ಪಿಒಎಸ್‌ ಯಂತ್ರವನ್ನು ಸರಕಾರವೇ ಒದಗಿಸಲಿ


Team Udayavani, May 10, 2017, 11:14 AM IST

10-REPORT-4.jpg

ಮಂಗಳೂರು: ಪಡಿತರ ವಿತರಣೆಗೆ ಸರಕಾರ ಜಾರಿಗೆ ತಂದಿದ್ದ ಕೂಪನ್‌ ವ್ಯವಸ್ಥೆ ಅವೈಜ್ಞಾನಿಕ ಎಂಬ ಹಿನ್ನೆಲೆಯಲ್ಲಿ ಪರ್ಯಾಯವಾಗಿ ಪಿಒಎಸ್‌ ಯಂತ್ರ ಅಳವಡಿಕೆ ಪಡಿತರ ವಿತರಕರಿಗೆ ಹೊರೆಯಾಗಿದೆ. ಅದನ್ನು ಸರಕಾರವೇ ಒದಗಿಸಬೇಕು ಎಂದು ಪಡಿತರ ವಿತರಕರ ಮತ್ತು ನೌಕರರ ಸಂಘದ ಮಂಗಳೂರು ವಿಭಾಗ ಆಗ್ರಹಿಸಿದೆ.

ಸಂಘದ ಅಧ್ಯಕ್ಷ ಕೇಶವ ಮೂರ್ತಿ ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಕೂಪನ್‌ ವ್ಯವಸ್ಥೆಯಿಂದ ಪಡಿತರ ವಿತರಕರು ಹಾಗೂ ಗ್ರಾಹಕರು ಅನೇಕ ತೊಂದರೆ ಅನುಭವಿಸಿದ್ದಾರೆ. ಈಗ ಮತ್ತೆ ಪಿಒಎಸ್‌ ಯಂತ್ರ ಅಳವಡಿಕೆಗೆ ಸರಕಾರ ಆಗ್ರಹಿಸುವ ಮೂಲಕ ವಿತರಕರ ಜೇಬಿಗೆ ಕತ್ತರಿ ಹಾಕುವ ಕಾರ್ಯ ನಡೆಸುತ್ತಿದೆ ಎಂದು ಆಪಾದಿಸಿದರು.

ಸಾಧಕ-ಬಾಧಕ ನೋಡಿ
ಸರಕಾರ ಈ ಯೋಜನೆಯನ್ನು ಪೈಲಟ್‌ ರೀತಿಯಲ್ಲಿ ಆರಂಭಿಸಿ ಅದರ ಸಾಧಕ-ಬಾಧಕಗಳನ್ನು ಅರಿತ ಬಳಿಕವಷ್ಟೇ ಸಂಪೂರ್ಣ ಅನುಷ್ಠಾನಕ್ಕೆ ಮುಂದಾಗಬೇಕು. ಸರಕಾರವೇ ಈ ವ್ಯವಸ್ಥೆ ಒದಗಿಸಬೇಕು ಎಂದರು. ಪಿಒಎಸ್‌ ಯಂತ್ರ ಕಾರ್ಯಾಚರಿಸಲು ನ್ಯಾಯ ಬೆಲೆ ಅಂಗಡಿಯ ಮಾಲಕರ ಬೆರಳಚ್ಚು ಅಗತ್ಯ. ಇದರಿಂದ ಅಂಗಡಿ ಮಾಲಕರು ಅಂಗಡಿ ಬಿಟ್ಟು ಹೋಗುವಂತಿಲ್ಲ. ಮಾಲಕರು ಸೂಚಿಸುವ ಇನ್ನೊಬ್ಬ ವ್ಯಕ್ತಿಗೂ ಇದು ಅನ್ವಯವಾಗುವಂತೆ ಮಾಡಧಿಬೇಕು ಎಂದರು.

ಗ್ರಾ.ಪಂ. ವ್ಯಾಪ್ತಿಯಲ್ಲಿ ಪಡಿತರ ವಿತರಣೆಗೆ ಬಯೋಮೆಟ್ರಿಕ್‌ ವ್ಯವಸ್ಥೆ ಅಳವಡಿಸಲು ಸೂಚಿಸಲಾಗಿದೆ. ಅದಕ್ಕೆ ಸುಮಾರು 10,000 ರೂ. ವೆಚ್ಚವಾಗಲಿದೆ. ಅದನ್ನು ಖರೀದಿ ಮಾಡುವಷ್ಟು ಲಾಭಾಂಶ ವಿತರಕರಿಗೆ ಇಲ್ಲ ಎಂದು ಸಂಘದ ಮಂಗಳೂರು ಗ್ರಾಮಾಂತರ ಪ್ರದೇಶದ ಅಧ್ಯಕ್ಷ ಶಿವರಾಮ ಮಲ್ಲಿ ತಿಳಿಸಿದರು. ಭಾಸ್ಕರ್‌ ಸಾಲಿಯಾನ್‌, ಶೇಖರ್‌ ಅಮೀನ್‌, ಫೈರೋಝ್ ಡಿ.ಎಲ್‌. ಉಪಸ್ಥಿತರಿದ್ದರು.

ರಗಳೆಯೇ ಬೇಡ !
ಕೂಪನ್‌ ವ್ಯವಸ್ಥೆ, ಪಿಒಎಸ್‌ ಯಂತ್ರ ಅಳವಡಿಕೆ ಗೊಂದಲದಿಂದ ಈಗಾಗಲೇ ಮಂಗಳೂರು ನಗರದ 70 ಮಂದಿ ಪಡಿತರ ವಿತರಕರಲ್ಲಿ 10 ಮಂದಿ ಈ ಕಾರ್ಯವನ್ನೇ ಬಿಟ್ಟಿದ್ದಾರೆ. ಮತ್ತೆ 8 ಮಂದಿ ಬಿಡುವುದಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಕೇಶವ ಮೂರ್ತಿ ಮತ್ತು ಶಿವರಾಮ ಮಲ್ಲಿ ಅವರು ತಿಳಿಸಿದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.