,ರಾವಣ, ಮಹಿರಾವಣ, ಕೌಂಡ್ಲಿಕ, ವಾಲಿ ಮುಂತಾದ ಪಾತ್ರಗಳು ಅಪಾರ ಖ್ಯಾತಿಯನ್ನು ತಂದುಕೊಟ್ಟಿದ್ದವು. 

ಗೇರುಕಟ್ಟೆಯವರ ಆಕಾಲಿಕ ನಿಧನ ತೆಂಕು ತಿಟ್ಟಿಗೆ ದೊಡ್ಡ ನಷ್ಟವೆನ್ನಬಹುದು. ಅಪಾರ ಯಕ್ಷಗಾನ ಅಭಿಮಾನಿಗಳು ಸೇರಿದಂತೆ ಗಣ್ಯರು  ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. 

ಗೇರು ಕಟ್ಟೆ ಶೆಟ್ಟರು ಪತ್ನಿ , ಮೂವರು ಪುತ್ರರು ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. 

ಈ ಹಿಂದೆ ಇದೇ ರೀತಿಯಲ್ಲಿ ಮೇರು ಶಿರಿಯಾರ ಮಂಜು ನಾಯ್ಕ, ಕೆರೆಮನೆ ಶಂಭುಹೆಗಡೆ , ದಾಮೋದರ ಮಂಡೆಚ್ಚ, ಚಿಪ್ಪಾರು ಕೃಷ್ಣಯ್ಯ ಬಳ್ಳಾಲ್‌, ಅರುವ ನಾರಾಯಣ ಶೆಟ್ಟಿ, ಅಶೋಕ ಕೊಲೆಕಾಡಿ ಅವರಂತಹ ದಿಗ್ಗಜ ಕಲಾವಿದರು  ಪಾತ್ರ ನಿರ್ವಹಿಸುತ್ತಿದ್ದ ವೇಳೆ ರಂಗದಲ್ಲೇ ಇಹಲೋಕ ತ್ಯಜಿಸಿದ್ದರು. 

ವಿಡಿಯೋ : ಗಂಗಯ್ಯ ಶೆಟ್ಟರ ದುಷ್ಯಾಸನ ವಧೆಯ ರುದ್ರ ಭೀಮನ ಪಾತ್ರ. ಭಾಗವತರಾಗಿ ಕುರಿಯ ಗಣಪತಿ ಶಾಸ್ತ್ರಿಗಳು, ದೂತನಾಗಿ ಪ್ರಸಿದ್ಧ ಹಾಸ್ಯ ಕಲಾವಿದ ಅರುಣ್‌ ಕುಮಾರ್‌ ಜಾರ್ಕಳ. ವಿಡಿಯೋ ಕೃಪೆ: ಕೆಆರ್‌ಕೆ ಭಟ್‌ ಚಿತ್ರಮೂಲ

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.