ಸ್ನಾನಕ್ಕೆಂದು ಸಮುದ್ರಕ್ಕಿಳಿದ ಯುವಕ ಸಮುದ್ರಪಾಲು


Team Udayavani, Apr 24, 2017, 12:58 PM IST

haneef.jpg

ಉಳ್ಳಾಲ: ಉಪ್ಪು ನೀರಿನ ಸ್ನಾನಕ್ಕೆಂದು ಸಮುದ್ರಕ್ಕಿಳಿದ ಯುವಕ ಸಮುದ್ರಪಾಲಾದ ಘಟನೆ ಉಳ್ಳಾಲ ಸಮೀಪದ ಮುಕ್ಕಚ್ಚೇರಿ ಸೀಗ್ರೌಂಡ್‌ ಬಳಿ ರವಿವಾರ ಬೆಳಗ್ಗೆ ನಡೆದಿದ್ದು, ಮೃತ ಶರೀರವನ್ನು ತಣ್ಣೀರುಬಾವಿ ಮುಳುಗು ತ‌ಜ್ಞರ ತಂಡ ಸಂಜೆಯ ವೇಳೆಗೆ ಸಮುದ್ರದಿಂದ ಮೇಲೆತ್ತಿದೆ.

ಮಾಸ್ತಿಕಟ್ಟೆ ನಿವಾಸಿ ಮಹಮ್ಮದ್‌ ಹನೀಫ್‌ (31) ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಯುವಕ. ಬೇಸಗೆ ಧಗೆಯಿಂದ ಮೈಯಲ್ಲಿ ಹುಣ್ಣಾಗಿದ್ದು, ಸಮುದ್ರ ಸ್ನಾನದಿಂದ ಹುಣ್ಣು ಗುಣವಾಗುತ್ತದೆ ಎನ್ನುವ ನಿಟ್ಟಿನಲ್ಲಿ ಸ್ನೇಹಿತರೊಂದಿಗೆ ಮುಕ್ಕಚ್ಚೇರಿಯ ಸೀಗ್ರೌಂಡ್‌ ಬಳಿ ಸಮುದ್ರ ಸ್ನಾನಕ್ಕೆಂದು ಬಂದಿದ್ದರು. 

ಹನೀಫ್‌ ಸ್ನೇಹಿತರು ಸಮುದ್ರದಿಂದ ದೂರದಲ್ಲಿ ನಿಂತಿದ್ದರೆ ಹನೀಫ್‌ ಸಮುದ್ರ ಬಳಿಯ ಕಲ್ಲಿನ ದಂಡೆಯಲ್ಲಿ ನಿಂತಿದ್ದಾಗ ದೊಡ್ಡ ಅಲೆಯೊಂದಕ್ಕೆ ಸಿಲುಕಿ ಸಮುದ್ರ ಪಾಲಾಗಿದ್ದರು. ಹನೀಫ್‌ ಪತ್ತೆಯಾಗದೆ ಇದ್ದಾಗ ತಣ್ಣೀರುಬಾವಿಯ ಮುಳುಗು ತಜ್ಞರ ತಂಡವನ್ನು ಉಳ್ಳಾಲ ಪೊಲೀಸರು ಕರೆಸಿದ್ದು, ತಂಡದ ಜಾವೇದ್‌, ಝಾಕಿರ್‌ ಹುಸೇನ್‌, ಮಹಮ್ಮದ್‌ ವಾಸಿಂ, ಹಸನ್‌ ಪಿ.ಬಿ. ಸಾದಿಕ್‌ ಎರಡು ಗಂಟೆ ಸತತವಾಗಿ ಈಜಾಡಿ ಹನೀಫ್‌ ಮೃತದೇಹವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾದರು. ಬೆಳಗ್ಗಿನಿಂದಲೇ ಕೋಟೆಪುರ, ಮೊಗವೀರಪಟ್ಣ, ಮುಕ್ಕಚ್ಚೇರಿಯಿಂದ ಮೀನುಗಾರರು,  ಈಜುಗಾರರು ಆಗಮಿಸಿ ಶೋಧಕಾರ್ಯಕ್ಕೆ ಸಹಕರಿಸಿದ್ದರು.

ಸಚಿವ ಖಾದರ್‌ ಭೇಟಿ: ಸಚಿವ ಯು.ಟಿ. ಖಾದರ್‌ ಶೋಧಕಾರ್ಯ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿ ವೀಕ್ಷಿಸಿದರು. ಉಳ್ಳಾಲ ಇನ್ಸ್‌ಪೆಕ್ಟರ್‌ ಗೋಪಿಕೃಷ್ಣ, ಎಸ್‌ಐಗಳಾದ ರಾಜೇಂದ್ರ, ಪ್ರಕಾಶ್‌ ಆಗಮಿಸಿದ್ದರು. ಅಗ್ನಿಶಾಮಕದಳ ಶೋಧಕಾರ್ಯದಲ್ಲಿ ತೊಡಗಿಸಿಕೊಂಡಿñತ್ತು.

ಮನೆಯ ಆದಾರಸ್ತಂಭ: ವೃತ್ತಿಯಲ್ಲಿ ಪೈಂಟರಾಗಿದ್ದ ಹನೀಫ್‌ ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಅವರು ಬಡಕುಟುಂಬದವರಾಗಿದ್ದು ಮನೆಯ ಆಧಾರಸ್ತಂಭವಾಗಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.