ಕರಾವಳಿ: ಇಂದಿನಿಂದ ನಿರಂತರ ಮಳೆ?


Team Udayavani, May 29, 2017, 10:37 AM IST

Rain-Photo-600.jpg

ಮಂಗಳೂರು/ಉಡುಪಿ: ಕರಾವಳಿಯಲ್ಲಿ ಸೋಮವಾರದಿಂದ ನಿರಂತರ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರ್‍ನಾಲ್ಕು ದಿನ ಕರಾವಳಿಯ ವಿವಿಧೆಡೆ ಗಾಳಿ, ಗುಡುಗು ಸಹಿತ ಉತ್ತಮ ಮಳೆಯಾಗಲಿದೆ. ಮೇ 30ರ ವೇಳೆ ಮುಂಗಾರು ಕೇರಳ ಪ್ರವೇಶಿಸಲಿದೆ. ಜೂನ್‌ 1-2ರ ನಡುವೆ ಕರ್ನಾಟಕ ಕರಾವಳಿ ಪ್ರವೇಶಿಸುವ ನಿರೀಕ್ಷೆ ಇದೆ ಎಂದು ಹವಾಧಿಮಾನ ಇಲಾಖೆಯ ಮೂಲಗಳು ತಿಳಿಸಿವೆ.

ದ.ಕ., ಉಡುಪಿ, ಮೈಸೂರು, ಮಂಡ್ಯ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಧಿಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂಗಾರು ಮಳೆ ತರುವ ನೈಋತ್ಯ ಮಾರುತಗಳು ಈ ಹಿಂದೆ ತಿಳಿಸಿರುವಂತೆಯೇ ನಿರ್ದಿಷ್ಟ ಪಥದಲ್ಲಿ ಸಾಗುತ್ತಿವೆ. ಈ ನಡುವೆ ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದು ಕೂಡ ಮುಂಗಾರಿಗೆ ಪೂರಕವಾಗಿದೆ ಎಂದು ಇಲಾಖೆ ತಿಳಿಸಿದೆ. ಮುಂಗಾರು ಮಾರುತವು ಪ್ರಸ್ತುತ ಬಂಗಾಲ ಕೊಲ್ಲಿಯಲ್ಲಿದೆ. ಮುಂದಿನ 24 ಗಂಟೆಗಳಲ್ಲಿ ಮಾರುತವು ಮಾಲ್ದೀವ್ಸ್‌, ಅರಬಿ ಸಮುದ್ರವನ್ನು ಪ್ರವೇಶಿಸಲಿದೆ. ಅನಂತರ ಕೇರಳ ಪ್ರವೇಶಿಸುವುದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಲ ಕೊಲ್ಲಿಯಲ್ಲಿ ಚಂಡಮಾರುತ
ಬಂಗಾಲಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅದು 24 ಗಂಟೆಗಳಲ್ಲಿ ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಅನಂತರ ಇನ್ನಷ್ಟು ತೀವ್ರಗೊಂಡು ತೀವ್ರ ಚಂಡಮಾರುತವಾಗಿ ಬದಲಾಗುವ ಸಂಭವವೂ ಇದೆ. ಚಂಡಮಾರುತವು ಮುಂಗಾರಿಗೆ ಪೂರಕವಾಗಿಯೇ ಇದೆ ಎಂದು ಇಲಾಖೆ ತಿಳಿಸಿದೆ.

ಸುಳ್ಯ, ಕಡಬ, ಸುಬ್ರಹ್ಮಣ್ಯ: ಉತ್ತಮ ಮಳೆ
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ರವಿವಾರ ಮಳೆಯಾಗಿದೆ. ಬೆಳ್ತಂಗಡಿಯಲ್ಲಿ ಶನಿವಾರ ರಾತ್ರಿ ಮಳೆಯಾಗಿದೆ. ಮಡಂತ್ಯಾರಿನಲ್ಲಿ ತುಂತುರು ಮಳೆ ಕಾಣಿಸಿಕೊಂಡು ಬಳಿಕ ಗುಡುಗು – ಮಿಂಚು ಕೂಡಿದ ಮಳೆಯಾಗಿತ್ತು. ಇನ್ನು ಸುರತ್ಕಲ್‌, ಬಂಟ್ವಾಳದಲ್ಲಿ ತುಂತುರು ಮಳೆಯಾಗಿದ್ದರೆ, ಸುಳ್ಯ, ಕಡಬ, ಸುಬ್ರಹ್ಮಣ್ಯದಲ್ಲಿ ವರ್ಷಧಾರೆಯಾಗಿದೆ. ಪುತ್ತೂರಿನಲ್ಲಿ ಗುಡುಗು-ಸಿಡಿಲು ಸಹಿತ ಜೋರಾಗಿ ಮಳೆಯಾಗಿದೆ. ಬಜಪೆಯಲ್ಲಿ ಮೋಡ ಕವಿದ ವಾತಾವರಣವಿತ್ತು. ಕಾರ್ಕಳದಲ್ಲಿ ರವಿವಾರ ಬೆಳಗ್ಗೆ ಸಾಧಾರಣ ಮಳೆಯಾದರೆ ಉಡುಪಿಯ ಕೆಲವೆಡೆ ಮಧ್ಯಾಹ್ನದ ವೇಳೆಗೆ ಮಳೆ ಹನಿದಿದೆ.

ಗೋಪಾಲನಗರ: 9 ಸೆಂ.ಮೀ. ಮಳೆ
ಬೆಂಗಳೂರು:
ರವಿವಾರ ಮುಂಜಾನೆ 8.30ರ ವರೆಗಿನ 24 ತಾಸುಧಿಗಳ ಅವಧಿಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಕೆಲವೆಡೆ, ಉತ್ತರ ಒಳನಾಡು ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಮಳೆಯಾಯಿತು. ಬೆಂಗಳೂರು ನಗರ ಜಿಲ್ಲೆಯ ಗೋಪಾಲನಗರದಲ್ಲಿ ರಾಜ್ಯದಲ್ಲಿಯೇ ಅಧಿಕವೆನಿಸಿದ 9 ಸೆಂ.ಮೀ. ಮಳೆ ಸುರಿಯಿತು. 

ಇದೇ ಅವಧಿಯಲ್ಲಿ ರಾಜ್ಯದ ವಿವಿಧೆಡೆ ಬಿದ್ದ ಮಳೆಯ ಪ್ರಮಾಣ ಹೀಗಿತ್ತು (ಸೆಂ.ಮೀ.ಗಳಲ್ಲಿ):
ಬಸರಾಳು, ಯಲಹಂಕ ತಲಾ 5, ದುಡ್ಡ, ಕೆ.ಆರ್‌. ಸಾಗರ, ಬೆಂಗಳೂರು ನಗರ, ಬೆಂಗಳೂರು ಎಚ್‌.ಎ.ಎಲ್‌. ವಿಮಾನ ನಿಲ್ದಾಣ ತಲಾ 4, ಹೆಸರಘಟ್ಟ, ಜಿಕೆವಿಕೆ ತಲಾ 3, ಟಿ.ನರಸೀಪುರ, ಶ್ರೀರಂಗಪಟ್ಟಣ, ಹೊನಕೆರೆ, ಬೆಂಗಳೂರು ಕೆಐಎಎಲ್‌ ವಿಮಾನ ನಿಲ್ದಾಣ, ಕೊಳ್ಳೇಗಾಲ, ಹೊಸ್ಕೋಟೆ, ನೆಲಮಂಗಲ, ಮಾಗಡಿ ತಲಾ 2, ಯೆಳಂದೂರು, ಮಳವಳ್ಳಿ, ಮದ್ದೂರು ತಲಾ 1.

ದಕ್ಷಿಣ ಒಳನಾಡಿನ ಹಲವೆಡೆ ಗರಿಷ್ಠ ತಾಪಮಾನದಲ್ಲಿ ಇಳಿಕೆಯಾದರೆ ಕರಾವಳಿಯ ಹಲವೆಡೆ ಮತ್ತು ಉತ್ತರ ಒಳನಾಡಿನ ಕೆಲವೆಡೆ ಸಾಮಾನ್ಯಕ್ಕಿಂತ ಹೆಚ್ಚಾಗಿತ್ತು. ಕಲಬುರಗಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠವೆನಿಸಿದ 41.3 ಡಿ.ಸೆ. ತಾಪಮಾನ ದಾಖಲಾಯಿತು.

ಟಾಪ್ ನ್ಯೂಸ್

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

kejriwal 2

AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.